Advertisement

Tag: Novel

ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಕೆಲವು ಪುಟಗಳು

ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ ಬಾಕ್ಸ್‌ ಮುಚ್ಚಳವನ್ನು ಹಲ್ಲುಗಳನ್ನೆಟ್ಟಿ ತೆಗೆಯುತ್ತಿದ್ದಳು. ಅಸೆಂಬ್ಲಿನಲ್ಲಿ ಆಕಳಿಸುವಾಗ ತುಟಿ ಹರಿಯುವಷ್ಟು ಅಗಲ ಬಾಯಿ ತೆರೆಯುತ್ತಿದ್ದಳು. ಕಿರುನಾಲಗೆಯಿಂದ ಎಂಜಲನ್ನು ಮೋಟಾರಿನಂತೆ ಹಾರಿಸುತ್ತಿದ್ದಳು. ಇಡೀ ಕ್ಲಾಸಿಗೆ ರಾಣಿ, ರೌಡಿ ಎರಡೂ ಆಗಿದ್ದಳು. ಶರತ್‌ಗೆ ಆಳದಲ್ಲಿ ಅವಳೆಂದರೆ ಭಯ. ತಾನು ಸುಮ್ಮನಿದ್ದರೂ ಆಗಿತ್ತು; ಇಂಥಾ ಬಜಾರ್‌ಗಿತ್ತಿಯನ್ನು ಕೆಣಕಿ ʼಕಳ್ಳʼ ಅನ್ನಿಸ್ಕೊಳಂಗಾಯ್ತಲ್ಲ ಎಂದು ಕೈಹಿಸುಕಿಕೊಂಡ.
ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ರೋಸೀ ಮತ್ತು ಪೂರ್ವಜರ ಸಮಾಧಿಗಳು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ರೋಸೀ ಇದ್ದ ವಾಹನ ನೇರವಾಗಿ ಮಾರಿಕುಪ್ಪಮ್ ದಾಟಿ ಅರ್ಧ ಕಿಲೋಮೀಟರ್ ದೂರ ದಕ್ಷಿಣಕ್ಕೆ ಸಾಗಿ ದೊಡ್ಡದಾದ ಮತ್ತು ಎತ್ತರವಾದ ಗಣಿ ತ್ಯಾಜ್ಯದ ಗುಡ್ಡವನ್ನು ಸುತ್ತಾಕಿಕೊಂಡು ಪೂರ್ವಕ್ಕೆ ತಿರುಗಿ ಲಕ್ಷ್ಮೀಸಾಗರ ರಸ್ತೆಯಲ್ಲಿ ಒಂದು ಕಿ.ಮೀಟರ್ ದೂರ ಸಾಗಿ ರಸ್ತೆಯಲ್ಲಿ ನಿಂತುಕೊಂಡಿತು. ರೋಸೀ ಜೊತೆಗಿದ್ದ ಮಣಿ ವಾಹನದಿಂದ ಕೆಳಕ್ಕಿಳಿದು ವಾಹನದ ಬಾಗಿಲು ತೆರೆದು ರೋಸೀಯನ್ನು ಕೆಳಕ್ಕೆ ಇಳಿಯಲು ಸಹಾಯ ಮಾಡಿದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಕಲ್ಲುಬಂಡೆ ಮೇಲೆ ಕುಳಿತಿದ್ದ ಸೆಲ್ವಂ, ಸತ್ತುಹೋದನು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿಗೂ ಅವರು ಹೇಳುವುದು ಸರಿ ಎನಿಸಿತು. ತಾಯಿ ಮತ್ತು ತಂಗಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಒಂದೇ ದಿನದಲ್ಲಿ ಮಣಿಯ ಹೆಗಲಿಗೆ ಜಾರಿಬಿದ್ದಿತ್ತು. ಸುಮತಿಯ ಮದುವೆಯನ್ನೂ ಮಾಡಬೇಕಾಗಿತ್ತು. ಕಾರ್ಮಿಕ ಮುಖಂಡರು, ಮಣಿ ಮತ್ತು ಕನಕಳಿಗೆ ಸಾಂತ್ವನ ಹೇಳಿ ಮಣಿಗೆ ಕೆಲಸಕ್ಕೆ ಅರ್ಜಿ ಹಾಕಲು ಎಲ್ಲ ಕಾಗದ ಪತ್ರಗಳನ್ನು ಬೇಗನೆ ತಯಾರುಮಾಡಿ ಕೊಡುವಂತೆ ಹೇಳಿ ಹೊರಟುಹೋದರು. ಆರ್ಮುಗಮ್, ಮಣಿಗೆ ಆದಷ್ಟು ಬೇಗನೆ ಕೆಲಸ ಮಾಡಿಕೊಡುವಂತೆ ಅಯ್ಯಪ್ಪನಿಗೆ ಹೋಗುವ ಮುಂಚೆ ಕೇಳಿಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

‘ಈ ಮಾತು ಚರ್ಚೆಗೆ ಬರದೆ ಹೋಗಿದ್ರ ನಾನು ಈ ಸುಳ್ಳು ಹೇಳಬಹುದಿತ್ತು ಪೂಣ, ಈಗ ಎಲ್ಲಾನೂ ಒಪ್ಗೊಂಡ ಮ್ಯಾಲ ಮತ್ತ ಅದೇ ಸುಳ್ಳನ್ನ ಆರಂಭದಿಂದ ಹೇಳು ಅಂದ್ರ ಹೇಳಾಕ ಆಗೂದಿಲ್ಲ. ಏನು ಶಿಕ್ಷೆ ಕೊಡ್ತೀಯೊ ಕೊಡು. ನಾ ನಿನ್ನ ಪ್ರೀತಿಸ್ತೀನಿ ಅನ್ನೂದು ಖರೆ, ಅದೇ ಅಂತಿಮ. ನೀ ಸಿಕ್ರೂ ಸರಿ, ಸಿಗಲಿಲ್ಲ ಅಂದ್ರೂ ಸರಿ. ಜೀವನಪೂರ್ತಿ ನಿನ್ನ ನೆನಪಿನ್ಯಾಗ ಸಾಗಿಸುವಷ್ಟು ಸುಂದರ ಕ್ಷಣಗಳನ್ನ ಕಳದೀನಿ ನಿನ್ನ ಜೋಡಿ, ಅವೇ ಸಾಕು’.
ಪತ್ರಕರ್ತೆ ಸುಶೀಲಾ ಡೋಣೂರ ಹೊಸ ಕಾದಂಬರಿ “ಪೀಜಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ