ಹೂದೋಟದ ಹೂಗಳಂಥಾ “ಸಂಗಮ”

‘ಸಂಗಮ’ ಕಥಾ ಸಂಕಲನದಲ್ಲಿ ನನಗೆ ಬಹಳ ಇಷ್ಟವಾಗಿದ್ದು ಕತೆಗಳಿಗೆ ಆಯ್ದುಕೊಂಡಿರುವ ಶೀರ್ಷಿಕೆಗಳು. ಓದಿದ ತಕ್ಷಣ ಕತೆಯ ಬಗ್ಗೆ ಯಾವ ತರಹದ ಸುಳಿವನ್ನೂ ಬಿಟ್ಟು ಕೊಡುವುದಿಲ್ಲ ಅವು. ಆ ಶೀರ್ಷಿಕೆ ಯಾಕೆ ಎಂದು ತಿಳಿಯಬೇಕಿದ್ದರೆ ನೀವು ಇಡೀ ಕತೆಯನ್ನು ಓದಬೇಕು. ಉದಾಹರಣೆಗೆ ಎರಡನೇಯ ಕತೆ ‘ಮೈ ದಾಸ್’ ಅನ್ನೇ ತೆಗೆದುಕೊಳ್ಳಿ. ಊಹುಂ.. ನೀವು ಗೆಸ್ ಮಾಡಲಿಕ್ಕೆ ಸಾಧ್ಯವೇ ಇಲ್ಲ. ಮುಟ್ಟಿದೆಲ್ಲವೂ ಚಿನ್ನ ಎಂಬ ಗಾದೆ ಮಾತಿದೆಯಲ್ವ.. ಅದನ್ನು ನಿಜವಾಗಿಯೂ ಸಾಧ್ಯವಾಗಿಸಲು ಯತ್ನಿಸುವ ವೈಜ್ಞಾನಿಕ ಸಂಶೋಧಕನ ಕತೆ.
ರಾಜಲಕ್ಷ್ಮಿ ಎನ್.‌ ರಾವ್‌ ಅವರ “ಸಂಗಮ” ಕಥಾಸಂಕಲನದ ಕುರಿತು ಸಂಜೋತಾ ಪುರೋಹಿತ್‌ ಬರಹ

Read More