Advertisement

Tag: Story

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ “ಅಮೀನಾ”

ಮುರುಳಿಯ ಹೆಸರು ಹೇಳುತ್ತಲೇ ಮೆತ್ತಗಾಗಿದ್ದ ಅಮೀನಾ ತನ್ನ ಕತೆಯನ್ನು ಎಲ್ಲಿಂದ ಆರಂಭಿಸಬೇಕೆಂದು ಯೋಚಿಸಲಾರಂಭಿಸಿದಳು ‘ನಂಗೆ ನೆನಪಿರುವಂತೆ ನನ್ನ ಅಪ್ಪ ಲಾಡ್‌ ಸಾಬ್‌ ಗುಜುರಿ ಕೆಲಸ ಮಾಡುತ್ತಿದ್ದ, ದುಡಿದದ್ದಕ್ಕಿಂತ ಸೈಕಲ್‌ ತುಳಿದದ್ದೇ ಹೆಚ್ಚು. ಸೈಕಲ್ಲು ಚಲಿಸಿದರೆ ನಮ್ಮ ಬದುಕೂ ಚಲಿಸುತ್ತಿತ್ತು. ಅಮ್ಮಿ ಮನೇಲಿ ಬೀಡಿಯ ಜೊತೆ ನಮ್ಮ ಬದುಕನ್ನೂ ಕಟ್ಟುತ್ತಿದ್ದಳು…”
ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ

Read More

ಬದುಕ ಬೆಳಗಿಸುವ ಸರಳ ಸೂತ್ರಗಳು

ಮೊಗ್ಗು ಸಹಜವಾಗಿ ಬಿರಿದಾಗಲೇ ಹೂವಾಗುವುದು. ಬಗೆಬಗೆಯ ಸಸ್ಯವರ್ಗಗಳು ಸೇರಿಯೇ ಕಾಡಾಗುವುದು, ಮರಕ್ಕೆ ಭೂಮಿಯಾಸರೆ, ಮರವು ಬಳ್ಳಿಗಾಸರೆಯಾದರೆ ಹೂ, ಕಾಯಿ, ಹಣ್ಣುಗಳು ಸಕಲ ಜೀವಿಗಳಿಗಾಸರೆಯಾಗಿ ಪೊರೆಯುತ್ತವೆ. ಇಲ್ಲಿ ಎರೆಹುಳುವಿನಿಂದ ಹಿಡಿದು ಚಿಟ್ಟೆಗೂ, ಹುಲಿಗೂ, ಹುಲ್ಲಿಗೂ ಅದರದೇ ಆದ ಕೆಲಸಗಳಿವೆ. ಯಾವುದೂ ಮುಖ್ಯವಲ್ಲ; ಯಾವುದೂ ಅಮುಖ್ಯವಲ್ಲ. ಮನುಷ್ಯನ ಕೆಲಸಕ್ಕೂ, ಕಾಯಕಕ್ಕೂ ಅನ್ವಯಿಸಿಕೊಳ್ಳಬೇಕಾದ ಮಾತುಗಳಿವು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ದಡ ಮುಟ್ಟದ ದೋಣಿಗಳಲ್ಲಿ ಕೂತು…

ಒಂದಾದ ನಂತರ ಒಂದರಂತೆ ಮೂರು ಮಕ್ಕಳನ್ನು ಮಾಡಿಕೊಂಡು ನಂತರ ತಮ್ಮತಮ್ಮ ಕೆಲಸ, ಕಾರ್ಯಗಳ ಬಗ್ಗೆ ಗಮನ ಹರಿಸಬೇಕು ಎಂದು ಕೇವಲ ಒಂದು ದಿನದ ಹಿಂದೆ ಮಾತಾಡಿದ್ದಷ್ಟೇ ಅಲ್ಲ, ಮನೆಗೆ ಬಂದು ಸಹಾಯ ಮಾಡಬೇಕು ಎಂದು ನನ್ನನ್ನು ದುಂಬಾಲುಬಿದ್ದ ಅಪ್ಪಟ ಶ್ರೀಸಂಸಾರಿಯಂತೆ ಕಾಣುವ ವಿನಯ, ಅಲಿಶಾ ಜತೆ ನಿಜವಾಗಿಯೂ ಒಂದು ಬದ್ಧ ಸಂಬಂಧದಲ್ಲಿದ್ದಾನೆಯೇ?
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಆರನೆಯ ಕಂತು ನಿಮ್ಮ ಓದಿಗಾಗಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ