Advertisement

Tag: Rajalakshmi N Rao

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ

Read More

ಹೂದೋಟದ ಹೂಗಳಂಥಾ “ಸಂಗಮ”

‘ಸಂಗಮ’ ಕಥಾ ಸಂಕಲನದಲ್ಲಿ ನನಗೆ ಬಹಳ ಇಷ್ಟವಾಗಿದ್ದು ಕತೆಗಳಿಗೆ ಆಯ್ದುಕೊಂಡಿರುವ ಶೀರ್ಷಿಕೆಗಳು. ಓದಿದ ತಕ್ಷಣ ಕತೆಯ ಬಗ್ಗೆ ಯಾವ ತರಹದ ಸುಳಿವನ್ನೂ ಬಿಟ್ಟು ಕೊಡುವುದಿಲ್ಲ ಅವು. ಆ ಶೀರ್ಷಿಕೆ ಯಾಕೆ ಎಂದು ತಿಳಿಯಬೇಕಿದ್ದರೆ ನೀವು ಇಡೀ ಕತೆಯನ್ನು ಓದಬೇಕು. ಉದಾಹರಣೆಗೆ ಎರಡನೇಯ ಕತೆ ‘ಮೈ ದಾಸ್’ ಅನ್ನೇ ತೆಗೆದುಕೊಳ್ಳಿ. ಊಹುಂ.. ನೀವು ಗೆಸ್ ಮಾಡಲಿಕ್ಕೆ ಸಾಧ್ಯವೇ ಇಲ್ಲ. ಮುಟ್ಟಿದೆಲ್ಲವೂ ಚಿನ್ನ ಎಂಬ ಗಾದೆ ಮಾತಿದೆಯಲ್ವ.. ಅದನ್ನು ನಿಜವಾಗಿಯೂ ಸಾಧ್ಯವಾಗಿಸಲು ಯತ್ನಿಸುವ ವೈಜ್ಞಾನಿಕ ಸಂಶೋಧಕನ ಕತೆ.
ರಾಜಲಕ್ಷ್ಮಿ ಎನ್.‌ ರಾವ್‌ ಅವರ “ಸಂಗಮ” ಕಥಾಸಂಕಲನದ ಕುರಿತು ಸಂಜೋತಾ ಪುರೋಹಿತ್‌ ಬರಹ

Read More

ಕಿನ್ನರಿ…

ಯಾವ ಪ್ರಚಾರವನ್ನೂ ಒಲ್ಲದ ತಮ್ಮ ಪಾಡಿಗೆ ತಾವಿರುವ ಈ ತಪಸ್ವಿನಿ ತಮ್ಮ ಪೂರ್ವಾಶ್ರಮದಲ್ಲಿ ಒಬ್ಬ ಶ್ರೇಷ್ಠ ಸಾಹಿತಿಯೂ ಆಗಿದ್ದರು. ನಾನು ಇವರ ಅದ್ಭುತ ವ್ಯಕ್ತಿತ್ವದ ಬಗ್ಗೆ ಬರೆದ ಒಂದು ಲೇಖನ ಇವರಿಗೆ ಮುಜುಗರ ತಂದಿತ್ತು. ಅಸಮಾಧಾನಕ್ಕೆ ಕಾರಣವಾಗಿತ್ತು. ಇಂತಹವರನ್ನು ಭೇಟಿ ಮಾಡಿಸಬೇಕೆಂದೂ ಅವರ ಸಮ್ಮುಖದಲ್ಲಿ ಒಂದು ಪತ್ರಿಕಾ ಸಭೆಯನ್ನು ಕರೆಯಬೇಕೆಂದೂ ನನ್ನ ಪರಿಚಯದ ಸಾಹಿತಿಯೊಬ್ಬರು ನನಗೆ ಬಹಳ ದಿನಗಳಿಂದ ದುಂಬಾಲು ಬಿದ್ದಿದ್ದರು. ಯಾರಿಗೂ ತಿಳಿಯದಂತೆ ಅಜ್ಞಾತವಾಗಿ ಬದುಕುತ್ತಿರುವ ಇವರನ್ನು ನಾನು ಒಮ್ಮೆ ಭೇಟಿಯಾಗಿ ಬಂದಿದ್ದುದೇ ಇದಕ್ಕೆ ಕಾರಣವಾಗಿತ್ತು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

ರಾಜಲಕ್ಷ್ಮಿ ಎನ್. ರಾವ್ ಅವರನ್ನು ಅವರ ಕತೆಗಳ ಮೂಲಕ ಪರಿಚಯ ಮಾಡಿಕೊಂಡು ಸುಮಾರು ಮೂವತ್ತು ವರುಷಗಳ ಮೇಲಾಯಿತು. ನನ್ನ ಅಧ್ಯಯನ ಮತ್ತು ವೆಂಕಟಲಕ್ಷ್ಮಿಯವರ ಸಂದರ್ಶನದ ಒಟ್ಟು‌ ಮೊತ್ತವಾಗಿ ನಾನು ಕಂಡುಕೊಂಡ ಕತೆಗಾರ್ತಿ ರಾಜಲಕ್ಷ್ಮಿಯವರು ಬೆರಗು ಹುಟ್ಟಿಸಿದರು. ಸುಮಾರು ಹತ್ತು ಹನ್ನೆರೆಡು ವರ್ಷಗಳ ಹಿಂದೆ ಸನ್ಯಾಸಿನಿಯಾದ ಅವರನ್ನು ನಾನು ಅವರ ಆಶ್ರಮದಲ್ಲಿ ಭೇಟಿಯಾದಾಗ ಆ ಬೆರಗು ಬೆಳಕಾಗಿ ನನ್ನ ಮುಂದೆ ನಿಂತಿತ್ತು. ಆ ಬೆಳಕು ಈಗ ವಿಸ್ಮಯವಾಗಿದೆ.
ಗಿರಿಜಾ ಶಾಸ್ತ್ರಿ ಬರೆಯುವ ಸರಣಿ “ಆ ಕಾಲದ ರಾಜಲಕ್ಷ್ಮಿ” ಪ್ರತಿ ಶುಕ್ರವಾರದಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ