Advertisement

Tag: Ramjan Darga

ಛಡಿಯಾಮಿ ಛಂ ಛಂ, ವಿದ್ಯಾಯಾಮಿ ಘಂ ಘಂ

ಪ್ರತಿಯೊಬ್ಬ ವಿದ್ಯಾರ್ಥಿ ವೈವಿಧ್ಯಮಯವಾಗಿ ಬನಿಯನ್ ಬಾಕ್ಸ್‌ಗಳಲ್ಲಿ ಸರಸ್ವತಿಯ ಚಿತ್ರವಿಟ್ಟು ತನ್ನಿಚ್ಛೆಯಂತೆ ಸಿಂಗರಿಸಿ ಖುಷಿ ಪಡುತ್ತಿದ್ದ. ತುಂಬ ಶ್ರಮವಹಿಸಿ ತಯಾರಿಸಿದ ಈ ಸುಂದರ ‘ಸರಸ್ವತೀಮಂದಿರ’ಗಳನ್ನು ಬೇರೆ ವಿದ್ಯಾರ್ಥಿಗಳು ನೋಡುವುದು ಕಡಿಮೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಸಿಂಗರಿಸಿದ ಸರಸ್ವತಿಯನ್ನು ತಾನೇ ನೋಡುತ್ತ, ನೋಡುತ್ತ ಆನಂದತುಂದಿಲನಾಗಿ ತನ್ನ ಮತ್ತು ಸರಸ್ವತಿಯ ಮಧ್ಯೆ ಯಾರೂ ಇಲ್ಲದ ಹಾಗೆ ತದೇಕಚಿತ್ತನಾಗಿರುತ್ತಿದ್ದ. ಆ ಕ್ಷಣದ ಆನಂದವೇ ಆನಂದ. ಇದು ಒಂದುರೀತಿಯ ಲಿಂಗಾಂಗಸಾಮರಸ್ಯದಂತೆ!
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಹನ್ನೆರಡನೆಯ ಕಂತು

Read More

ಏನೋ ಲೆಕ್ಕಹಾಕಿ ಶಾಲೆಗೆ ಹೆಸರು ಹಚ್ಚಿದ ಮಾಸ್ತರರು

ಅದಾವುದೊ ಸ್ಥಾನಕ್ಕೆ ಆಯ್ಕೆಯಾದ ಗಣ್ಯವ್ಯಕ್ತಿಯೊಬ್ಬರಿಗೆ ಸನ್ಮಾನಿಸುವ ಮತ್ತು ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡುವ ಕಾರ್ಯಕ್ರಮವೊಂದು ನಡೆಯಿತು. ಸ್ವಲ್ಪ ಸಮಯದ ನಂತರ ಬಂದ ಆ ಗಣ್ಯವ್ಯಕ್ತಿ ಶರಣಯ್ಯ ವಸ್ತ್ರದ ಎಂಬುದು ತಿಳಿಯಿತು. ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು.”

Read More

ಸಾತ್ವಿಕ ಜೀವನವಿಧಾನವೇ ಬಹುದೊಡ್ಡ ಆಸ್ತಿ

ಒಂದು ಸಲ ಮಳೆಗಾಲದಲ್ಲಿ ರಾತ್ರಿ ಹೀಗೆ ಸಿಕ್ಕಿಹಾಕಿಕೊಂಡು ನಾವು ಮಕ್ಕಳು ಮತ್ತು ಹಿರಿಯರೆಲ್ಲ ಬಹಳ ಹಸಿದು ಆ ಹಾಸ್ಟೆಲ್ ಕೋಣೆಯಲ್ಲಿ ಕುಳಿತಿದ್ದೆವು. ಅಷ್ಟೊತ್ತಿಗೆ ಜಂಬಗಿಯವರು ರಾತ್ರಿ ಒಂಬತ್ತು ಗಂಟೆ ಹೊತ್ತಿಗೆ ಯಾವುದೋ ಖಾನಾವಳಿಯಿಂದ ನಮಗೆಲ್ಲ ಸಾಕಾಗುವಷ್ಟು ಬಿಸಿ ಅನ್ನ ಮತ್ತು ಸಾರು ತೆಗೆದುಕೊಂಡು ಬಂದರು. ಅವೆರಡೂ ರುಚಿ ಶುಚಿಯಾಗಿದ್ದವು. ಆ ಚಳಿ, ಆ ಹಸಿವು, ಆ ಬಿಸಿ ಬಿಸಿ ಅನ್ನ ಮತ್ತು ಸಾರಿನ ರುಚಿ ಎಂದೂ ಮರೆಯಲು ಸಾಧ್ಯವಿಲ್ಲ. ನಾನು ದೊಡ್ಡವನಾದ ಮೇಲೆ ಜಂಬಗಿಯವರನ್ನು ಹುಡುಕಲು ಯತ್ನಿಸಿ ವಿಫಲನಾದೆ.”

Read More

ವಿಜಾಪುರ ನಗರಿಯ ರಂಗು, ವಿಸ್ಮಯಗಳು

ವಿಜಾಪುರಕ್ಕೆ ಬಂದಮೇಲೆ ಬಹಳ ದಿನಗಳ ನಂತರ ನಾವು ಟಾಂಗಾದಲ್ಲಿ ಜೋಡಗುಂಬಜ ದರ್ಗಾಕ್ಕೆ ಹೋಗಿ ವಾಪಸ್ ಮನೆಯ ಸಮೀಪ ಬರುತ್ತಿರುವಾಗ ಅಲ್ಲೀಬಾದಿಯಲ್ಲಿ ನಾವು ಸಾಕಿದ ನಾಯಿ ಕಂಡಿತು. ಕಂಡೊಡನೆ ಅದು ಟಾಂಗಾದ ಬೆನ್ನು ಹತ್ತಿತು. ಅದರ ಅವಸ್ಥೆ ನೋಡಿ ನನ್ನ ಕರುಳು ಕಿತ್ತುಬಂದಂತಾಯಿತು. ನಾನು ಮುಟ್ಟುವ ಸ್ಥಿತಿಯಲ್ಲಿ ಅದು ಇರಲಿಲ್ಲ. ಆ ತೆಳ್ಳನೆಯ ಬಿಳಿ ನಾಯಿಯ ಮೈತುಂಬ ಚಿಕ್ಕ ಚಿಕ್ಕ ಹುಣ್ಣುಗಳಾಗಿ ರಕ್ತದ ಬಿಂದುಗಳಂತೆ ಕಾಣುತ್ತಿದ್ದವು. ಅದು ಬಹಳ ಆಯಾಸಗೊಂಡಿತ್ತು. ಆದರೆ ಟಾಂಗಾದ ಬೆನ್ನು ಬಿಡಲಿಲ್ಲ. ಮನೆ ಬಂದಿತು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಒಂಭತ್ತನೆಯ ಕಂತು.

Read More

ಅಲ್ಲೀಬಾದಿಯ ಮೃಗಶಿರ ಮಳೆಹಾಡ ನೆನಪು

ಮಣ್ಣೆತ್ತಿನ ಅಮಾವಾಸೆ ದಿನ ಗುಳ್ಳವ್ವ ಕೂಡುತ್ತಾಳೆ. ಇವಳು ಐದು ವಾರ ಇರುತ್ತಾಳೆ. ಹದಿಹರೆಯದ ಹುಡುಗಿಯರು ಇದರಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವರು. ಅವರ ಜೊತೆ ಗುಳ್ಳವ್ವ ಐದು ವಾರ ಇರುವುದರಿಂದ ಭಾವನಾತ್ಮಕ ಸಂಬಂಧ ಬೆಳೆದಿರುತ್ತದೆ. ವಾರದ ಕೊನೆಯ ದಿನ ಹೊಲದಲ್ಲಿ ಹುಗಿಯುವಾಗ ಇಲ್ಲವೇ, ಗಿಡದ ಮೇಲೆ ಕೂಡಿಸಿ ಬರುವಾಗ ಬಿಕ್ಕಿಬಿಕ್ಕಿ ಅಳುತ್ತಾರೆ. ಗುಳ್ಳವ್ವ ಕೂಡ ಮಳೆಗೆ ಸಂಬಂಧಿಸಿದ ದೇವತೆಯಾಗಿದ್ದಾಳೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ