Advertisement

Tag: Novel

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

Read More

ʼನೀರಿನೊಳಗಿನ ಮಂಜುʼ ಕಾದಂಬರಿಯ ಕೆಲವು ಪುಟಗಳು

ಮದುವೆಯಾಗುವಾಗ ಜಯಂತಿ ಕುಲಕರ್ಣಿ ರಾಂಪುರದ ಒಂದು ಹೈಸ್ಕೂಲಿನಲ್ಲಿ ಕನ್ನಡ ಟೀಚರಾಗಿದ್ದಳು. ಅದು ಖಾಸಗಿ ಹೈಸ್ಕೂಲಾಗಿದ್ದುದರಿಂದ ಸಂಬಳವೆನ್ನುವುದು ‘ನಾಮ್ಕಾವಸ್ಥೆ’ಯದಾಗಿತ್ತು. ಎಂ.ಎ ಓದಿ ಮನೆಯಲ್ಲಿ ಸುಮ್ಮನೇ ಕುಳಿತುಕೊಳ್ಳುವುದಕ್ಕಿಂತ ಹವ್ಯಾಸದ ಥರ ಪಾಠವನ್ನಾದರೂ ಮಾಡಿ ‘ಟೈಂಪಾಸ್’ ಮಾಡಬಹುದು ಎಂಬಂತೆ ಆಕೆ ಹೈಸ್ಕೂಲಲ್ಲಿ ದುಡಿಯುತ್ತಿದ್ದಳು. ಬಸವೇಶ್ವರ ಕಾಲೇಜಿನಲ್ಲಿರುವ ಸತೀಶ್ ಕುಲಕರ್ಣಿ ಇಂಗ್ಲೀಷ್ ಲೆಕ್ಚರರ್ ಆಗಿದ್ದಾರೆ ಎಂಬುದರಿಂದ ಮದುವೆಯ ಪೂರ್ವದಲ್ಲೇ ಆಕೆ ತಾನೂ ಆ ಕಾಲೇಜಿನಲ್ಲಿ ಸೇರಬೇಕೆಂಬ ಕನಸು ಕಂಡಿದ್ದಳು.
ಡಾ. ನಾ. ಮೊಗಸಾಲೆಯವರ “ನೀರಿನೊಳಗಿನ ಮಂಜು” ಹೊಸ ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಸ್ತ್ರೀ ಸಂವೇದನೆಯ ಸರಳ ನಿರೂಪಣೆ

ಮಹಾಭಾರತದ ಪ್ರಮುಖ ಪಾತ್ರವಾದ ಗಾಂಧಾರಿಯ ದುಗುಡ, ಯಾತನೆ, ಮನದ ಅಂತರಂಗವನ್ನು ಸುಂದರವಾಗಿ ಅಭಿವ್ಯಕ್ತಿಸುವ ಅದ್ಭುತ ಪುಸ್ತಕವನ್ನು ಹೊರತರುತ್ತಿದ್ದಾರೆ. ಪುರಾಣಪ್ರಿಯರಾದವರಿಗೆ “ಗಾಂಧಾರಿ “ಎಂಬ ಆ ವಿಶಿಷ್ಟ ಭೂಮಿಕೆಯನ್ನು ಲೇಖಕಿ ದಿವ್ಯಾ ಹೇಗೆ ಪ್ರಸ್ತುತಪಡಿಸಿರಬಹುದು ಎಂಬ ಕುತೂಹಲವಿದೆ. ಅವರ ಕುತೂಹಲಕ್ಕೆ ತಣ್ಣೀರೆರಚದೇ ಅದ್ಭುತವಾಗಿ “ಮಿಂಚದ ಮಿಂಚು ” ಮೂಡಿ ಬಂದಿದೆ. ಸಾಮಾನ್ಯವಾಗಿ ಗಾಂಧಾರಿ ಮಹಾಭಾರತದಲ್ಲಿ ದುರಂತ ನಾಯಕಿಯಾಗಿ, ನಿಸ್ಸಹಾಯಕ ಮತ್ತು ಹತಾಶ ವ್ಯಕ್ತಿತ್ವದವಳಾಗಿ ಕಾಣಸಿಗುತ್ತಾಳೆ. ಅದನ್ನು ದಿವ್ಯಾ ತೆರಿದಿರಿಸಿದ ಬಗೆ ಅನನ್ಯ. ದಿವ್ಯಾಶ್ರೀಧರ್  ರಾವ್ ಅವರ ಹೊಸ ಕಿರುಕಾದಂಬರಿಗೆ ಜಗದೀಶ್ ಶೆಟ್ಟಿ ಬರೆದ ಮುನ್ನುಡಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ