Advertisement

Tag: Short story

ಎ. ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಆ ರಾತ್ರಿ ಯಕ್ಷಗಾನ ಎಲ್ಲಾ ನೋಡಿ ಮುಗಿದು ಬೆಳಿಗ್ಗೆ ಮನೆಗೆ ತಲುಪಿದೆ. ಕಣ್ಣೀರಿನ ಹೊರತು ಆ ದಿನ ಸಮಜಾಯಿಷಿ ಕೊಡಲು ನನ್ನಲ್ಲಿ ಯಾವ ಮಾತುಗಳೂ ಇರಲಿಲ್ಲ. ನಿಜ ನಾನೇನು ತಪ್ಪು ಮಾಡಿರಲಿಲ್ಲ, ಆದರೆ ಯಾಕೋ ನನಗೆ ಅಮ್ಮನನ್ನು ಒಬ್ಬಳನ್ನೇ ಬಿಟ್ಟು ಹೋದ ಆ ತಪ್ಪಿತಸ್ಥ ಭಾವ ಆ ದಿನದಿಂದ ಬಹಳವಾಗಿ ಕಾಡಿತು ಮಹೇಶ. ಆ ನೋವಿನಿಂದಾಗಿ ಆ ದಿನದಿಂದ ನಾನು ಎಂದಿಗೂ ಯಕ್ಷಗಾನದತ್ತ ಕಣ್ಣು ಹಾಯಿಸಲೇ ಇಲ್ಲ.
ಎ.ಬಿ. ಪಚ್ಚು ಬರೆದ ಕತೆ “ಮೈಸಾಸುರ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕತೆ

ಅಲಾ.. ಒಂದ್ ಜಾಕೀಟ್ ಬಟ್ಟೆ ಅರ‍್ಸಕ್ಕೆ ವರ್ಸ ಪೂರ‍್ತಿ ದುಡ್ ವಟ್ಮಾಡಿ ಬಟ್ಟೆ ಅಂಗ್ಡಿಗ್ ವೋಗಿದೀನಿ. ಕದಿಯದಾಗಿದ್ರೆ ಇಷ್ಟು ಕಸ್ಟ ತಗೀಬೇಕಾ? ಆ ದೇವ್ರೂ ಈ ಅನ್ಯಾಯ ನೋಡ್ಕ್ಯಂತ ಸುಮ್ಕಿದಾನಾ ಅಂಗಾರೆ? ಅಲಾ ಈ ಸೀರೆ ವಯರ್ ಬುಟ್ಟಿಲಿ ಯಾವಾಗ್ ಬಂದ್ ಸರ‍್ಕಂತು ಅಂತ? ಬವುಶ್ಯ ನನ್ ಇಂದ್ಗಡೀಕೇ ನಿಂತ್ಕಂದಿದ್ನಲ್ಲ ಇವ್ನು.. ಇವ್ನೇ ಎಲ್ಲಾರೂ.. ಇವ್ನೇ ಇವ್ನೇ! ಇನ್ಯಾರ್ ಇಂತಾ ಕ್ಯಲ್ಸ ಮಾಡ್ತರೆ? ಅಲಾ.. ಅದ್ಯಾ ಮಾಯ್ಕದಲ್ಲಿ ವಯರ್ ಬುಟ್ಟಿಗೆ ಸೀರೆ ತಗ್ದು ಆಕಿಬುಟ್ಟಿದ್ನೋ ಅಂತ!
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕಥೆ “ತಲೆ ಮ್ಯಾಕೆ ವೂದ ನೀರು” ನಿಮ್ಮ ಈ ಭಾನುವಾರದ ಓದಿಗೆ

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ಒಳಭಾಗಕ್ಕೆ ತೆರೆದುಕೊಂಡಿದ್ದ ಬಾಗಿಲಿಗೊರಗಿ ನಿಂತುಕೊಂಡ ಪ್ರಿಯಾ ಆಗಸದ ಶೂನ್ಯದಲ್ಲಿ ಮಿನುಗುತ್ತಿರುವ ನಕ್ಷತ್ರಗಳನ್ನು ಅರೆಮುಚ್ಚಿದ ಕಣ್ಣುಗಳಿಂದ ನೋಡುತ್ತಾ ಅಂದಳು “ನಾನು ಕೆಟ್ಟ ಅದೃಷ್ಟದ ಸಂಕೇತ ದಿನೂ. ನೀವು ಹೆಣ್ಣು ನೋಡಲು ಬಂದಾಗ ನಾನು ಏನೇನೋ ಕನಸು ಕಟ್ಟಿದೆ. ಆದ್ರೆ ಅಂದುಕೊಂಡದ್ದೇನೂ ನಿಜವಾಗ್ಲಿಲ್ಲ. ಈಗ ನೋಡು, ಇದೇ ನನ್ನ ಬದುಕು. ಇದೇ ನನ್ನ ಭಾಗ್ಯ” ಎನ್ನುತ್ತಾ ಮುಖವನ್ನು ಅತ್ತ ಹೊರಳಿಸಿ ಗಂಟಲಲ್ಲಿ ಕಟ್ಟಿ ನಿಂತ ಬಿಕ್ಕಳಿಕೆಯನ್ನು ಕಷ್ಟಪಟ್ಟು ತಹಬದಿಗೆ ತಂದುಕೊಂಡಳು.
ಡಾ. ಸುಭಾಷ್‌ ಪಟ್ಟಾಜೆ ಬರೆದ ಈ ಭಾನುವಾರದ ಕತೆ “ಹುಟ್ಟು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್‌ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ

Read More

ಭಾರತಿ ಬಿ.ವಿ. ಅನುವಾದಿಸಿದ ಮಾಂಟೋನ ಕತೆ “ದಾದಾ ಮಮ್ಮದ್”

ಬಾಗಿಲು ತೆರೆಯಿತು. ಒಬ್ಬ ಸಣಕಲು ಮನುಷ್ಯ ಒಳ ಬಂದ. ಮೊದಲ ನೋಟದಲ್ಲೇ ಅವನ ಮೀಸೆ ನನ್ನ ಗಮನ ಸೆಳೆಯಿತು. ನಿಜಕ್ಕೂ ಹೇಳಬೇಕೆಂದರೆ ಅವನ ಮೀಸೆಯಿಂದಲೇ ಅವನು ಎದ್ದು ಕಾಣುತ್ತಿದ್ದ, ಅದಿಲ್ಲದಿದ್ದರೆ ಯಾರೂ ಅವನ ಕಡೆಗೆ ಗಮನ ನೀಡದಂತಿದ್ದ ಆ ವ್ಯಕ್ತಿ. ಅವನು ತನ್ನ ಕೈಸರ್ ವಿಲ್ಹೆಮ್‌ ಮೀಸೆಯನ್ನು ಬೆರಳಿನಿಂದ ತೀಡಿಕೊಳ್ಳುತ್ತ ನನ್ನ ಮಂಚದ ಬಳಿ ಬಂದ. ಅವನ ಹಿಂದೆಯೇ ಒಂದಿಷ್ಟು ಜನರು ಒಳಬಂದರು. ಸಾದತ್‌ ಹಸನ್ ಮಾಂಟೋನ ಕತೆಗಳನ್ನು ಭಾರತಿ ಬಿ.ವಿ. “ಯಕ್..” ಎನ್ನುವ ಸಂಕಲನದ ಶೀರ್ಷಿಕೆಯಡಿ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕತೆ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ