Advertisement

Tag: S Nagashree Ajay

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ

ಹತ್ತು ಜನರ ನಡುವಿದ್ದೂ ಅವರಿವರಂತಾಗದೆ, ತಮ್ಮ ಮಿತಿಯಲ್ಲಿ ಆಗುವ ಸಕಲವನ್ನೂ ಸಂತೋಷ, ಸಮಾಧಾನದಿಂದ ಮಾಡುತ್ತಾ, ಮೆಚ್ಚುಗೆಗೂ ಹಾತೊರೆಯದೆ, ಯಾರನ್ನೂ ದೂರದೆ ಸಂತರಂತೆ ಬದುಕಿದವರಿದ್ದಾರೆ. ಮನೆಮನೆಗಳಲ್ಲಿ ಅಂತಹವರನ್ನು ಕಂಡಿರುತ್ತೇವೆ. ಸದಾ ಗಿಜಿಗುಡುವ ಮನೆ, ಬಂದು ಹೋಗುವವರು, ಓದಲೆಂದು, ಕೆಲಸಕ್ಕೆಂದು ಬಂದು ಉಳಿದ ಬಂಧುಗಳ ಮಕ್ಕಳು, ದೇವಸ್ಥಾನದ ಪ್ರಸಾದ, ಚರಪು ಮಾಡುವ ಜವಾಬ್ದಾರಿ, ರೋಗಿಗಳ ಆರೈಕೆ, ಹಿರಿಯರ ಕಾಳಜಿ, ದಿನಂಪ್ರತಿ ಹದಿನೈದು ಇಪ್ಪತ್ತು ಜನರಿಗೆ ಕಡಿಮೆಯಿಲ್ಲದಂತೆ ಊಟೋಪಚಾರ…
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಸಂಬಂಧಗಳಿಗೂ ಒಂದು ಕೊನೆಯ ದಿನ ಇದ್ದರೆ….!

ಪರಿಚಯ ಸ್ನೇಹಕ್ಕೆ ತಿರುಗಿ, ಸ್ನೇಹ ಮತ್ತಷ್ಟು ಆತ್ಮೀಯ, ಅಪ್ಯಾಯ ಬಂಧವಾಗಿ ಬದುಕು ಹಿತವೆನಿಸುವ ದಿನಗಳಲ್ಲಿ ಯಾರಿಗಾದರೂ ಅಂತಹದ್ದೊಂದು ಸಂಬಂಧ ಜಡವಾಗಬಹುದೆಂಬ ಸುಳಿವು ಸಿಕ್ಕಿರುವುದಿಲ್ಲ. ಈ ದಿನ, ಈ ಕ್ಷಣ, ಈ ಕಾಲ ಸದಾ ಹೀಗೆಯೇ ಇರುವುದೆಂಬ ನಂಬಿಕೆ, ಆಶಯದ ಬುನಾದಿಯ ಮೇಲೆ ಕಟ್ಟಿದ ಕನಸಿನ ಗೋಪುರ ಕುಸಿಯತೊಡಗಿದಾಗ ಶುರು ಸತ್ವಪರೀಕ್ಷೆ. ಜೊತೆಯಾಗಿ ಎದುರಿಸಿದ ಕಷ್ಟ ಸುಖ, ಕೂಡಿಟ್ಟ ನೆನಪುಗಳು, ಜೋಳಿಗೆ ತುಂಬಿದ ಅನುಭವಗಳು ಮಸುಕಾಗುವವರೆಗೂ ಮುಗಿಯದ ಉಮ್ಮಳಿಕೆ‌. ಇದು ಬರಿಯ ಪ್ರೇಮಿಗಳಿಗೆ ಸಂಬಂಧಿಸಿದ ವಿಷಯವಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಆಡಿಕೊಳ್ಳುವ ಬಾಯಿಗೊಂದು ಬೀಗ…

ಯಾವ ಯಾವ ಕಾರಣಕ್ಕೆ ದಾಂಪತ್ಯಗಳು ಮುರಿದು ಬೀಳ್ತಿವೆ ಎಂಬುದು ಚರ್ಚೆಗೆ ನಿಲುಕುವ ವಿಷಯವೇ ಅಲ್ಲ. ಈಗ ಪ್ರತಿಮನೆಯಲ್ಲೂ ವಿಚ್ಚೇದನದ ಕೇಸ್‌ಗಳು, ಹೆಣ್ಣು-ಗಂಡಿನ ವರ್ತನೆ, ಮನಃಸ್ಥಿತಿಯ ಕುರಿತಾದ ದೂರುಗಳು, ಸ್ತ್ರೀವಾದ, ನೊಂದಗಂಡಂದಿರ ಸಂಘದ ಅಳಲುಗಳು ಯಥೇಚ್ಛವಾಗಿವೆ. ಯಾರ ಪರವೂ, ವಿರುದ್ಧವೂ ನಿಲ್ಲಲಾಗದ, ನಿಂತು ಸಾಧಿಸಲಾಗದ ಸಿಕ್ಕಾಗಿ ಉಳಿದಿವೆ. ಆದರೆ ಮಕ್ಕಳು ಬೇಕು ಅಥವಾ ಬೇಡ ಎಂಬ ಕಾರಣಕ್ಕಾಗಿ ನಡೆಯುತ್ತಿರುವ ದಾಂಪತ್ಯ ಸಮರಗಳ ಬಗ್ಗೆ ಸ್ವಲ್ಪ ಗಮನಹರಿಸಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ