Advertisement

Tag: stories

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ಚೆಕೊವ್‌ರ ಏಳು ಅಪರೂಪದ ಕತೆಗಳು

ಮಗಳೊಂದಿಗೆ ಒಂದು ದಿನ ಕಳೆಯುವ ಸುಖ ಈ ಎಲ್ಲ ವೈಭವಕ್ಕಿಂತ ಮಿಗಿಲಾದುದು ಎಂದು ಕನಸು ಕಾಣುತ್ತ ದಿನ ಮುಗಿಸುತ್ತಿರುತ್ತಾಳೆ ನತಾಲ್ಯಾ. ಅಷ್ಟರಲ್ಲಿ ಅವಳ ಮರಿ ದೆಲ್, ಅಂದರೆ ಪತಿ ದೇವರ ಆಗಮನವಾಗುತ್ತದೆ. ಸಣ್ಣದೊಂದು ಕೆಲಸದಲ್ಲಿದ್ದ ಆಕೆಯ ಗಂಡ ನಿಕಿಟಿನ್ ಹೆಂಡತಿ ಪ್ರಸಿದ್ಧಳಾಗುತ್ತಲೇ ಕೆಲಸ ಬಿಟ್ಟು ಅವಳ ಹಣದಲ್ಲೇ ಐಶಾರಾಮಿ ಜೀವನ ನಡೆಸುತ್ತಿದ್ದಾನೆ. ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿದ್ದಾನೆ. ನತಾಲ್ಯಾ ಎಷ್ಟು ಬಿಡಿಸಿಕೊಳ್ಳಲು ಯತ್ನಿಸಿದರೂ…

Read More

ಶೇಷಾದ್ರಿ ಕಿನಾರ ಕಥಾಸಂಕಲನಕ್ಕೆ ಕೆ ವಿ ತಿರುಮಲೇಶ್ ಬರೆದ ಮುನ್ನುಡಿ

ಕಿನಾರ ಬರೆಯುವುದು ಮನುಷ್ಯರ ಬಗ್ಗೆ, ತಾನು ಬರೆಯುವುದಕ್ಕೆ ನ್ಯಾಯ ಒದಗಿಸಬಲ್ಲೆನೇ ಇಲ್ಲವೇ ಎನ್ನುವುದು ಈ ಕತೆಗಾರನನ್ನು ಕಾಡುವ ಆತಂಕ ಎನಿಸುತ್ತದೆ. ಆದ ಕಾರಣ ಅವರ ಕತೆಗಳು ಒಂದೇ ವಸ್ತುವಿನ ಕುರಿತು ಬರೆದ ಬೇರೆ ಬೇರೆ ಕಥಾವೃತ್ತಿಗಳಂತೆ ಅನಿಸಿದರೆ ಆಶ್ಚರ್ಯವಿಲ್ಲ: “

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ