Advertisement

Tag: Story

‘ವಾಟ್ ದ ಹೆಕ್’ ಅಮ್ಮಾ…

‘ನೀವೇ ಸರಿ, ಅರವಿಂದರಾಯರೇ. ಮಕ್ಕಳನ್ನು ಬಹಳ ಚೆನ್ನಾಗಿ ಬೆಳೆಸಿದ್ದೀರಿ’ ಇನ್ನೂ ಅವರ ಮಾತು ಮುಗಿದಿಲ್ಲ. ಎಲ್ಲಿಂದ ಬಂತೋ ಒಂದು ದೊಡ್ಡ ಅಲೆ, ಅಲ್ಲಿ ಕೂತಿದ್ದವರನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿಬಿಟ್ಟಿತು. ಕಣ್ಣು ಮುಚ್ಚಿ ಬಿಡುವುದರಲ್ಲಿ ಎಲ್ಲ ಮರಳು, ಎಲ್ಲೆಲ್ಲೂ ನೀರು. ಜನರ ಕೂಗು, ಹಾಹಾಕಾರ. ಸುಕನ್ಯ ಕಣ್ಣು ಬಿಟ್ಟಾಗ ಹತ್ತಿರ ಯಾರೂ ಕಾಣುತ್ತಿಲ್ಲ. ‘ವಿನೂ, ವಿಶೂ’ ಜೋರಾಗಿ ಕೂಗುತ್ತಾ ಇಡೀ ಸಮುದ್ರದ ದಡದಲ್ಲಿ ಹುಚ್ಚು ಹಿಡಿದಂತೆ ಓಡುತ್ತಿದ್ದಾಳೆ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆಯ ಕಂತು

Read More

ಗುರುಪ್ರಸಾದ್‌ ಕಾಗಿನೆಲೆ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್‌” ಇಂದಿನಿಂದ ಶುರು

‘ಥ್ಯಾಂಕ್ಸ್ ಗಿವಿಂಗ್’ ಈ ನೀಳ್ಗತೆಯನ್ನು ಬರೆದು ಸುಮಾರು ಎಂಟುವರ್ಷಗಳೇ ಆಗಿವೆ. ‘ಹಿಜಾಬ್’ ಕಾದಂಬರಿಯ ಬರವಣಿಗೆ ನನ್ನನ್ನು ಬಸವಳಿಸಿತ್ತು. ಕೆಲವೊಮ್ಮೆ ಏನೂ ಬರೆಯಲಾರೆ ಅನ್ನಿಸಿತ್ತು. ತಿಂಗಳುಗಟ್ಟಲೆ ಬರವಣಿಗೆಯನ್ನು ನಿಲ್ಲಿಸಿದ್ದೆ. ಅದನ್ನು ಮರು ಉದ್ದೀಪನಗೊಳಿಸಿಕೊಳ್ಳಲು ಅದಕ್ಕೆ ವಸ್ತು, ವಿಷಯ ಮತ್ತು ನಿರೂಪಣೆಯಲ್ಲಿ ಸಂಪೂರ್ಣ ಬೇರೆಯಾಗಿರುವುದನ್ನು ಬರೆಯಬೇಕೆನ್ನಿಸಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ಹೊಚ್ಚಹೊಸ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್” ಕೆಂಡಸಂಪಿಗೆಯಲ್ಲಿ ಕೆಲವು ಕಂತುಗಳಲ್ಲಿ ಪ್ರತಿ ಶನಿವಾರ ಪ್ರಕಟವಾಗಲಿದೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ

ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”

Read More

ದೇವರ ಅಸ್ತಿತ್ವವನ್ನು ಹುಡುಕಾಡುವ ಕಥನ

ಯುವ ತಲೆಮಾರು ವಿದೇಶಗಳಲ್ಲಿ ನೆಲೆಗೊಳ್ಳುವಾಗ ಮನೆದೇವರ ಗೊಡವೆಯು ಯಾರಿಗೂ ಬೇಡವಾಗಿದೆ. ಆಧುನಿಕ ಯುಗವು ಬದಲಾವಣೆಯನ್ನು ಹೊಂದುತ್ತಿರುವ ಸಂದರ್ಭದಲ್ಲಿ ದೇವರು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದಾನೆಯೇ ಎಂಬ ಪ್ರಶ್ನೆಯನ್ನು ಎತ್ತಿಕೊಂಡು ಈ ಕಾದಂಬರಿಯನ್ನು ರಚಿಸಲಾಗಿದೆ.  ಲಿಂಗ ಮತ್ತು ಜಾತಿಯ ಆಧಾರದಲ್ಲಿ ಗಂಡಸರನ್ನು ಶೋಷಕರನ್ನಾಗಿಯೂ ಹೆಂಗಸರನ್ನು ಶೋಷಿತರನ್ನಾಗಿಯೂ, ಕಲ್ಪಿಸಿ ಅಭ್ಯಾಸವಾಗಿರುವ ಹೊತ್ತಿನಲ್ಲಿ ಲೇಖಕರು ವಸ್ತುಸ್ಥಿತಿಯ ಎರಡೂ ಮಗ್ಗುಲಿಗೆ ಕಣ್ಣುಹಾಯಿಸಿದಂತೆ ಗೋಚರಿಸುತ್ತದೆ.  ಡಾ. ನಾ. ಮೊಗಸಾಲೆಯವರ ‘ಇದ್ದೂ ಇಲ್ಲದ್ದುʼ ಕಾದಂಬರಿಯ ಕುರಿತು ಡಾ. ಸುಭಾಷ್ ಪಟ್ಟಾಜೆ ಬರೆದ ಬರಹ ಇಲ್ಲಿದೆ.

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ

ಚಿಕ್ಕವನಿದ್ದಾಗ ತನ್ನನ್ನು ಎಲ್ಲರೂ ಅದೆಷ್ಟು ಕಾಳಜಿಯಿಂದ ಮಾತನಾಡಿಸುತ್ತಿದ್ದರೆಂದರೆ, ಗೆಳೆಯರೆಲ್ಲ ಹೊಟ್ಟೆಕಿಚ್ಚು ಪಡುವಷ್ಟು. ಶಾಲೆಗೆ ಹೋಗಿ ಬರುವಾಗ ‘ಮಾಳಿಗಿ ಶಂಕರಪ್ಪನಂತ ಗಟ್ಟಿ ಕುಳ ತನ್ನ ಕರೆದು ಮಾತಾಡದಂದ್ರ ಹುಡುಗಾಟ್ಕೀನ?’ ಅಂದುಕೊಳ್ಳುತ್ತಿದ್ದ. ಬೇರೆಯವರು ನಕ್ಕೊಂಡೇ ಕೇಳುತ್ತಿದ್ದರು “ಏನ್ಲೇ ಶಿದ್ಲಿಂಗ, ನಿಮ್ಮ ಶಂಕರಪ್ಪ ಏನಂದ?” ತಮ್ಮತಮ್ಮಲ್ಲೇ ಕಣ್ಣು ಮಿಟುಕಿಸುತ್ತಿದ್ದರು. “ನೀ ಹಾಕ್ಕೊಂಡ ಅಂಗಿ ಸರಿಯಾಗೇತೇನ್ಲೆ? ಚೊಣ್ಣ ಬರೋಬರಿ ಆಗೇತಿಲ್ಲ? ನಿಮ್ಮವ್ವ ಮನ್ಯಾಗ ಇದ್ಲೇನು?”
‘ನಾನು ಮೆಚ್ಚಿನ ನನ್ನ ಕತೆ’ಯ ಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ ‘ಪಿರಾಮಿಡ್ಡಿನಿಂದೆದ್ದು ಬಂದವನು’

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ