Advertisement

Tag: play

ನಾಟಕರಂಗದ ತಮಾಷೆ ಪ್ರಸಂಗಗಳು: ಚಿತ್ರಾ ವೆಂಕಟರಾಜು ಸರಣಿ

ಬರುವಾಗ ಸುಳ್ಯ, ಪುತ್ತೂರಿನ ಸಮೀಪ ಬೆಳಗಿನ ಜಾವ ಸುಮಾರು ೪ ಗಂಟೆಗೆ ಮೂತ್ರವಿಸರ್ಜನೆಗಾಗಿ ಗಾಡಿ ನಿಲ್ಲಿಸಿದರು. ನಂತರ ಹೊರಟು ಇನ್ನೇನು ಮೈಸೂರು ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಸಂಪೂರ್ಣ ಎ‍ಚ್ಚರವಾಯಿತು. ಇದ್ದಕ್ಕಿದ್ದಂತೆ ಯಾರೋ ‘ರಾಜಪ್ಪ ಎಲ್ಲಿ’ ಅಂತ ಕೇಳಿದರು. ಟೆಂಪೋ ಎಲ್ಲಾ ಹುಡುಕಿದರೂ ರಾಜಪ್ಪ ಇಲ್ಲ. ಎಲ್ಲಿ ಬಿಟ್ಟು ಬಂದ್ವಿ ಗೊತ್ತಿಲ್ಲ. ಅವರು ಪಾಪ ಒಂದು ಪಟಾಪಟಿ ಲುಂಗಿ ಬನಿಯನ್ ಮತ್ತು ಟವೆಲ್ ಸುತ್ತಿಕೊಂಡು ಇಳಿದವರು ವಾಪಸ್ ಬರುವ ಹೊತ್ತಿಗೆ ಟೆಂಪೋ ಹೊರಟಾಗಿತ್ತು. ಕಾಲಲ್ಲಿ ಚಪ್ಪಲಿಯೂ ಇಲ್ಲದಂತೆ ಯಾರದ್ದೋ ಸಹಾಯ ಕೇಳಿ ಕೊನೆಗೆ ಚಾಮರಾಜನಗರದಲ್ಲಿ ಕಾಣಿಸಿಕೊಂಡರು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಸೃಜನಶೀಲತೆಯ ಬೆಳಕಿನಲ್ಲಿ ವಿಜ್ಞಾನವೂ ಸಿದ್ಧಾಂತವೂ

ತನ್ನ ಬಾಲ್ಯದ ಧಾರ್ಮಿಕತೆಯ ತತ್ತ್ವವು ವಸ್ತುನಿಷ್ಠವಾಗಿ ಸಂಶೋಧನೆ ನಡೆಸಬೇಕಾದ ವಿಜ್ಞಾನಿಯ ದೃಷ್ಟಿಯನ್ನು ಪ್ರಭಾವಿಸುತ್ತದೆಯೆ? ಅದರಿಂದಾಗಿ ಕೆಲವೊಮ್ಮೆ ಧನಾತ್ಮಕ, ಇನ್ನು ಕೆಲವೊಮ್ಮೆ ಋಣಾತ್ಮಕ ಫಲಿತಾಂಶಗಳಿಗೆ, ವಾಸ್ತವದಿಂದ ದೂರವಾದ ಸಿದ್ಧಾಂತಗಳಿಗೆ ಅದು ಎಡೆಮಾಡಿಕೊಡಬಹುದೆ ಎಂಬ ಪ್ರಶ್ನೆಗಳನ್ನು ಪದರ ಪದರವಾಗಿ ಬಿಡಿಸಿಡುವ ನಾಟಕವಿದು. ನಿರ್ದೇಶನ  ಅತ್ಯಂತ ಪರಿಣಾಮಕಾರಿಯಾದುದು. ದೇಹಭಾಷೆ ಮತ್ತು ಧ್ವನಿಯ ಏರಿಳಿತಗಳ ಮೂಲಕ ಸಲಾಂ ಅವರ ಹತಾಶೆ, ನೋವುಗಳನ್ನು ಅಭಿವ್ಯಕ್ತಿಸುವಲ್ಲಿ ನಿರ್ದೇಶಕರು ಗೆದ್ದಿದ್ದಾರೆ. ‘ಅಬ್ದುಸ್ ಸಲಾಮ್ ಅವರ ವಿಚಾರಣೆ’ ನಾಟಕದ ಕುರಿತು ಡಾ. ಸುದರ್ಶನ ಪಾಟೀಲಕುಲಕರ್ಣಿ ಬರಹ

Read More

‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

“ಒಮ್ಮೆ ಹೀಗೇ ಧುತ್ತನೆ ಎದುರಾದಿರಿ. ನಿಮ್ಮ ಕಣ್ಣುಗಳಲ್ಲಿ ಒಂದಿಷ್ಟು ಮುಜುಗರ ಇರುತ್ತದೆ ಎಂದು ನಿಮ್ಮ ಕಣ್ಣುಗಳನ್ನೇ ನೋಡಿದ್ದೆ. ನಿಮ್ಮನ್ನ ಕಾಣುವಾಗ ನಾನು ಕೊಂಚ ಅಳುಕಿದ್ದೆ ಅಷ್ಟೇ. ನೀವು ಆರಾಮಾಗೇ ಇದ್ದಿರಿ. ನನ್ನನ್ನ ಕಂಡಿದ್ದೇ ‘ಹೋ ಮಹೇಶ್ ಅವ್ರು.. ಬನ್ನಿ ಕಾಫಿ ಕುಡಿಯೋಣ..’ ಅಂತ ಕರೆದುಕೊಂಡು ಕಲಾಕ್ಷೇತ್ರದ ಹಿಂಬದಿಯ ಕ್ಯಾಂಟಿನ್ ಗೆ ನಡೆದಿರಿ. ನಗುನಗುತ್ತ ಮಾತಾಡಿದಿರಿ. ನನ್ನ ವಿಮರ್ಶೆ ಮಲಗಿತ್ತು ಎನ್ನುವುದು ನನಗೆ ಅವತ್ತೇ ಗೊತ್ತಾಗಿದ್ದು.
ಎನ್.ಸಿ. ಮಹೇಶ್‌ ಬರೆದ ‘ರಂಗ ವಠಾರ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ