Advertisement

Tag: Short story

ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ

ಮುಂದಿನ ಬೆಟ್ಟವನ್ನು ತೋರಿಸಿ ಗುಡದಪ್ಪ ಇದನ್ನು ದಾಟಬೇಕು ಎಂದ. ನಾನು ಹೌಹಾರಿದೆ. ಮತ್ತೆ ಮುಂದಿನ ಬೆಟ್ಟ ಏರತೊಡಗಿದೆವು. ಮೊದಲಿಗಿಂತಲೂ ಸ್ವಲ್ಪ ಕಡಿದಾಗೇ ಇತ್ತು. ದಾರಿಯಿಲ್ಲದ ಕಲ್ಲುಗಳ ನಡುವೆ ದಾರಿ ಹುಡುಕುತ್ತಾ ನಡೆಯುವುದು ಕಷ್ಟವಾಯಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ “ಡಾಲ್ಮೆನ್‌ಗಳು” ನಿಮ್ಮ ಓದಿಗೆ

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ.ನಾ.ಮೊಗಸಾಲೆ ಕತೆ

ದಾಸಣ್ಣಚಾರ್ಯರ ಮುಖ ಪೇಲವವಾಯ್ತು. ‘ಛೆ!’ ಎಂದರು. ಆಮೇಲೆ ಮೆತ್ತಗೆ ‘ಇವಳಿಗೆ ಏನಾದರೂ ಈ ವಿಷಯ ತಿಳಿದರೆ, ಬೆಂಕಿ ಇಟ್ಟಾಳು ನನ್ನ ತಲೆಗೆ. ಆಕೆಗೆ ದನಕರು ಅಂದರೆ ದೇವರು. ಗಬ್ಬ ನಿಲ್ಲದಿದ್ದರೆ ಬೇಡ, ಹಟ್ಟಿಯಲ್ಲೇ ಇರಲಿ ಎಂದು ಆಕೆ ಅಮೇರಿಕೆಯಲ್ಲಿರುವಾಗಲೇ ಹೇಳಿದ್ದಳು. ಆದರೆ, ನನಗೆ ಗಬ್ಬ ನಿಲ್ಲದ ಮೇಲೆ ಸಾಕುವುದು ವ್ಯರ್ಥ ಎಂಬ ಭಾವನೆ ಬಂತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಡಾ. ನಾ. ಮೊಗಸಾಲೆ ಬರೆದ ಕತೆ “ನುಗ್ಗೆಗಿಡ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ