Advertisement

Tag: Short story

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜು ಹೆಗಡೆ ಕತೆ

ಸಂಜೆಯಾಗುತ್ತಿದ್ದಂತೆ, ಹೆಂಡತಿಗೆ ಅದು ಕಾಡತೊಡಗಿತು. ಸಾವಿರಾರು ರೂಪಾಯಿಯ ಮುಖ ನೋಡಿ ಅವಳ ಬಯಕೆಯನ್ನು ಇಲ್ಲ ಮಾಡದೆವಲ್ಲ, ನಾವೇನು ಅಷ್ಟು ದುಡ್ಡಿನಿಂದ ಹಂಚು ಹಾಕುವುದು ಅಷ್ಟರಲ್ಲೆ ಇದೆ ಎಂದೆಲ್ಲ ಗೊಣಗೊಣ ಮಾಡತ್ತಿದ್ದಳು. ನನಗೂ ಹಾಗೇ ಅನಿಸುತ್ತಿತ್ತು. ಆದರೆ ಅದು ಮುಗಿದ ಕತೆ ಎಂದು ನನಗೆ ನಾನೇ ಹೇಳಿಕೊಂಡು ಮರೆಯಲು ಯತ್ನಿಸುತ್ತಿದ್ದೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜು ಹೆಗಡೆ ಕತೆ “ಫ್ರಿಜ್ಜು”

Read More

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ರೊಟ್ಟಿ ಕಾರಕೂನ”

ಚೇರಮನ್ನರು ಎದ್ದು ಹೋದ ಮೇಲೆ, ಎಲ್ಲರಿಗಿಂತ ವಯಸ್ಸಿನಲ್ಲಿಯೂ, ಹುದ್ದೆಯಲ್ಲಿಯೂ ಚಿಕ್ಕವನಾಗಿದ್ದ ಸಿಪಾಯಿ ನಾಗಯ್ಯನೇ ಮಾಸ್ತರುಗಳಿಗೆ ಸಮಾಧಾನ ಹೇಳಿದ – “ಸರಾ, ಅವಗ ಮಾಸ್ತರ ಆಗಬೇಕಂದ್ರ ಇನ್ನೂ ಐದಾರು ವರ್ಸ ಕಾಲೇಜು ಕಲತು ಪಾಸ ಮಾಡ್ಬಕು. ಇಲ್ಲ್ಯಾಂದರ ನೀವೆಲ್ಲಾ ಅವರಪ್ಪನ ಮುಸುಡಿ ನೋಡಿ ಪಾಸ ಮಾಡತಿದ್ರಿ, ಶಹರದೂರಾಗ ಯಾರು ಇವ್ನ ಪಾಸು ಮಾಡ್ಬಕು?
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ರೊಟ್ಟಿ ಕಾರಕೂನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಶ್ರೀಧರ ಬನವಾಸಿ ಕತೆ

ಜಿನದತ್ತ ತಿಮ್ಮಪ್ಪನ ಮಾತುಗಳಿಗೆ ಉತ್ತರಿಸಲು ಧೈರ್ಯ ತೋರಲಿಲ್ಲ. ಕಥೆಗಾರನ ಕಲ್ಪನೆ, ಸ್ವಾತಂತ್ರ್ಯವೇನು ಎಂಬುದು ಆ ಪಾತ್ರಕ್ಕೇನು ಗೊತ್ತು? ಒಂದು ಕತೆಯ ಎಲ್ಲ ಪಾತ್ರಗಳು ಕತೆಗಾರ ಹೇಳಿದಂತೆ ಕೇಳಬೇಕು ಅನ್ನುವ ಸತ್ಯ ಆ ತಿಮ್ಮಪ್ಪನಂತವನಿಗೆ ಎಲ್ಲಿ ತಾನೇ ಅರ್ಥವಾಗಬೇಕು. ಅವನಿಗೆ ಇದನ್ನು ಬಿಡಿಸಿ ಹೇಳಿದರೂ ಅರ್ಥ ಮಾಡಿಕೊಳ್ಳುತ್ತಾನೆಯೇ?
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಶ್ರೀಧರ ಬನವಾಸಿ ಬರೆದ ಕತೆ `ಜಿನದತ್ತನೆಂಬ ಕಥೆಗಾರನೂ…’ ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ