Advertisement

Tag: Series

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ನಮ್ಮೂರಿನ್ ಗೌರೀಗೆ ಪೂಜೆ ಮಾಡ್ತಿದ್ದಿದ್ದು ವಸಿ ಜನ್ವೇಯಾ. ಆದ್ರೆ ಗಣೇಶುನ್ನ ಬಿಡಾಕೇಂತ್ಲೇ ಊರಿನ್ ಜನ್ವೆಲ್ಲಾ ಮೇಲ್ ಬಿದ್ದು ಕಾದ್ಕಂಡು ಕುಂತಿರ್ತಿದ್ವಿ. ಐದನೇ ದಿನ ಸಂಜೀ ಹೊತ್ನಾಗೆ, ಗೌರಮ್ಮುಂಗೆ ಮಡ್ಲು ತುಂಬಿ, ಮಗುನ್ನ ಮುಂದಿಟ್ಗಂಡು, ಅವ್ವನ್ನ ಹಿಂದ್ ಕುಂಡ್ರಿಸಿ ಮೆರೋಣಿಗೆ ಹೊಂಡುತಿತ್ತು. ರಾಮ ದ್ಯಾವ್ರ ಗುಡೀಗ್ಳಿಂದ ನಮ್ಮನೆ ಆಸಿ, ಕೆರೆ ಏರಿ ಕಡೆ ಊರ ಗಂಡಸರು, ಹೆಂಗಸರು, ಚಳ್ಳೆ ಪಿಳ್ಳೆಗ್ಳು ಜೈಕಾರ ಹಾಕ್ಕಂಡು ಗಣಪತಿ ಬಾಪ್ಪ ಮೋರ್ಯಾ ಅಂತ ಕಿರುಚ್ಕಂಡು ಅವುರ್ ಹಿಂದಿಂದ್ಲೇ ಸಾಗುಸ್ಕಂಡು ಹೋಗ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಗಣೇಶ ಚತುರ್ಥಿಯ ಆಚರಣೆಯ ಕುರಿತು ಹೇಳುತ್ತಲೇ ಈ ಸರಣಿ ಇಲ್ಲಿಗೆ ಮುಕ್ತಾಯವಾಗುತ್ತದೆ

Read More

ಮನುಷ್ಯ ಮೃಗವಾಗುತ್ತಿರುವನೆ?: ಸುಮಾವೀಣಾ ಸರಣಿ

ವಾಹನಗಳ ವಿಚಾರಕ್ಕೆ ಬಂದಾಗ ಗಾಳಿ ಇದ್ದರೆ ಗಾಲಿ ಓಡಲು ಸಾಧ್ಯ ಅಲ್ವೆ! ಸ್ವಲ್ಪ ಗಾಳಿ ಹೆಚ್ಚಾದರೂ ವಾಹನಗಳಾಗಲಿ, ಮನುಷ್ಯನಾಗಲಿ ಇರುವುದಿಲ್ಲ. ಗಾಳಿ ಹೆಚ್ಚಾಗಿ ಸೈಕಲ್ ಬರ್ಸ್ಟ್ ಆಯಿತು. ಅದೇ ಗಾಳಿ ಇಲ್ಲದೆ ಹೋದರೆ ಅದು ಓಡುವುದೇ ಇಲ್ಲ ಪಂಚರ್ ಆಗುತ್ತದೆ. ಅಂತೆಯೇ ಮಾನವ ಉಸಿರುಗಟ್ಟಿ ಸಾಯುತ್ತಾನೆ. ಹೌದು! ಮಾನವನ ಬದುಕು ಉಸಿರು ಹೋದಾಗ ‘ಸತ್ತರು’, ‘ಅದು’, ‘ಇದು’, ‘ಶವ’ ಎಂಬುದಾಗಿ ಮಾತನಾಡುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೊಂದನೆಯ ಬರಹ ನಿಮ್ಮ ಓದಿಗೆ

Read More

ಮರೆಯಲಾಗದ ಮಾತೆ: ರಂಜಾನ್‌ ದರ್ಗಾ ಸರಣಿ

ಮಾತಾಜಿಯವರು ಸ್ಪಷ್ಟವಾದ ಧ್ವನಿಯಲ್ಲಿ ಹೇಳುತ್ತಿದ್ದರು. ಆಗ ಅವರು ಮಾತನಾಡುತ್ತಿದ್ದುದು ಮಹಿಳಾ ಜಗದ್ಗುರುಗಳ ವಿಚಾರವಾಗಿತ್ತು. ಅವರು ಹೇಳುವ ಶೈಲಿ ವೀರೋಚಿತವಾಗಿತ್ತು. ಯೌವನದ ಉತ್ಸಾಹದಿಂದ ಕೂಡಿದ ಸಾತ್ವಿಕ ಸೌಂದರ್ಯ ಮತ್ತು ಅಧ್ಯಾತ್ಮದ ಮೆರಗು ಮೇಳೈಸಿದ ಅವರ ಮಾತು, ಮಹಿಳೆಯ ಅಸ್ಮಿತೆಯ ಬಗೆಗಿನ ದೃಢನಿರ್ಧಾರದ ಧ್ವನಿಯಾಗಿತ್ತು. ಅವರ ಮಾತಿನಿಂದ ಸಭೆಯಲ್ಲಿ ವಿದ್ಯುತ್ ಸಂಚಾರವಾದಂತಾಯಿತು. ಮಹಿಳೆ ಜಗದ್ಗುರುವಾಗುವುದೆಂದರೇನು? ಅದು ಹೇಗೆ ಸಾಧ್ಯ?
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 82ನೇ ಕಂತು ನಿಮ್ಮ ಓದಿಗೆ

Read More

ಮಕ್ಕಳು ಟೀಚರ್ ಆಗಬಲ್ಲರು: ಅನುಸೂಯ ಯತೀಶ್ ಸರಣಿ

ನನ್ನ ಮುಖ ಅವರ ಖುಷಿಗೆ ಸಾಕ್ಷಿ ಹಾಕುತ್ತಿತ್ತು. ಯಾಕೆ? ಮಿಸ್ ಲೇಟ್ ಆಯ್ತು ಅಂದರು. ಬಸ್ ಸಿಗ್ಲಿಲ್ಲ ಕಣ್ರೋ ಅಂದೆ. ಅದು ಸರಿ ಇದುವರೆಗೂ ನೀವು ಏನು ಮಾಡುತ್ತಿದ್ದೀರಿ ಅಂದಾಗ ಒಬ್ಬರ ಮುಖವನ್ನು ಒಬ್ಬರು ನೋಡಿಕೊಂಡರು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ