Advertisement

Tag: Ramzan Darga

ನೆರೆಮನೆಯ ದುಃಖ: ರಂಜಾನ್‌ ದರ್ಗಾ ಸರಣಿ

ಹೇಗ್‌ನಲ್ಲಿ ಸಿಕ್ಕ ಪಾಕಿಸ್ತಾನದ ಆ ಧೈರ್ಯ ತುಂಬಿದ ಮಹಿಳೆಯರ ಬಗ್ಗೆ ಪಕ್ಕದಲ್ಲಿ ಕುಳಿತಿದ್ದ ಈ ಮಹಿಳೆಗೆ ಹೇಳಿದೆ. ‘ಈಗ ನೀವು ಹೇಳುತ್ತಿರುವುದು ತದ್ವಿರುದ್ಧವಾಗಿದೆಯಲ್ಲಾ’ ಎಂದು ತಿಳಿಸಿದೆ. ಆಗ ಆ ಮಹಿಳೆ ಹೇಳಿದಳು: ‘ಅದೆಲ್ಲಾ ಆ ಕಾಲದ ಮಾತು. ಈಗ ಪರಿಸ್ಥಿತಿ ಬಹಳ ಹದಗೆಟ್ಟಿದೆ. ಉಗ್ರರು ಪಾಕಿಸ್ತಾನವನ್ನು ಅಳಿವಿನ ಅಂಚಿಗೆ ತಂದಿಡುತ್ತಿದ್ದಾರೆ. ನಿಮ್ಮ ದೇಶ ಎಷ್ಟೋ ಪಾಲು ಮೇಲು. ನಿಮ್ಮ ಸಿನಿಮಾಗಳು, ನಿಮ್ಮ ಸಂಗೀತ, ನಿಮ್ಮ ವಸ್ತುಗಳು ನಮಗೆ ಬಹಳ ಪ್ರಿಯವಾಗಿವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕಣ್ಣ ಮುಂದೆ ಕುಳಿತ ಸಾವು ಕರಗಿತ್ತು..: ರಂಜಾನ್‌ ದರ್ಗಾ ಸರಣಿ

ರಹಮಾನ್ ಖಾನ್ ಅದೇನೋ ಹೇಳಿದ. ನಂತರ ನನಗೆ ಮಾತನಾಡಲು ತಿಳಿಸಿದ. ಅದು ನನ್ನ ಕೊನೆಯ ಭಾಷಣ ಎಂದು ಭಾವಿಸಿದೆ. ಬದುಕುಳಿಯುವ ಯಾವ ಸಾಧ್ಯತೆಯೂ ಇಲ್ಲ ಎನಿಸಿತು. ಅವರೆಲ್ಲ ‘ಏನು ಮಾತನಾಡ್ತಿಯೋ ನೋಡೋಣ’ ಎಂದು ಅಂದುಕೊಂಡವರ ಹಾಗೆ ಕುಳಿತಿದ್ದರು. ಅಂದೇ ಪ್ರಕಟವಾದ ಸಾಪ್ತಾಹಿಕ ಪುರವಣಿಯ ಪ್ರತಿ ಕೈಯಲ್ಲಿತ್ತು. ಆ ನನ್ನ ಲೇಖನ ಇಡೀ ಮುಖಪುಟ ತುಂಬಿತ್ತು. ಮೇಲೆ ಕೆಂಪು ಬಣ್ಣದಲ್ಲಿ ಕಲಾವಿದ ಸೂರಿ ಬರೆದ ಮುಸ್ಲಿಂ ಮಹಿಳೆಯ ಚಿತ್ರ ಲೇಖನದಲ್ಲಿನ ನೋವಿಗೆ ಪೂರಕವಾಗಿದ್ದು ಹೃದಯಸ್ಪರ್ಶಿಯಾಗಿತ್ತು.  ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More

ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಭಾಷಣ ಸ್ಪರ್ಧೆಯ ದಿನ ಬಂದಿತು. ಹೈಸ್ಕೂಲು ಕಟ್ಟಡದ ಹಿಂದಿನ ಗೋಡೆಯ ಮೇಲೆ ಹೋಗಿ ಕುಳಿತೆ. ಗೋಡೆ ಜಿಗಿದು ಸಭಾಭವನಕ್ಕೆ ಹೋಗಬೇಕೆಂದರೆ ಧೈರ್ಯ ಸಾಲದು. ಹಾಫ್ ಪ್ಯಾಂಟ್ ಹರಿದಿತ್ತು. ಷರ್ಟ್ ಗಲೀಜಾಗಿತ್ತು. ಕ್ಷೌರಿಕರಿಗೆ ಕೊಡಲಿಕ್ಕೆ ಹಣವಿಲ್ಲದ್ದಕ್ಕಾಗಿ ಕೂದಲು ಬೆಳೆದಿತ್ತು. ಕೊಬ್ಬರಿ ಎಣ್ಣೆ ಇಲ್ಲದ್ದಕ್ಕಾಗಿ ಕೂದಲು ಒಣಗಿದ್ದರಿಂದ ಕಾಡು ಮನುಷ್ಯನ ಹಾಗೆ ಕಾಣುತ್ತಿದ್ದೆ. ಭಾಷಣ ಮಾಡುವ ಸ್ಫೂರ್ತಿಗೆ ಪೂರಕವಾಗಿರುವಂಥ ಯಾವುದೂ ಇರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 63ನೇ ಕಂತು ನಿಮ್ಮ ಓದಿಗೆ

Read More

ಸೀರೆಯ ಸೆರಗಿನಲ್ಲಿ ಅನ್ನ-ಸಾರು….!

ಹೊಸಪೇಟೆಯ ಬಡತನ ನನ್ನನ್ನು ದಿಗಿಲು ಬಡಿಸಿತು. ಬೆಳಗಿನ ನಾಷ್ಟಾ ಮತ್ತು ಮಧ್ಯಾಹ್ನದ ಊಟದ ವೇಳೆ, ತಂತಿಬೇಲಿಯ ಆಚೆ ಬಡವರು ಅನ್ನಕ್ಕಾಗಿ ಕಾಯುತ್ತಿದ್ದರು. ನಮಗೆ ಇಲ್ಲಿ ಬೇಕಾದಷ್ಟು ಆಹಾರ ನೀಡುತ್ತಿದ್ದರು. ನನ್ನ ಕೆಲವರು ಗೆಳೆಯರಿಗೆ ಆ ನಿರ್ಗತಿಕರ ಬಗ್ಗೆ ತಿಳಿಸಿ ಒಂದು ಯೋಜನೆ ರೂಪಿಸಿದೆ. ನಾವೆಲ್ಲ ಹೆಚ್ಚಿಗೆ ಅನ್ನ ಹಾಕಿಸಿಕೊಳ್ಳುವುದು. ಸ್ವಲ್ಪ ತಿಂದ ಹಾಗೆ ಮಾಡಿ ಅವರ ಬಳಿ ಹೋಗುವುದು. ಆ ಬಡ ಹೆಣ್ಣುಮಕ್ಕಳು ಸೆರಗೊಡ್ಡುವುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 62ನೇ ಕಂತು ನಿಮ್ಮ ಓದಿಗೆ.

Read More

ವಿದ್ಯಾರ್ಥಿಗಳ ಓದಿಗೆ ಆಸರೆಯಾಗುತ್ತಿದ್ದ ಮಹಲುಗಳು…

ನಾನಿದ್ದಲ್ಲಿಂದ ಅಲ್ಲಿಗೆ ಹೋಗಲು 10 ನಿಮಿಷ ಬೇಕಿತ್ತು. ಅಲ್ಲಿಗೇ ಹೊರಟೆ. ‘ಮನೆಯಲ್ಲಿ ಎಲ್ಲರೂ ಕೂಡಿ ತಿನ್ನುವುದು ಒಳ್ಳೆಯದು’ ಎಂದು ಒಳತೋಟಿ ಹೇಳುತ್ತಿತ್ತು. ಆದರೆ ನಾನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಹೋಗಿ ಒಂದು ಕಡೆ ಹುಲ್ಲುಹಾಸಿನ ಮೇಲೆ ಕುಳಿತು ಸ್ವಲ್ಪ ತಿನ್ನುವುದರೊಳಗಾಗಿ ಗಾರ್ಡ್ ಬಂದು ‘ಎಂಟು ಗಂಟೆ ಆಗಿದೆ’ ಎಂದು ಸೀಟಿ ಹೊಡೆದು ಎಚ್ಚರಿಸಿ ಹೊರಗೆ ಹೋಗಲು ಸೂಚಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ