Advertisement

Tag: Shridhar S Siddapura

ಬೆಣ್ಣೆಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜಲಪಾತದ ಎಡಮಗ್ಗಲಿನ ತಗ್ಗಿನಲಿ ನಿಂತು ನೋಡಿದರೆ ನೀರಿನ ನಡುವೆ ಅಲ್ಲಲ್ಲಿ ಗುಲಾಲಿ ಬಣ್ಣದ ರೇಖೆಗಳು ಕಾಣಿಸಿ ನಿಮ್ಮನ್ನು ತಬ್ಬಿಬ್ಬು ಗೊಳಿಸುತ್ತದೆ. ಯಾವುದು ದಿಟ ಯಾವುದು ಮಿಥ್ಯ ಎಂದರಿಯುವ ಹೊತ್ತಿಗೆ ಜಲಪಾತ ನಿಮ್ಮ ಮನಸ್ಸನ್ನು ಮತ್ತು ಒಡಲನ್ನು ಒದ್ದೆ ಮಾಡಿಸಿರುತ್ತದೆ. ಮೌನದಲ್ಲೇ ನೀವು ಮೇಲೆ ಬಂದು ಜಲಪಾತದ ಎಡ ಭುಜಕ್ಕಾನಿಸಿ ಕುಳಿತು ಧ್ಯಾನಸ್ಥರಾಗುವಿರಿ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಬರಹ

Read More

ಈ ಜಗ ಸೋಜಿಗ….: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಊರ ಚಾವಡಿಯಲ್ಲೊಂದು ಕೊಳ. ಕೊಳದ ಸನಿಹ ಗಡಿ ಹಾಕಿದಂತೆ ಹರಿವ ಚಂದ್ರಾನದಿ ಮತ್ತು ಕೊಳಲ ರಾಗ ತೆಗೆಯುವ ಸೀಸು ಜಲಧಾರೆ. ಸದಾ ಪ್ರಶಾಂತ ಸನ್ನಿಧಿ. ಅದರ ಸೌಂದರ್ಯಕ್ಕೆ ಮರಳಾಗದೇ ಮರಳಿದವರಿಲ್ಲ. ಗಂಟೆಗೆ ಸಾವಿರ ಸಾವಿರ ಕ್ಯೂಸೆಕ್ಸ್‌ ನೀರನ್ನ ಧರೆಗಿಳಿಸುವ ಭಗೀರಥ, ಸೀಸು ಜಲಧಾರೆ. ೨೪ ಗಂಟೆಯೂ ಬೇಸರಿಸದೆ ಬಸವಳಿಯದೇ ಸುರಿವ ಜಲಧಾರೆ ಎಂದು ಬತ್ತುವುದೆಂದು ಹೋಟೆಲ್‌ ಮಾಲಿಕನಲ್ಲಿ ಕೇಳಿದೆ. ಇಲ್ಲಿಯವರೆಗೆ ಬತ್ತಿದ್ದೇ ಇಲ್ಲವೆಂದ! ಹಿಮ ಟೋಪಿಗಳನ್ನು ಕರಗಿಸುತ್ತಲೇ ಇರುತ್ತದೆ. ಮತ್ತೆ ಮತ್ತೆ ನೀರುಣಿಸುವ ಚಂದ್ರಾ ನದಿಯ ಹಿಮಗಡ್ಡೆಗಳು!
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಸೋಲೆಂಬ ಅಲ್ಪ ವಿರಾಮದ ನಡುವೆ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಈ ಜನ್ಮದಲ್ಲಂತು ಇಂತಹ ಭೀಕರ ಮಳೆ ಕಂಡಿದ್ದಿಲ್ಲಾ!! ಕೆಳಗಿಳಿಯುತ್ತಾ ಜೀವಾದಿಗಳು ತಲ್ಲಣಿಸುತ್ತಿದ್ದವು. ತರಗಲೆಗಳ ತೂರಾಟ, ಹನಿಗಳ ಆರ್ಭಟ. ಕೆಳಗಿಳುತ್ತಲೇ ಮಳೆ ಕಡಿಮೆ ಆಗುವುದನ್ನೇ ತಲೆಗೊಂದು ಸೂರು ಹುಡುಕಿ ಹೊರಟೆವು. ಅಷ್ಟು ಮಳೆಯಲ್ಲೂ ಒಂದೆರಡು ಚಿತ್ರ ತೆಗೆದುದರಿಂದ ಎಲ್ಲರಿಗಿಂತ ಹಿಂದುಳಿದಿದ್ದ ನಾನು ಸ್ನೇಹಿತರಿಗಾಗಿ ಹುಡುಕಿದೆ. ಯಾರೂ ಕಾಣಲಿಲ್ಲ. ಭಟ್ಟರ ಹಿಂದೇ ಹೋದರೋ ಹೇಗೆ? ಭೈರವನಿಗೆ ಪೂಜೆ ಮುಗಿಸಿ ಭಟ್ಟರು ಆಗಲೇ ಹೋಗಿಯಾಗಿತ್ತು. ಭೈರವನ ಗುಡಿಯಲ್ಲಿ ಅಡಗುವ ಆಸೆ ಬಿಟ್ಟೆವು. ಸನಿಹದಲ್ಲೇ ಚಿಕ್ಕ ಗುಡಿಸಿಲಿನಂತಹ ಮಾಡಿತ್ತು. ಕಳ್ಳನಂತೆ ಅಲ್ಲಿ ಅಡಗಿಕೊಳ್ಳಲು ಹೊರಟೆ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಕೀರ್‌ಗಂಗಾ ದಾರಿಯಲ್ಲಿ ಸಿಕ್ಕನೊಬ್ಬ ಸಂತ: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ಕಾಲು ಸರಿಯಿಲ್ಲದ ಬಾಣಸಿಗನೊಬ್ಬ ಕಷ್ಟಪಟ್ಟು ಮೇಲೇರಿ ಬಂದು ಅಡುಗೆ ಮಾಡಿದ್ದ. ಆತನ ಬದುಕಿನ ಕಷ್ಟಗಳು ಏನಿದ್ದವೋ? ಸದಾ ಚಡಪಡಿಸುತ್ತಲೇ ಇರುತ್ತಿದ್ದ. ಹಿಮಾಚಲ, ಮೇಘಾಲಯದಲ್ಲಿ ಹಬ್ಬುತ್ತಿರುವ ಗಾಂಜಾ ವಾಸನೆ ಇಲ್ಲಿಯೂ ನನ್ನ ಮೂಗಿಗೆ ಬಡಿದಿತ್ತು!! ರಾತ್ರಿಯಾಗುತ್ತಲೇ ಆಗಸದ ಬೀದಿಯಲ್ಲಿ ತಾರಾ ಮೆರವಣಿಗೆ. ಎಲ್ಲೂ ಜಾಗವಿಲ್ಲದಂತೆ ಹಾಸಿದ್ದ ನಕ್ಷತ್ರ ಚಾಪೆ! ಕೌತುಕಮಯ ನೀಲಾಕಾಶ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ