Advertisement

Tag: Sahyadri Nagaraj

ಮರೆಯಲಾಗದ ಆ ನಾಲ್ಕು ರಾತ್ರಿಗಳು

ಹಗಲಿನಲ್ಲಿ ಎಲ್ಲೆಲ್ಲೋ ಹಂಚಿಹೋಗಿದ್ದ ಇವರನ್ನೆಲ್ಲ ಹೀಗೆ ಒಂದೇ ಸೂರಿನಡಿ ಸೇರಿಸಿದ್ದ ಇರುಳು ಎಷ್ಟೊಂದು ಬಲಶಾಲಿ ಅಂದುಕೊಳ್ಳುತ್ತಲೇ ಸಣ್ಣಗೆ ತೂಕಡಿಕೆ. ಅಲ್ಯಾರೋ ಕೆಮ್ಮಿದ ಸದ್ದು. ಮತ್ಯಾರೋ ಮಗುವನ್ನು ತಟ್ಟಿದ ಸಪ್ಪಳ. ಇನ್ಯಾರೋ ಯಾರಿಗೋ ಗದರಿದ ದನಿ. ಮಧ್ಯೆ-ಮಧ್ಯೆ ಹೆಗ್ಗಣಗಳ ಓಡಾಟ. ಅಪರೂಪಕ್ಕೆ ರೈಲಿನ ಕೂಗು. ಮೈಕಿನ ಅನೌನ್ಸ್‌ಮೆಂಟು… ಎಲ್ಲವೂ ಬೇರಾವುದೋ ಲೋಕದ್ದು ಎನ್ನುವಂಥ ಮಂಪರು. ಮುಂಜಾನೆ ಎಚ್ಚರಾದಾಗ ಪಕ್ಕದಲ್ಲೇ ಹಮಾಲಿ ಮಂದಿಯ ಗುಂಪೊಂದು ಸೇರಿತ್ತು.

Read More

ಕ್ಲಾಸ್‌ಮೇಟ್ಸುಗಳ ಮಕ್ಕಳು ಮತ್ತು ಫಯಾಜ್‌ನ ಪುಲಾವು

‘ಮದುವೆಯಾದ ನಂತರ ಗಂಡು ಅಡುಗೆ ಮಾಡುವುದು ಅವಮಾನ, ಅದೇನಿದ್ದರೂ ಹೆಂಡತಿಯ ಕೆಲಸ’ ಎಂಬ ಅರೆಬೆಂದ ಅಲಿಖಿತ ಕಟ್ಟುಪಾಡೊಂದು ಉಂಟಲ್ಲ, ಅದು ಮೌಢ್ಯ. ಮದುವೆಯಾದ ನಂತರವೂ ಅಡುಗೆ ಕೆಲಸಗಳನ್ನು ಮಾಡುವುದು ಖಂಡಿತ ಅವಮಾನದ ಸಂಗತಿಯಲ್ಲ. ಬದಲಿಗೆ, ಪ್ರೀತಿ ಹೆಚ್ಚಿಸುವ ಸಂಗತಿ. ಕುಟುಂಬವೊಂದು ಹೀಗಿದ್ದಾಗ, ಅದು ಮಕ್ಕಳ ಯೋಚನಾ ಲಹರಿಯ ಮೇಲೂ ಪರಿಣಾಮ ಬೀರುತ್ತದೆ.  ಅಪ್ಪನ ಈ…

Read More

ಆಕ್ಸಿಡೆಂಟಿನ ಆಲದಮರ ಮತ್ತು ತೇಜಸ್ವಿಯ ‘ಮಾಯಾಮೃಗ’

ಗೆಳೆಯರೆಲ್ಲ ಸೇರಿ ಏನೇನೋ ಸವಾಲು ಹಾಕಿಕೊಂಡು, ಅವರಲ್ಲಿ ಇಬ್ಬರು ಸ್ಮಶಾನಕ್ಕೆ ಹೋಗುವುದು, ದೆವ್ವ ಗೆಳೆಯನ ವೇಷ ಧರಿಸಿ ಬಂದರೆ ಪತ್ತೆ ಮಾಡಲೆಂದು ಕೋಡ್‌ವರ್ಡ್ ನಿಕ್ಕಿ ಮಾಡಿಕೊಳ್ಳುವುದು, ನಂತರ ಆಗುವ ಅವಾಂತರಗಳು, ಬೂದಿಯಲ್ಲಿ ಮುಳುಗೆದ್ದ ಕಜ್ಜಿ ನಾಯಿಯೊಂದು ಫಾಲೋ ಮಾಡುವುದು, ಧೈರ್ಯವಂತನೊಬ್ಬ ಸವಾಲು ಸ್ವೀಕರಿಸಿ ಮಧ್ಯರಾತ್ರಿಯಲ್ಲಿ ಸುಡುಗಾಡಿಗೆ ಹೋಗಿ, ಗುರುತಿಗೆಂದು ಗೂಟ ಬಡಿಯುವಾಗ ತನ್ನ ಬಟ್ಟೆಯನ್ನೂ ಸೇರಿಸಿ ಬಡಿದು…

Read More

ಗೋಡೆಯಿಂದ ಹಾರಿದ ಹಾವುಗಳು ಮತ್ತು ಗೋಡೆಗಂಟಿದ ಮನುಷ್ಯರು

ಊರಿನ ಪ್ರತಿ ಬೀದಿಯನ್ನೂ ಅಲಂಕರಿಸಿದ್ದ ಹೊಗೆಸೊಪ್ಪಿನ ಬ್ಯಾರಲ್‌ಗಳ ಪೈಕಿ ವರ್ಷಕ್ಕೆ ಒಂದಾದರೂ ಬೆಂಕಿಯೊಳಗೆ ಕುಣಿಯುವುದು ಕಾಯಂ ಆದಮೇಲೆ, ಅವುಗಳನ್ನು ಊರಿಂದ ಆಚೆ ಹಾಕುವ ಮಹಾ ಸಂಚಿಕೆಗಳು ಶುರುವಾದವು. ಫಯರ್ ಆಫೀಸಿನವರ ಎಚ್ಚರಿಕೆಗಳು, ಪೊಲೀಸಿನವರ ಖಾರದ ಮಾತು, ಬ್ಯಾರಲ್ ಸುತ್ತಮುತ್ತಲ ಮನೆಗಳ ಮಂದಿಯ ತಕರಾರುಗಳ ಫಲವಾಗಿ ಬಹುತೇಕ ಬ್ಯಾರಲ್‌ಗಳು ಸದ್ದಿಲ್ಲದಂತೆ ಊರಿಂದ ಆಚೆ ನಡೆದವು. ಹಾಗಂತ ಸಮಸ್ಯೆಗಳೂ ಊರಾಚೆ ನಡೆದು ಹೋದವು ಎನ್ನುವ ಹಾಗಿಲ್ಲ. ‘ಸೊಗದೆ’ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್  ಹೊಗೆಸೊಪ್ಪು ಬ್ಯಾರಲ್ ಗಳ ಕುರಿತು ಬರೆದಿದ್ದಾರೆ. 

Read More

ಲೇಡೀಸ್ ಹಾಸ್ಟೆಲ್ ದಯ್ಯ ಬಿಡಿಸಿದ ಭಟ್ಕಳದ ಬಾಲೆ

ನನ್ನಲ್ಲಿ ಲೇಡೀಸ್ ಹಾಸ್ಟೆಲ್ ಬಗೆಗೊಂದು ಅಸೀಮ ಕುತೂಹಲ ಬೆಳೆದಿತ್ತು. ಹಾಸ್ಟೆಲ್ ನಲ್ಲಿ ಹುಡುಗಿಯರ ಸಾಮ್ರಾಜ್ಯ ಹೇಗಿದ್ದೀತು? ಹರಟೆಯ ಹೊತ್ತಲ್ಲಿ ಏನೆಲ್ಲ ವಾಗ್ವಾದ ನಡೀಬಹುದು? ಅಡುಗೆ ಸರೀಗಿಲ್ಲ ಅಂದ್ರೆ ಅಡುಗೆಯವ್ರಿಗೆ ಕ್ಲಾಸ್ ತಗೋತಾರಾ? ಪೊಲಿಟಿಕ್ಸ್ ಬಗ್ಗೆ ಮಾತಾಡ್ತಾರಾ? ಹೊಡೆದಾಟಗಳು ನಡೆದ್ರೆ ಹೇಗೆ ನಡೀತದೆ? ಸಂಚುಗಳು ಹೆಂಗೆ ಎಕ್ಸಿಕ್ಯೂಟ್ ಆಗ್ತವೆ? ರೂಮು ಗಲೀಜು ಇಟ್ಕೊಂಡಿರ್ತಾರಾ ಅಥವಾ ಸಿಕ್ಕಾಪಟ್ಟೆ ನೀಟಾಗಿರ್ತದಾ?… ಹೀಗೆ ತರಹೇವಾರಿ ತರ್ಕಗಳು -ಸಹ್ಯಾದ್ರಿ ನಾಗರಾಜ್ ಬರೆಯುವ ‘ಸೊಗದೆ’ ಅಂಕಣ ನಿಮ್ಮ ಓದಿಗೆ.

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ