Advertisement

Tag: S Nagashree Ajay

ಮನೆಗೆ ಮಾರಿ… ಊರಿಗೆ ಉಪಕಾರಿ: ಎಸ್.‌ ನಾಗಶ್ರೀ ಅಜಯ್ ಅಂಕಣ

ಪ್ರಪಂಚದ ಕಣ್ಣಿಗೆ ಬೀಳುವಾಗಿನ ನಾಟಕವನ್ನಾದರೂ ಸಹಿಸಬಹುದು. ಕುಟುಂಬದೊಳಗೂ ಸಹಜವಾಗಿ ಬೆರೆಯಲಾಗದ ಸ್ಥಿತಿಯೀಗ ಪ್ರತಿ ಮನೆಯ ದುರಂತ. ತೊಟ್ಟಿಲ ಕೂಸು ಕಿಟಾರೆಂದರೆ ಗೂಗಲ್ ರಿಸರ್ಚ್ ಮಾಡುವ, ನಿಂಗೇನ್ಗೊತ್ತು ಈ ಕಾಲದ ಕಷ್ಟಸುಖ ಸುಮ್ಮನಿರಮ್ಮ ಎಂದು ಮೂರು ಮಕ್ಕಳು ಹೆತ್ತಾಕೆಯನ್ನೇ ಮೂಲೆಗೆ ಕೂರಿಸುವ ದಿನ. ಮೊಮ್ಮಕ್ಕಳಿಗೆ ಬಾಯಿಪಾಠ ಹೇಳಿಕೊಡಲು, ಚದುರಂಗ, ಚೌಕಾಬಾರ, ಹುಲಿ ಕರಡಿ ಆಡಿಸಲು, ಅಡುಗೆಯ ಪ್ರಾಥಮಿಕ ತರಬೇತಿ ನೀಡಲು, ರಂಗೋಲಿ, ಕಸೂತಿ, ಹಾಡುಹಸೆ ಕಲಿಸಲು ಹಾತೊರೆಯುವ ಅಜ್ಜ ಅಜ್ಜಿಯರು ಇನ್ನೂ ಇದ್ದಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಹೇಗೆ ಚಿಗುರೊಡೆಯಿತು ಈ ಸ್ನೇಹದ ಬಳ್ಳಿ..: ಎಸ್. ನಾಗಶ್ರೀ ಅಜಯ್ ಅಂಕಣ

ಆಕೆ ಸಿಕ್ಕದಿದ್ದರೂ ಊರು ನಿಧಾನಕ್ಕೆ ಅಮ್ಮನನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಪೊರೆಯುತ್ತಿತ್ತು. ಆದರೆ ಜಯಮ್ಮನ ಸ್ನೇಹದ ರುಚಿ ಸಿಗದೆ ನಷ್ಟವಾಗುತ್ತಿತ್ತು. ಯಾವುದೋ ಊರಿನ ಹೆಂಗಸು ಇಲ್ಲಿ ಬಂದಿಳಿದರೆ ನನಗೇನಾಗಬೇಕು? ನೆಂಟರಾ? ಇಷ್ಟರಾ? ಎಂದಾಕೆ ದೂರವುಳಿಯಬಹುದಿತ್ತು. ಹೊಸ ಊರಿನಲ್ಲಿ ಮನೆತನಕ ಬಂದು ಮಾತನಾಡುತ್ತಾ ಕೂರುವ ಈ ಹೆಂಗಸಿಗೆ ನನ್ನಿಂದ ಏನಾದರೂ ಸಹಾಯದ ನಿರೀಕ್ಷೆಯಿದೆಯೆ? ನಂಬಿಸಿ ಮೋಸ ಮಾಡಿದರೇನು ಗತಿ? ಎಳೆಮಗುವನ್ನು ಇವಳ ಕೈಗಿತ್ತು ಹೇಗೆ ಹೋಗಲಿ? ಎಂದೆಲ್ಲ ಅನುಮಾನಿಸಿ ಅಮ್ಮನೂ ಚಿಪ್ಪಿನೊಳಗೆ ಸೇರಬಹುದಿತ್ತು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ

Read More

ಇಲ್ಲಿ ಎಲ್ಲ ಥರದವರೂ ಇದ್ದಾರೆ…: ಎಸ್ ನಾಗಶ್ರೀ ಅಜಯ್ ಅಂಕಣ

ಇದು ಸರಿತಪ್ಪಿನ ತಕ್ಕಡಿಯಲ್ಲಿ ತೂಗಲಾರದ, ತೂಗಬಾರದ ವಿಷಯ. ವಿಧಿ ಒಬ್ಬೊಬ್ಬರ ಪಾಲಿಗೆ ನೀಡಿದ ಷಡ್ರಸಗಳ ಭೋಜನ. ಅವರುಂಡ ಸಿಹಿ-ಕಹಿ-ಹುಳಿ- ಒಗರು ಅವರಿಗಷ್ಟೇ ವೇದ್ಯ. ಬಹಳಷ್ಟು ಸಲ ನಾವು ದೂರ ನಿಂತು ಕಂಡಿದ್ದರ ಬಗ್ಗೆ, ಅನಿಸಿದ್ದರ ಬಗ್ಗೆ ಆತ್ಮವಿಶ್ವಾಸದಿಂದ ನಿರ್ಣಯಗಳನ್ನು ಹೊರಡಿಸುತ್ತೇವೆ. ದುಡ್ಡು ದುಡ್ಡು ಅಂತ ಸಾಯ್ತಾನೆ‌. ಹೋಗುವಾಗ ಹೊತ್ಕೊಂಡು ಹೋಗುವ ಹಾಗಿದ್ದರೆ ಇನ್ನು ಹೇಗಾಡ್ತಿದ್ದನೋ ಅಂದವರೆ ಚಿಲ್ಲರೆಗಾಗಿ ತಳ್ಳುಗಾಡಿಯವನ ಬಳಿ ಗುದ್ದಾಡುತ್ತಾರೆ. ಮಕ್ಕಳಿಗೆ ಸಂಸ್ಕಾರ ಕಲಿಸಿಲ್ಲ ಎಂದ ಮಹಾಮಾತೆಯ ಮಕ್ಕಳು ಬಂದವರೆದುರೇ ಕಾಲುಚಾಚಿ ಕೂತು, ಮೂತಿ ತಿರುವುತ್ತಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

“ಹಾದಿಖರ್ಚಿಗೆ ನಿನ್ನ ಮುದ್ದಿರಲಿ ಸಾಕು”: ಎಸ್ ನಾಗಶ್ರೀ ಅಜಯ್ ಅಂಕಣ

ನೋಡಲು ಸುಂದರವಾಗಿದ್ದರೆ ಅವರು ಕೆಟ್ಟವರೇ ಆಗಿರಬೇಕು. ಅಹಂಕಾರಿ, ಸ್ವಾರ್ಥಿ, ಸಮಯಸಾಧಕಿ, ಅವಕಾಶವಾದಿಯೇ ಆಗಿರಬೇಕೆಂಬ ಮೌಢ್ಯ ಉಸಿರುಗಟ್ಟಿಸುತ್ತದೆ. ದೇವರು ಕೊಟ್ಟ ರೂಪ. ಅದರಲ್ಲಿ ಅವರದ್ದೇನು ತಪ್ಪು? ಎಂದು ನೋಡಲು ಸುಮಾರಾಗಿರುವವರ ಪರ ವಹಿಸುವ ಸಮಾಜವೇ, ಚೆಂದ ಇರುವವರನ್ನು “ದೇವರು ಕೊಟ್ಟ ರೂಪ. ಅವರನ್ನೇಕೆ ಶಿಕ್ಷಿಸಬೇಕು?” ಎಂದು ಯೋಚಿಸುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಉರಿದು ಮುಗಿದುಬಿಡುವುದಲ್ಲ ಪ್ರೀತಿ: ಎಸ್. ನಾಗಶ್ರೀ ಅಜಯ್ ಅಂಕಣ

ಓದಿ, ಬರೆದು, ಕಣ್ತೆರೆದು ಪ್ರಪಂಚ ನೋಡಿ, ತಿಳಿದು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಪ್ರೇಮದ ಹೆಸರಿನಲ್ಲಿ ಹುಚ್ಚಾಟಗಳಿಗೆ ಪಕ್ಕಾಗಿ, ನಮ್ಮನ್ನೇ ನಿಭಾಯಿಸಿಕೊಳ್ಳಲು ಬಾರದ ವಯಸ್ಸಿನಲ್ಲಿ ಇನ್ನೊಂದು ಜೀವವನ್ನು ನಿಭಾಯಿಸುವ, ಸಂಬಂಧ ಬೆಸೆಯುವ ಸಾಹಸ ಬೇಕಿದೆಯೆ?
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ