Advertisement

Tag: Ravindranayak Sannakkibettu

ಕೆಂಪು ಕಾರು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಹೊಸ ಕಾರ್ ಬುಕ್ ಮಾಡಿ ಈ ಕಾರನ್ನು ಎಕ್ಸ್ಚೇಂಜ್‌ನಲ್ಲಿ ಕೊಡುವ ಮಾತುಕತೆ ಆದ ನಂತರ ಮೊದಲಿನ ಲವಲವಿಕೆಯನ್ನು ಈ ಕಾರು ಕಳೆದುಕೊಂಡು ಬಿಟ್ಟಿತು ಅಂತ ಯಾಕೋ ನನ್ನ ಮನಸ್ಸಿಗೆ ತೀವ್ರವಾಗಿ ಅನ್ನಿಸಿತು. ಮರುದಿನ ಕಾರ್ ಸ್ಟಾರ್ಟ್ ಮಾಡುವಾಗ ಇಂಜಿನ್ ಶಬ್ಧ ಬೇರೆಯೇ ತರಹ ಕೇಳಿಸಿದ ಹಾಗಾಯ್ತು. ಏನೋ ಸಮಸ್ಯೆ ಆಗಿದೆ ತೋರಿಸಿಕೊಂಡು ಬನ್ನಿ ಅಂದ ಹೆಂಡತಿ ಮಾತಿಗೆ ಇಲ್ಲ ಅನ್ನಲಾಗದೆ ಸುರತ್ಕಲ್ ಪೇಟೆಗೆ ಒಂದು ಸುತ್ತು ಹಾಕಿ ಬಂದು ಏನಾಗಿಲ್ಲ ಅಂತೆ, ಅಂತ ಸುಳ್ಳು ಹೇಳಿದ್ದರ ಹಿಂದೆ ಕಾರ್ ಮೇಲೆ ನನಗಿದ್ದ ನಂಬಿಕೆಯೇ ಕಾರಣವಾಗಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಏಳನೆಯ ಬರಹ

Read More

ಮಳೆ, ನೆನಪು ಮತ್ತು ಸಂಬಂಧ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಯಾವುದೂ ಕಳೆದು ಹೋಗದ ಹೊರತಾಗಿ ಅದರ ಮೌಲ್ಯ ನಮಗೆ ಗೊತ್ತಾಗುವುದಿಲ್ಲ ಅನ್ನುವುದೇ ಈ ಬದುಕಿನ ಅತಿದೊಡ್ಡ ವಿಪರ್ಯಾಸ. ಪ್ರತೀ ಕ್ಷಣವನ್ನೂ ಉತ್ಕಟವಾಗಿ ಜೀವಿಸಬೇಕು ಅಂದುಕೊಳ್ಳುವ ಒಂದು ಫಿಲಾಸಫಿ ಶುರು ಆಗುವುದೇ ಈ ಕಳೆದುಹೋದ ಫೀಲ್ ಬಂದ ನಂತರವೇ. ಅಷ್ಟರಲ್ಲಾಗಲೇ ನಮ್ಮ ಅರ್ಧ ಆಯುಷ್ಯ ಮುಗಿದುಹೋಗಿರುತ್ತದೆ. ಇನ್ನು ದಿನಗಳು ಕಮ್ಮಿ ಅನ್ನುವ ಅರಿವಾಗುವಾಗ ಈ ಪ್ರತೀಕ್ಷಣವನ್ನೂ ಉತ್ಕಟವಾಗಿ ಬದುಕುವ ಆಸೆಯೊಂದು ಹುಟ್ಟಿಕೊಳ್ಳುತ್ತದೆ. ಆದರೆ ಹಾಗೆ ಬದುಕುತ್ತೇವಾ? ಹೇರಿಕೊಂಡ ಜವಾಬ್ದಾರಿಯ ಮೂಟೆಗಳನ್ನು ಇಳಿಸಿ ಹಗುರ ಆಗುವುದು ಸಾಧ್ಯನಾ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಮೂರನೆಯ ಬರಹ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

ನಮ್ಮ ಪುರಾಣಗಳನ್ನು ಕೆದಕುತ್ತಾ ಹೋದರೆ ಇಂತಹ ಬಹಳಷ್ಟು ಮಾದರಿಗಳು ಸಿಗಬಹುದು. ಪ್ರತಿಯೊಬ್ಬರ ಪರಿಸ್ಥಿತಿಗಳು ಪ್ರತಿಯೊಬ್ಬರ ಋಣದ ಬೇರುಗಳು ಭಿನ್ನವಾಗಿರಬಹುದು. ಆದರೆ ಧರ್ಮಸಂಕಟದ ಆ ಉತ್ಕಟ ಕ್ಷಣಗಳಲ್ಲಿ ಅವರು ತೆಗೆದುಕೊಂಡ ನಿರ್ಧಾರಗಳು ಖಂಡಿತವಾಗಿಯೂ ನಮ್ಮ ಬದುಕಿನ ಸಮಸ್ಯೆಗಳಿಗೂ ಒಂದು ದಾರಿಯನ್ನು ತೋರಿಸಬಹುದು. ಬದುಕಿನ ಅನಾಮಿಕ ತಿರುವಿನಲ್ಲಿ ಎದುರಾಗುವ ದ್ವಂದ್ವಗಳಲ್ಲಿ ಇಲ್ಲಿದ್ದು ಇಲ್ಲಿಲ್ಲ; ಅಲ್ಲಿದ್ದು ಅಲ್ಲಿಲ್ಲ ಅನ್ನುವಂತಾಗಿ ಇದು ಅಥವಾ ಅದು ಅನ್ನುವ ಆಯ್ಕೆ ಮಾಡಲೇಬೇಕಾದ ಪರಿಸ್ಥಿಗಳಲ್ಲಿ ನಮ್ಮ ಮುಂದೆ ಇವರು ಕೊಟ್ಟು ಹೋದ ಮಾದರಿಗಳಿವೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

Read More

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ