ಕಣ್ಣ ಮುಂದೆ ಕುಳಿತ ಸಾವು ಕರಗಿತ್ತು..: ರಂಜಾನ್‌ ದರ್ಗಾ ಸರಣಿ

ರಹಮಾನ್ ಖಾನ್ ಅದೇನೋ ಹೇಳಿದ. ನಂತರ ನನಗೆ ಮಾತನಾಡಲು ತಿಳಿಸಿದ. ಅದು ನನ್ನ ಕೊನೆಯ ಭಾಷಣ ಎಂದು ಭಾವಿಸಿದೆ. ಬದುಕುಳಿಯುವ ಯಾವ ಸಾಧ್ಯತೆಯೂ ಇಲ್ಲ ಎನಿಸಿತು. ಅವರೆಲ್ಲ ‘ಏನು ಮಾತನಾಡ್ತಿಯೋ ನೋಡೋಣ’ ಎಂದು ಅಂದುಕೊಂಡವರ ಹಾಗೆ ಕುಳಿತಿದ್ದರು. ಅಂದೇ ಪ್ರಕಟವಾದ ಸಾಪ್ತಾಹಿಕ ಪುರವಣಿಯ ಪ್ರತಿ ಕೈಯಲ್ಲಿತ್ತು. ಆ ನನ್ನ ಲೇಖನ ಇಡೀ ಮುಖಪುಟ ತುಂಬಿತ್ತು. ಮೇಲೆ ಕೆಂಪು ಬಣ್ಣದಲ್ಲಿ ಕಲಾವಿದ ಸೂರಿ ಬರೆದ ಮುಸ್ಲಿಂ ಮಹಿಳೆಯ ಚಿತ್ರ ಲೇಖನದಲ್ಲಿನ ನೋವಿಗೆ ಪೂರಕವಾಗಿದ್ದು ಹೃದಯಸ್ಪರ್ಶಿಯಾಗಿತ್ತು.  ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More