Advertisement

Tag: Sheshadri Ganjur

ಜಗತ್ತಿನ ಅತ್ಯಂತ ಸುಂದರ ಫೋಟೋ(2):ಶೇಷಾದ್ರಿ ಗಂಜೂರು ಸರಣಿ

ಈ ಆಲೋಚನೆ ಹೊಳೆದ ರಾತ್ರಿ ಅವನಿಗೆ ನಿದ್ದೆಯೇ ಬರಲಿಲ್ಲ. ಕಾಲೇಜಿನ ಇನ್ನೊಬ್ಬ ಪ್ರೊಫೆಸರ್ ಕೊಟ್ಟಿದ್ದ ಹೋಂ ವರ್ಕ್ ಮಾಡಲೂ ಸಹ ಮನಸು ಬರಲಿಲ್ಲ. ಬದಲಿಗೆ, ಹಾಸಿಗೆಯಿಂದೆದ್ದು, ಇಲ್ಲಿಯವರೆಗೆ ಕಲೆ ಹಾಕಿದ್ದ ಅಂಕಿ-ಸಂಖ್ಯೆಗಳು-ಮಾಹಿತಿಗಳನ್ನೆಲ್ಲಾ ಮತ್ತೆ-ಮತ್ತೆ ನೋಡಿ, ಸಣ್ಣ ಕಾಗದದ ಮೇಲೊಂದು ದಾರದಂತೆ ಗೆರೆಯೊಂದನ್ನು ಎಳೆದು ಅದರ ಮೇಲೆ, ತನ್ನ ಲೆಕ್ಕಾಚಾರ ಬಳಸಿ ಬಿಳಿಗಣ್ಣು, ಹಳದಿ ಬಣ್ಣ, ಕಿರು ರೆಕ್ಕೆ, ಹಾರೆಗಣ್ಣು ಇತ್ಯಾದಿ ಜೀನುಗಳನ್ನು ಮಾರ್ಕ್ ಮಾಡಿದ. ವಂಶವಾಹಿ ಗುಣಗಳು ಒಂದು ಪೀಳಿಗೆಯಿಂದ ಇನ್ನೊಂದಕ್ಕೆ ಹೇಗೆ ಸಂವಹಿಸುತ್ತದೆ ಎಂದು ತೋರುವ “ಜೀನ್ ಮ್ಯಾಪ್” ಒಂದು ಹೀಗೆ ಮಾನವ ಇತಿಹಾಸದಲ್ಲೇ ಮೊದಲ ಬಾರಿಗೆ ಸಿದ್ಧವಾಯಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು” ಇಂದಿನಿಂದ

ಮನುಷ್ಯನಿಗೆ ಮನುಷ್ಯನೇ ಹುಟ್ಟುವ ತದ್ರೂಪಿತನ ಪುರಾತನ ಕಾಲದಿಂದಲೂ ಕುತೂಹಲ ಮೂಡಿಸಿದೆ. ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಗ್ರೀಕ್ ಗಣಿತಜ್ಞ-ತತ್ವಶಾಸ್ತ್ರಿ ಪೈಥಾಗೊರಸ್ ಅನುವಂಶೀಯತೆಯ ಸೂತ್ರ ವೀರ್ಯದಲ್ಲಿದೆ ಎನ್ನುತ್ತಾನೆ. ಅವನ ಪ್ರಕಾರ, ವೀರ್ಯ ಪುರುಷನಿಂದ ಹೊರಬರುವ ಮುನ್ನ ದೇಹದ ಎಲ್ಲಾ ಭಾಗಗಳಲ್ಲಿ ಹರಿದು ಆ ಭಾಗಗಳೆಲ್ಲದುರ ಮಾಹಿತಿಯನ್ನೂ ಕಲೆಹಾಕಿ ತದ್ರೂಪಿ ಇರುವ ಬೀಜವಾಗುತ್ತದೆ. ಈ ಬೀಜ ಗರ್ಭವನ್ನು ಸೇರಿದಾಗ, ಆ ತದ್ರೂಪಿಗೆ ಬೇಕಿರುವ ಪೋಷಕಾಂಶ ನೀಡಿ ಅದನ್ನು ದೊಡ್ಡದು ಮಾಡುವುದಷ್ಟೇ ಹೆಣ್ಣಿನ ಕೆಲಸ.
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಇನ್ಸುಲಿನ್ ಎಂಬ ‘ಜೀವಕಾರಕ’ದ ವಿಕಾಸ

ಎರಡು ವರ್ಷ ಮೆಡಿಕಲ್ ಓದಿದ. ಆ ಶಿಕ್ಷಣ ಮುಗಿಸುವ ಮುನ್ನವೇ ಮಿಲಿಟರಿ ಸೇರಲು ಅರ್ಜಿ ಹಾಕಿದ. ಅವರು ಸೇರಿಸಿಕೊಳ್ಳಲಿಲ್ಲ. ಕೆಲವು ತಿಂಗಳು ಬಿಟ್ಟು ಮತ್ತೆ ಪ್ರಯತ್ನಿಸಿದ. ಮತ್ತೆ ನಕಾರ. ಒಂದು ವರ್ಷದ ನಂತರ ಮಗದೊಮ್ಮೆ ಪ್ರಯತ್ನಿಸಿದ. ಅಷ್ಟರಲ್ಲಾಗಲೇ, ಮೊದಲ ಮಹಾಯುದ್ಧ ಪೂರ್ಣ ಭರಾಟೆಯಲ್ಲಿ ಸಾಗಿತ್ತು. “ಸೇನೆಗೆ ಸೇರ್ತೀನಿ” ಅನ್ನುವವರನ್ನು “ಬೇಡ” ಅನ್ನುವ ಪರಿಸ್ಥಿತಿಯಲ್ಲಿ ಅಂತೂ ಕೆನಡಾ ಇರಲಿಲ್ಲ. ಅದರಲ್ಲೂ, ರಣರಂಗದಲ್ಲಿ ವೈದ್ಯರ ಕೊರತೆ ಕಾಡುತ್ತಿತ್ತು. ಈ ಬಾರಿ ಅವನ ಅರ್ಜಿ ಫಲಿಸಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ನನ್ನನ್ನು ಹುಡುಕಿಕೊಳ್ಳುವ ದಾರಿಯಲ್ಲಿ ಸಿಕ್ಕ ಹೊಳಹುಗಳು

ಕನಕ ದಾಸರು “ನಾನು ಹೋದರೆ ಹೋದೇನು” ಎಂದಾಗ, ಅವರೆಂದದ್ದು ಸತ್ತ ನಂತರ ಸ್ವರ್ಗ ಸೇರುವ ಮಾತಲ್ಲ – ಮಕ್ಕಳಿಗಾಗಿ ಆ ಕತೆಯನ್ನು ನಾವು ಹೇಳಿದರೂ. ಅವರೆಂದದ್ದು ಪೂರ್ಣ ಧ್ಯಾನದಲ್ಲಿ ತೊಡಗಿಕೊಂಡಾಗ ಈ “ನಾನು” ಎಂಬ ಭಾವ “ಹೋಗುವ” ವಿಷಯ. ಆಸಕ್ತಿಕರ ವಿಷಯವೆಂದರೆ, ಆಧುನಿಕ ನ್ಯೂರೋಸೈನ್ಸ್ ಸಹ ಅದನ್ನೇ ಹೇಳುತ್ತಿದೆ. ಧ್ಯಾನದಲ್ಲಿ ತೊಡಗಿಕೊಂಡವರ ಮಿದುಳನ್ನು ಪರಿಶೀಲಿಸಿದಾಗ, ಮಿದುಳಿನ “ನಾನು ಕೇಂದ್ರ”ಗಳು ಸ್ಥಬ್ಢವಾಗುವುದನ್ನು ಗಮನಿಸಿದ್ದಾರೆ.  ಶೇಷಾದ್ರಿ ಗಂಜೂರು ಬರೆದ ಲೇಖನ..

Read More

ಆನೆಗಳ ಭಾವ ಪ್ರಪಂಚದ ಚಿತ್ರಗಳು

ಆನೆಗಳಿಗೆ ಕೈಗಳಿಲ್ಲದಿರಬಹುದು. ಆದರೆ, ಸೊಂಡಿಲು ಇದೆ. ನಾವು ಕೈಗಳಿಂದ ಮಾಡುವ ಎಷ್ಟೋ ಕಾರ್ಯಗಳನ್ನು ಆನೆಗಳು ತಮ್ಮ ಸೊಂಡಿಲ ಮೂಲಕ ಮಾಡುತ್ತವೆ. ಅವುಗಳಲ್ಲಿ ಚಿತ್ರರಚನೆಯೂ ಒಂದು. ಸರ್ಕಸ್‌ಗಳಲ್ಲಿ, ಯೂಟ್ಯೂಬ್ ವಿಡಿಯೋಗಳಲ್ಲಿ ಆನೆಗಳು ಪೇಂಟ್ ಬ್ರಶ್ ಹಿಡಿದು ಚಿತ್ರ ಬರೆಯುವುದನ್ನು ನಾವು ನೋಡಬಹುದು. ಆದರೆ, ಇದನ್ನು, ಬಹು ಮಟ್ಟಿಗೆ ಕಲಾ ಸೃಷ್ಟಿ ಎನ್ನಲಾಗದು. ಅದರಲ್ಲಿರುವುದು, ನಿರಂತರ ತರಬೇತಿನಿಂದ ನಿರ್ಮಿತವಾಗಿರುವ ಯಾಂತ್ರೀಕತೆ ಮಾತ್ರ. ‘ಇಂತಹ ಗೆರೆಗಳನ್ನೆಳೆದರೆ ಬಾಳೆಯ ಗೊನೆ ಸಿಗುತ್ತದೆ; ಇಲ್ಲದಿದ್ದರೆ, ಅಂಕುಶದಿಂದ ತಿವಿತ ಸಿಗುತ್ತದೆ’ ಎಂಬ ಪ್ರೋತ್ಸಾಹ-ಶಿಕ್ಷೆಗಳ ಪರಿಣಾಮವಷ್ಟೇ ಅದು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ