Advertisement

Tag: Sudha Adukala

ಬದುಕ ಬೆಳಗಿಸುವ ಸರಳ ಸೂತ್ರಗಳು

ಮೊಗ್ಗು ಸಹಜವಾಗಿ ಬಿರಿದಾಗಲೇ ಹೂವಾಗುವುದು. ಬಗೆಬಗೆಯ ಸಸ್ಯವರ್ಗಗಳು ಸೇರಿಯೇ ಕಾಡಾಗುವುದು, ಮರಕ್ಕೆ ಭೂಮಿಯಾಸರೆ, ಮರವು ಬಳ್ಳಿಗಾಸರೆಯಾದರೆ ಹೂ, ಕಾಯಿ, ಹಣ್ಣುಗಳು ಸಕಲ ಜೀವಿಗಳಿಗಾಸರೆಯಾಗಿ ಪೊರೆಯುತ್ತವೆ. ಇಲ್ಲಿ ಎರೆಹುಳುವಿನಿಂದ ಹಿಡಿದು ಚಿಟ್ಟೆಗೂ, ಹುಲಿಗೂ, ಹುಲ್ಲಿಗೂ ಅದರದೇ ಆದ ಕೆಲಸಗಳಿವೆ. ಯಾವುದೂ ಮುಖ್ಯವಲ್ಲ; ಯಾವುದೂ ಅಮುಖ್ಯವಲ್ಲ. ಮನುಷ್ಯನ ಕೆಲಸಕ್ಕೂ, ಕಾಯಕಕ್ಕೂ ಅನ್ವಯಿಸಿಕೊಳ್ಳಬೇಕಾದ ಮಾತುಗಳಿವು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ರೂಪಾಂತರದ ಆಯಾಮಗಳು

ಮಾನವರು ಯಕ್ಷರಾಗುವ ಪ್ರಕ್ರಿಯೆ ನಮ್ಮೊಳಗೆ ಅಡಕವಾಗುತ್ತ ನಡೆದಾಗಲೂ ಕೆಲವೊಮ್ಮೆ ಭ್ರಮೆ ಮತ್ತು ವಾಸ್ತವಗಳು ಮನಸ್ಸಿನಲ್ಲಿ ತಾಡಿಸುತ್ತಲೇ ಇರುತ್ತಿದ್ದವು. ದುಃಶ್ಶಾಸನನ ವೇಷ ತೊಟ್ಟ ಅಪ್ಪ, ಭೀಮನಿಂದ ಪೆಟ್ಟುತಿಂದು ಯುದ್ಧರಂಗದಲ್ಲಿ ಓಡುತ್ತಿರುವಾಗ ಅವನೆಲ್ಲಾದರೂ ಅಪ್ಪನನ್ನು ಗದೆಯಿಂದ ಹೊಡೆದು ಕೊಂದಾನೆಂಬ ಭ್ರಮೆಯಲ್ಲಿ ‘ಬೇಡಾ’ ಎಂದು ಕಿರುಚಿದ್ದೂ ಇತ್ತು. ಕೌರವನನ್ನು ಬೆನ್ನಟ್ಟುವ ರೌದ್ರ ಭೀಮನ ಕಣ್ಣಿನ ಕೆಂಪಿಗೆ ಹೆದರಿ, ಅವನೆಲ್ಲಿಯಾದರೂ ಕೌರವನ ವೇಷಧಾರಿಯಾದ ನನ್ನಪ್ಪನ ತೊಡೆಯನ್ನೇ ಮುರಿದಾನೆಂದು ಚಡಪಡಿಸುತ್ತಿದ್ದುದು ಅತ್ತೆಗೆ ಇರಿಸುಮುರಿಸು ಮಾಡುತ್ತಿತ್ತು.
ಮನುಷ್ಯ ಹೊಂದಬಹುದಾದ ರೂಪಾಂತರಗಳ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಮಗಳು ಇಂದಿರಾಗೆ ನೆಹರೂ ಬರೆದ ಮೂರು ಪತ್ರಗಳು

ನಗರಗಳು ಬೆಳೆಯುತ್ತಾ ಹೋದಂತೆ, ಪಟ್ಟಣಗಳು ಮತ್ತು ದೇಶಗಳು ರೂಪುಗೊಳ್ಳತೊಡಗಿದವು. ಒಂದೇ ದೇಶದಲ್ಲಿ ಹತ್ತಿರ ವಾಸಿಸುವ ಜನರು ಪರಸ್ಪರರನ್ನು ಹೆಚ್ಚು ಹೆಚ್ಚು ಅರ್ಥಮಾಡಿಕೊಳ್ಳತೊಡಗಿದರು. ಅವರು ತಮ್ಮಿಂದ ದೂರದಲ್ಲಿ ಬೇರೆ ದೇಶಗಳಲ್ಲಿ ವಾಸಿಸುವ ಜನರಿಗಿಂತ ತಾವೇ ಶ್ರೇಷ್ಟರು ಎಂದು ಯೋಚಿಸತೊಡಗಿದರು. ಜವಾಹರಲಾಲ್‌ ನೆಹರೂ ತಮ್ಮ ಮಗಳು ಇಂದಿರಾಗಾಂಧಿಗೆ ಬರೆದಿದ್ದ ಪತ್ರಗಳನ್ನು ಸುಧಾ ಆಡುಕಳ ಕನ್ನಡಕ್ಕೆ ಅನುವಾದಿಸಿದ್ದು, ಮಕ್ಕಳ ದಿನಾಚರಣೆಯ ಈ ದಿನ ಅವುಗಳಲ್ಲಿನ ಮೂರು ಪತ್ರಗಳು ನಿಮ್ಮ ಓದಿಗೆ ಇಲ್ಲಿವೆ…

Read More

ನಾ ಕಾಣದ ನನ್ನಜ್ಜಿಯರು

ಹೆಣ್ಣುಲೋಕದ ಎಲ್ಲ ತಲ್ಲಣಗಳನ್ನು ನನ್ನೊಳಗೆ ಬೀಜರೂಪಿಯಾಗಿ ಮೊಳೆಯಿಸಿದ್ದಾರೆ. ಆದರೂ ನನ್ನನ್ನು ಅಜ್ಜಿಯ ವಾತ್ಸಲ್ಯದಿಂದ ಪೊರೆದಿದ್ದು ಮಾತ್ರ ನಮ್ಮೂರಿನ ಬಡ್ಕಜ್ಜಿ. ತನ್ನ ಐದನೆಯ ವಯಸ್ಸಿಗೆ ಗಂಡನನ್ನು ಕಳಕೊಂಡು ಜೀವನಪೂರ್ತಿ ಒಂಟಿಯಾಗಿಯೇ ಬದುಕಿದ ಅವಳಿಗೆ ನನ್ನನ್ನೂ ಸೇರಿಸಿದಂತೆ ನೂರಾರು ಮೊಮ್ಮಕ್ಕಳು. ಅರವತ್ತು ದಾಟಿದ ತನ್ನ ಗಂಡ ಮೂರನೆಯಹೆಂಡತಿಯಾದ ತನ್ನನ್ನು ಹೆಗಲಮೇಲೆ ಕೂರಿಸಿಕೊಂಡು ಹೊಳೆದಾಟಿಸಿದ ನೆನಪು ಮಾತ್ರ ಅವಳಿಗಿತ್ತು, ಅವಳ ಮದುವೆಯ ಕಥೆಯನ್ನೂ ಹಾಸ್ಯವಾಗಿ ಹೇಳಿ ನಗಿಸಬಲ್ಲಷ್ಟು ಸ್ಥಿತಪ್ರಜ್ಞತೆ ಅವಳಿಗೆ ಅದೆಲ್ಲಿಂದ ಬಂದಿತ್ತೋ. ಅಜ್ಜಿಯರ ಲೋಕದ ಸಂವೇದನೆಗಳನ್ನು ಸೂಕ್ಷ್ಮವಾಗಿ ಹೆಣೆದಿದ್ದಾರೆ ಸುಧಾ ಆಡುಕಳ

Read More

ಅಕ್ಷರಗಳು ಅನಾವರಣಗೊಳಿಸುವ ಸತ್ಯ

ಸಮಾಜದ ಶ್ರೇಣಿಯಲ್ಲಿ ಮೇಲಿನ ಸ್ಥರದಲ್ಲಿ ನಿಂತ ನಮಗೆ ಕೆಳಗೆ ಕಣ್ಣುಹಾಯಿಸಿದಾಗ ಕಂಡುದಷ್ಟೇ ಸತ್ಯ ಎಂಬ ನಮ್ಮ ಭ್ರಮೆಯನ್ನು ಇಲ್ಲಿನ ಪ್ರತಿಯೊಂದು ಸಾಲುಗಳೂ ‘ಚಿತ್’ ಮಾಡುತ್ತಲೇ ಹೋಗುತ್ತವೆ. ನಮ್ಮ ಭ್ರಮಾಲೋಕ ಕಳಚಿದೊಡನೆ ‘ವಾಸ್ತವದ ಕಹಿಸತ್ಯ’ವನ್ನು ಒಂದಿನಿತೂ ಉತ್ಪ್ರೇಕ್ಷೆಯಿಲ್ಲದೆ ನಮ್ಮೆದುರು ತೆರೆದಿಡುತ್ತದೆ. ‘ಇದು ಸತ್ಯ, ಇದು ವಾಸ್ತವ. ನೀನು ಗ್ರಹಿಸಬೇಕಾದುದು ಹೀಗೆ. ಈ ಗ್ರಹಿಕೆಯೊಂದೇ ಸಮಾನತೆಯೆಡೆಗೆ ನಿನ್ನನ್ನೂ, ನನ್ನನ್ನೂ ಕರೆದೊಯ್ಯಬಲ್ಲುದು. ಸಾಧ್ಯವೇನು ನಿನಗೆ?’ ಎಂಬಂತೆ ತಣ್ಣಗೆ ಪ್ರಶ್ನಿಸುತ್ತವೆ.
ದೇವನೂರ ಮಹಾದೇವ ಬರೆದ “ಎದೆಗೆ ಬಿದ್ದ ಅಕ್ಷರ” ಕೃತಿಯ ಕುರಿತು ಸುಧಾ ಆಡುಕಳ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ