ಕನ್ನಡ ಪ್ರಜ್ಞೆ: ಸುಕನ್ಯಾ ಕನಾರಳ್ಳಿ ಅಂಕಣ
ನನ್ನ ಮನೆಗೆ ಯಾವ ಮಕ್ಕಳು ಬಂದರೂ ಕನ್ನಡದಲ್ಲಿ ಮಾತಾಡೋದಾದ್ರೆ ಮಾತ್ರ ಒಳಗೆ ಬನ್ನಿ ಅಂತ ಯಾವ ಮುಲಾಜಿಲ್ಲದೆ ಹೇಳಿಬಿಡ್ತೀನಿ. ಮೊನ್ನೆ ಮಹಾ ತರಾತುರಿಯಲ್ಲಿ ನಾಲ್ಕು ಮಕ್ಕಳು ಬಾಗಿಲು ಬಡಿದ್ರು. ಎಲ್ರೂ ಇಂಗ್ಲೀಶಲ್ಲಿ ಒಟ್ಟಿಗೆ ಮಾತಾಡ್ತಾ ಇದ್ರು. ಅವರನ್ನ ತಡೆದು ನಿಲ್ಲಿಸಿ ‘ಕನ್ನಡದಲ್ಲಿ ಹೇಳಿ’ ಅಂದೆ. ತಟ್ಟನೆ ಮೌನ. ಅರೆ ಗಳಿಗೆಯ ನಂತರ ಒಂದು ಮಗು ಧೈರ್ಯ ಮಾಡಿ ‘ನಾವು ಪ್ಲೇ ಮಾಡ್ತಾ ಇದೀವಿ. ಅಲ್ಲಿ ಅಭಿ ಕೌಂಟ್ ಮಾಡ್ತಾ ಇದಾನೆ. ಅದಕ್ಕೆ ನಾವೆಲ್ಲ ರನ್ ಮಾಡಿಕೊಂಡು ಬಂದ್ವಿ. ನಿಮ್ಮನೇಲಿ ಹೈಡ್ ಮಾಡಿಕೊಬಹುದಾ?ʼನಾನು ಕೇಳಿದ್ದು ಕನ್ನಡದಲ್ಲಿ ಹೇಳಿ ಅಂತ, ಕಿಚಡಿಯಲ್ಲಿ ಅಲ್ಲ ಎಂದಿದ್ದು ಪಾಪ ಮಕ್ಕಳಿಗೆ ಅರ್ಥ ಆಗಲಿಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎರಡನೆಯ ಬರಹ
