Advertisement

Tag: S Nagashree Ajay

ಹೊಸ ಹಾದಿಯಲ್ಲಿ ನಡಿಗೆಯ ಸವಾಲುಗಳು..: ಎಸ್ ನಾಗಶ್ರೀ ಅಜಯ್ ಅಂಕಣ

ಕೇಳಿದವರಿಗೆ ಏನು ಮಹಾ ಎನ್ನಿಸುವ ಸಣ್ಣಪುಟ್ಟ ವಿಚಾರಗಳು ಹೊಸ ವಾತಾವರಣದಲ್ಲಿ ಚಪ್ಪಲಿಯೊಳಗೆ ಸೇರಿದ ಮರಳಿನ ಕಣದಂತೆ ಒತ್ತುತ್ತಿರುತ್ತವೆ. ಒಂದೇ ಜಾತಿ, ಉಪಜಾತಿ, ಪಂಗಡದಲ್ಲೇ ಮದುವೆಯಾದರೂ ಮನೆಯ ಪದ್ಧತಿ, ಸಂಪ್ರದಾಯ, ಇಷ್ಟಾನಿಷ್ಟಗಳಲ್ಲಿ ಹಲವು ವ್ಯತ್ಯಾಸಗಳು. ಬೆರಳು ಚುರಕ್ಕೆನ್ನುವಷ್ಟು ಸುಡುವ, ಹಬೆಯಾಡುವ ಊಟ ಇಷ್ಟಪಡುವ ಮನೆಯಿಂದ, ತಣ್ಣಗೆ ಆರಿ ಅಕ್ಷತೆಯಾದ ಅನ್ನ, ಉಗುರುಬೆಚ್ಚಗಿನ ಸಾರು ತಿನ್ನುವ ಮನೆಗೆ ಬಂದರೆ ತುತ್ತು ಗಂಟಲಿನಿಂದ ಕೆಳಗಿಳಿಯಲ್ಲ.
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ದಕ್ಕಿದ್ದಕ್ಕೆ ಕೃತಜ್ಞತೆ ಇರಲಿ : ಎಸ್ ನಾಗಶ್ರೀ ಅಜಯ್ ಅಂಕಣ

ತಮಗೆ ಬೇಕಾದ ಕೋರ್ಸಿಗೆ ಪ್ರವೇಶ ದೊರೆಯಲಿಲ್ಲ, ಅಂದುಕೊಂಡಷ್ಟು ಅಂಕ ಬರಲಿಲ್ಲ, ಪ್ರೀತಿಸಿದ ಹುಡುಗಿ ಕರೆ ಸ್ವೀಕರಿಸಲಿಲ್ಲ, ಮದುವೆಗೆ ಮನೆಯಲ್ಲಿ ಒಪ್ಪಿಗೆಯಿಲ್ಲ, ವರ್ಷದೊಳಗೆ ಮಕ್ಕಳಾಗಲಿಲ್ಲ ಎಂಬ ‘ಇಲ್ಲ’ಗಳಿಗೆ ಜೀವತೆರುವ, ಬದುಕಿದ್ದರೂ ಉತ್ಸಾಹ, ಆಶಾವಾದವನ್ನೇ ಕಳೆದುಕೊಳ್ಳುವವರಿದ್ದಾರೆ. ಮುಂದೇನು? ಮುಂದೇನು?
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ

ಹತ್ತು ಜನರ ನಡುವಿದ್ದೂ ಅವರಿವರಂತಾಗದೆ, ತಮ್ಮ ಮಿತಿಯಲ್ಲಿ ಆಗುವ ಸಕಲವನ್ನೂ ಸಂತೋಷ, ಸಮಾಧಾನದಿಂದ ಮಾಡುತ್ತಾ, ಮೆಚ್ಚುಗೆಗೂ ಹಾತೊರೆಯದೆ, ಯಾರನ್ನೂ ದೂರದೆ ಸಂತರಂತೆ ಬದುಕಿದವರಿದ್ದಾರೆ. ಮನೆಮನೆಗಳಲ್ಲಿ ಅಂತಹವರನ್ನು ಕಂಡಿರುತ್ತೇವೆ. ಸದಾ ಗಿಜಿಗುಡುವ ಮನೆ, ಬಂದು ಹೋಗುವವರು, ಓದಲೆಂದು, ಕೆಲಸಕ್ಕೆಂದು ಬಂದು ಉಳಿದ ಬಂಧುಗಳ ಮಕ್ಕಳು, ದೇವಸ್ಥಾನದ ಪ್ರಸಾದ, ಚರಪು ಮಾಡುವ ಜವಾಬ್ದಾರಿ, ರೋಗಿಗಳ ಆರೈಕೆ, ಹಿರಿಯರ ಕಾಳಜಿ, ದಿನಂಪ್ರತಿ ಹದಿನೈದು ಇಪ್ಪತ್ತು ಜನರಿಗೆ ಕಡಿಮೆಯಿಲ್ಲದಂತೆ ಊಟೋಪಚಾರ…
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ