Advertisement

Tag: Roopa Ravindra Joshi

ಸಮೃದ್ಧ ಕಾಡಿನ ರೋಚಕ ಕಥೆಗಳು-೧೧: ರೂಪಾ ರವೀಂದ್ರ ಜೋಶಿ ಸರಣಿ

ಆದರೆ ಎಲ್ಲ ವೇಳೆ ಒಂದೇ ಥೆರನಾಗಿರದು. ಸತತವಾಗಿ ನಡೆಯುತ್ತಿದ್ದ ಅವರ ಕಳ್ಳ ದಂಧೆ ಮಟ್ಟ ಹಾಕಲು ಅದೆಷ್ಟೋ ದಿನಗಳಿಂದ ಅಧಿಕಾರಿಗಳು ಹೊಂಚು ಹಾಕುತ್ತಲೇ ಇದ್ದರೆನ್ನಿಸುತ್ತದೆ. ಒಮ್ಮೆ ಪೋಲೀಸರು ಅವರೆಲ್ಲರನ್ನೂ ಕೆಲಸದ ಜಾಗದಲ್ಲೇ ಅಡ್ಡ ಹಾಕಿದರು. ನಮ್ಮ ಆಳಿನ ಕಿರಿಯ ಮಗನೂ ಅದರೊಳಗಿದ್ದನಂತೆ. ಹೇಗೋ ಕಣ್ಣು ತಪ್ಪಿಸಿಕೊಂಡು ಓಡಿ ಬಂದು ಮನೆಯಲ್ಲಿ ಅಡಗಿದ್ದ. ಅವನಿಗೆ ಕೆಲಸ ಕೊಟ್ಟ ಹೆಗಡೆಯವರು ಇಲಾಖೆಯವರಿಗೆ ದುಡ್ಡು ತಿನ್ನಿಸಿ, ಅವನೇ ಆ ಕಳ್ಳ ನಾಟಾ ಕಡಿಯುವವರಿಗೆ ಮುಖ್ಯಸ್ಥ ಎಂದು ಬಿಂಬಿಸಿ, ಜಾರಿಕೊಂಡರು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಇಪ್ಪತ್ತನೆಯ ಕಂತು

Read More

ಸುಂದರ ಕಾಡಿನ ರೋಚಕ ಕಥೆಗಳು-5: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮಲ್ಲಿ ತಂಪು ಜಾಸ್ತಿಯಾದ್ದರಿಂದ ಹಾವುಗಳು ಹೆಚ್ಚಾಗಿ ಇರಲಿಲ್ಲವೆನ್ನಿಸುತ್ತದೆ. ಒಂದು ನಿರುಪದ್ರವಿ ಹಾವಿನ ಬಗ್ಗೆ ಹೇಳಬೇಕು ಅದೆಂದರೆ ಹಸಿರು ಹಾವು. ಹಸಿರು ದಂಟಿಗೆ ಸುತ್ತಿಕೊಂಡು, ಸಪೂರ ಕೋಲಿನಂತೇ ಡೊಂಕಾಗಿ ನಿಂತು ಹುಳ ಹುಪ್ಪಡಿ ಹಿಡಿಯುವ ಈ ಹಾವನ್ನು ಗುರುತಿಸುವುದೇ ಕಷ್ಟ. ನಾವೇ ಅದೆಷ್ಟೋ ಸಲ, ಮುಳ್ಳಣ್ಣು ಕೊಯಿದು ಕೊಳ್ಳುವಾಗಲೋ, ಜಾಜಿ ಹೂ ಕೊಯ್ಯುವಾಗಲೋ ಟೊಂಗೆಯ ಜೊತೆಗೇ ಎಳೆದು ಬಿಡುತ್ತಿದ್ದೆವು. ಆಗ ಅದು ಗಾಬರಿಬಿದ್ದು, ಸರಕ್ಕನೆ ಕೆಳಗಿಳಿದು ಓಡುತ್ತಿತ್ತು. ಅದು ಹೋಗಿ ಎಷ್ಟು ಹೊತ್ತಿನ ತನಕ, ನಾವು ಜೀವ ಬಾಯಿಗೆ ಬಂದವರಂತೇ ಭಯದಿಂದ ಇಷ್ಟಗಲ ಕಣ್ಣುಮಾಡಿ ಮಾತು ಮರೆತು ನಿಂತಿರುತ್ತಿದ್ದೆವು!!
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಸುಂದರ ಕಾಡಿನ ರೋ‌ಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ

ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು

Read More

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ

ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ