Advertisement

Tag: Ramjan Darga

ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ

ರಾತ್ರಿ ಮಾತ್ರ ಮಲಗುವುದು ಸಮಸ್ಯೆಯಾಗುತ್ತಿತ್ತು. ವೈದ್ಯಕೀಯ ಯಂತ್ರಗಳು ಹಗಲು ಹೊತ್ತು ಕೊಂಯ ಕೊಂಯ ಮಾಡುವುದನ್ನು ಸಹಿಸಿದರೂ ರಾತ್ರಿಯ ನೀರವ ವಾತಾವರಣದಲ್ಲಿ ಕಿರಿಕಿರಿ ಎನಿಸುತ್ತಿತ್ತು. ಅಂಥ ಪ್ರಸಂಗಗಳಲ್ಲಿ ರೋಗಿಗಳು ಅಸಹಾಯಕರಾಗಿ ಸಹನೆ ಕಳೆದುಕೊಳ್ಳುವ ಸ್ಥಿತಿಯಲ್ಲಿರುತ್ತಾರೆ. ಆಗ ನಾನೊಂದು ಉಪಾಯ ಹುಡುಕಿದೆ. ಫ್ಯಾನಿನ ತಂಗಾಳಿಯ ಕಡೆಗೆ ಮಾತ್ರ ಲಕ್ಷ್ಯಕೊಟ್ಟು ಬೇರೆ ಏನನ್ನೂ ಯೋಚಿಸದೆ ಅದನ್ನೇ ಆನಂದಿಸುತ್ತಿದ್ದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 99ನೇ ಕಂತು ನಿಮ್ಮ ಓದಿಗೆ

Read More

ಎಲೆ ಮರೆಯ ಮಧುರ ಫಲ: ರಂಜಾನ್ ದರ್ಗಾ ಸರಣಿ

ಮೃದುಭಾಷಿ ಮಹಾದೇವಪ್ಪನವರ ವ್ಯಕ್ತಿತ್ವದ ಒಂದು ಮಹತ್ವದ ಅಂಶ ಎಂದರೆ, ಅವರು ಯಾವ ಕಾಲಕ್ಕೂ ಹೊಸದನ್ನು ಬಯಸುವವರು. ತಮ್ಮದೇ ಆದ ವಿಚಾರಕ್ಕೆ ಅಂಟಿಕೊಂಡವರಲ್ಲ. ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ತಮಗಿಂತಲೂ ಬೇರೆಯವರು ಚೆನ್ನಾಗಿ ತಿಳಿಸಿದರೆ ಅದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಳ್ಳುವಂಥ ಸುಸಂಸ್ಕೃತರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 97ನೇ ಕಂತು ನಿಮ್ಮ ಓದಿಗೆ

Read More

ಕಾಮ್ರೇಡ್ ಹೆಚ್.ಕೆ. ರಾಮಚಂದ್ರಪ್ಪ ಸ್ಮರಣೆ: ರಂಜಾನ್ ದರ್ಗಾ ಸರಣಿ

ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಬಹಳ ಬದಲಾವಣೆಗಳಾಗಿವೆ. ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಸುಲಿಗೆ ಯೋಜನೆ ಮೂಲಕ ಇಡೀ ಜಗತ್ತಿನ ಕಾರ್ಮಿಕರ ಆರ್ಥಿಕ ಸ್ಥಿತಿ ಕುಸಿಯಿತು. ಈ ಎಲ್ಲ ಕಾರಣಗಳಿಂದಾಗಿ ದಾವಣಗೆರೆಯ ಸಂಗಾತಿಗಳ ಸಾಧನೆ ಗತವೈಭವದಂತೆ ಕಾಣತೊಡಗಿತು. ಅಂಥ ಸಂದರ್ಭದಲ್ಲಿ ಕೂಡ ಹೆಚ್.ಕೆ. ರಾಮಚಂದ್ರಪ್ಪ ಅವರು ಎದೆಗುಂದಲಿಲ್ಲ. ಬದುಕಿನ ಕೊನೆಯ ಉಸಿರು ಇರುವವರೆಗೂ ಅವರು ನಗುಮುಖದಿಂದ ಕಾರ್ಮಿಕರ ಒಳಿತಿಗಾಗಿ ದುಡಿದದ್ದು ಇಂದು ಇತಿಹಾಸವಾಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 92ನೇ ಕಂತು ನಿಮ್ಮ ಓದಿಗೆ

Read More

ಮಹೋನ್ನತ ಮಾನವ: ರಂಜಾನ್‌ ದರ್ಗಾ ಸರಣಿ

ಅವರೊಮ್ಮೆ ಸಸ್ಯಶಾಸ್ತ್ರದ ಪ್ರಯೋಗಾಲಯಕ್ಕೆ ಭೇಟಿ ನೀಡಿದಾಗ, ಪ್ರಯೋಗಕ್ಕಾಗಿ ಎಲ್ಲಿಂದಲೋ ತಂದ ಕಮಲದ ಹೂ ನೋಡಿದರು. ಮತಗೆ ಅದನ್ನೆತ್ತಿ ಖಲಿಲ್ ಗಿಬ್ರಾನನ ಕವನದ ಸಾಲೊಂದನ್ನು ಉಸುರಿದರು. ಅದರ ಪಕಳೆಗಳನ್ನು ಕಿತ್ತು ಪರೀಕ್ಷಿಸುವುದು ಅವರಿಗೆ ಹಿಂಸೆ ಎನಿಸಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 89ನೇ ಕಂತು ನಿಮ್ಮ ಓದಿಗೆ

Read More

ಭಕ್ತವತ್ಸಲ ಸಿದ್ಧಗಂಗಾ ಶ್ರೀಗಳು: ರಂಜಾನ್ ದರ್ಗಾ ಸರಣಿ

ಎಲ್ಲ ಜಾತಿ ಜನಾಂಗಗಳ ಮಕ್ಕಳ ಶೈಕ್ಷಣಿಕ ಏಳ್ಗೆಯೆ ಅವರ ಬಹುದೊಡ್ಡ ಗುರಿಯಾಗಿತ್ತು. ಪ್ರತಿ ವರ್ಷ ಹತ್ತುಸಾವಿರ ಮಕ್ಕಳನ್ನು ಸಾಕುತ್ತ, ಅವರಿಗೆ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುತ್ತ, ಶೈಕ್ಷಣಿಕವಾಗಿ ಅವರನ್ನು ಉನ್ನತ ಸ್ಥಾನಕ್ಕೇರಿಸುವುದು ಸಾಮಾನ್ಯ ಮಾತಲ್ಲ. ಅವರ ಮಠದ ಎಲ್ಲ ವಿಭಾಗಗಳಲ್ಲಿ ನಿಷ್ಠೆಯಿಂದ ಎಲೆ ಮರೆಯ ಕಾಯಿಯಂತೆ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಗೌರವಕ್ಕೆ ಅರ್ಹರಾಗಿದ್ದಾರೆ. ಅವರ ಮಠದ ಆವರಣವು ಪುಟ್ಟ ಭಾರತವೇ ಆಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ