Advertisement

Tag: Relationships

ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ

ನಿಜವಾದ ಸಂಗತಿಯೇನೆಂದರೆ ಎಷ್ಟೋ ಬಾರಿ ಇಂಥಾ ಅಪವಾದ, ಅಪನಂಬಿಕೆಗಳು ಆ ಕ್ಷಣಕ್ಕೆ ಹುಟ್ಟಿದವುಗಳಾಗಿರುವುದೇ ಇಲ್ಲ. ಒಬ್ಬ ವ್ಯಕ್ತಿಯ ಸ್ನೇಹ, ಸಾಂಗತ್ಯದಲ್ಲಿರುವಾಗಲೇ ಮನುಷ್ಯ ಇಂಥಾದ್ದೊಂದು ಅಗಲಿಕೆಗೆ ತಯಾರಿ ಮಾಡಿಕೊಳ್ಳುತ್ತಿರುತ್ತಾನೆ. ತನಗೆ ಇಷ್ಟವಾಗದ ಆತನ ವ್ಯಕ್ತಿತ್ವಗಳನ್ನು ಹೆಕ್ಕಿಟ್ಟುಕೊಳ್ಳುತ್ತಿರುತ್ತಾನೆ! ಇಂಥಾದ್ದೊಂದು ಸಮಯ ಬಂದಾಗ ಥಟ್ಟನೆ ಅವನ್ನೆಲ್ಲ ಆಚೆ ತೆಗೆದು ‘ಅಕಾರ್ಡಿಂಗ್ ಟೂ ಆ್ಯಕ್ಟ್ ತ್ರೀ ನಾಟ್ ಟೂ’ ಎಂದು ಅವನ್ನು ಹಾಜರುಪಡಿಸಿಯೇ ಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ನಡುವೆ ಹತ್ತಿದವರು ನಡುವೆಯೇ ಇಳಿದುಹೋದರು: “ದಡ ಸೇರದ ದೋಣಿ” ಸರಣಿಯಲ್ಲಿ ವಸಂತಕುಮಾರ್‌ ಕಲ್ಯಾಣಿ ಬರಹ

ಹೀಗೆ ಕಾಲ ಓಡಿತು. ಪತ್ರಗಳು ನಿಂತು ಹೋದವು. ಫೋನ್ ನಿಂತುಹೋಯಿತು. ಅವರವರ ಕೆಲಸದಲ್ಲಿ ಅವರವರು ಬ್ಯುಸಿ ಆದರು. ಓದು, ಕೆಲಸ ಹುಡುಕುವುದು, ಹಣಕಾಸಿನ ತಾಪತ್ರಯದಲ್ಲಿ ನಾವುಗಳು ಊರಿಗೆ ಹೋಗಿ ಬರುವುದು ಕಡಿಮೆಯಾಯಿತು. ಊರಿನಲ್ಲಿ ಮೊದಲು ದೊಡ್ಡ ದೊಡ್ಡಮ್ಮ, ನಂತರ ಹಿರಿಯಕ್ಕ ತೀರಿಕೊಂಡ ಸುದ್ದಿ ಹೇಗೋ ನಮ್ಮನ್ನು ತಲುಪಿತು. ಅಲ್ಲಿಗೂ ಇವಳು ಹೆಚ್ಚು ಹೋಗಿ ಬಂದು ಮಾಡುತ್ತಿರಲಿಲ್ಲ, ತನ್ನ ಗಂಡನ ಮುಂದೆ ತಾಯಿ ಮನೆಯ ಹೀನಾಯ ಪರಿಸ್ಥಿತಿ ಕಾಣಬಾರದೆಂದು ಭಾವಿಸಿ…. ಅವಳ ತಮ್ಮ ಹೆಂಡತಿಯೊಂದಿಗೆ ಕಿರಿಕಿರಿ ಮಾಡಿಕೊಂಡ. ಕುಡಿತ ಹೆಚ್ಚಾಯಿತು. ಬದುಕು ಮೂರಾ ಬಟ್ಟೆಯಾಯಿತು.
“ದಡ ಸೇರದ ದೋಣಿ” ಸರಣಿಯಲ್ಲಿ ವಸಂತಕುಮಾರ್‌ ಕಲ್ಯಾಣಿ ಬರಹ

Read More

ಸಂಬಂಧಗಳಿಗೂ ಒಂದು ಕೊನೆಯ ದಿನ ಇದ್ದರೆ….!

ಪರಿಚಯ ಸ್ನೇಹಕ್ಕೆ ತಿರುಗಿ, ಸ್ನೇಹ ಮತ್ತಷ್ಟು ಆತ್ಮೀಯ, ಅಪ್ಯಾಯ ಬಂಧವಾಗಿ ಬದುಕು ಹಿತವೆನಿಸುವ ದಿನಗಳಲ್ಲಿ ಯಾರಿಗಾದರೂ ಅಂತಹದ್ದೊಂದು ಸಂಬಂಧ ಜಡವಾಗಬಹುದೆಂಬ ಸುಳಿವು ಸಿಕ್ಕಿರುವುದಿಲ್ಲ. ಈ ದಿನ, ಈ ಕ್ಷಣ, ಈ ಕಾಲ ಸದಾ ಹೀಗೆಯೇ ಇರುವುದೆಂಬ ನಂಬಿಕೆ, ಆಶಯದ ಬುನಾದಿಯ ಮೇಲೆ ಕಟ್ಟಿದ ಕನಸಿನ ಗೋಪುರ ಕುಸಿಯತೊಡಗಿದಾಗ ಶುರು ಸತ್ವಪರೀಕ್ಷೆ. ಜೊತೆಯಾಗಿ ಎದುರಿಸಿದ ಕಷ್ಟ ಸುಖ, ಕೂಡಿಟ್ಟ ನೆನಪುಗಳು, ಜೋಳಿಗೆ ತುಂಬಿದ ಅನುಭವಗಳು ಮಸುಕಾಗುವವರೆಗೂ ಮುಗಿಯದ ಉಮ್ಮಳಿಕೆ‌. ಇದು ಬರಿಯ ಪ್ರೇಮಿಗಳಿಗೆ ಸಂಬಂಧಿಸಿದ ವಿಷಯವಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ