Advertisement

Tag: Suma Sathish

ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಪ್ರಕೃತಿಯನ್ನು ತಾಯಾಗಿ ಆರಾಧಿಸುವ ಪರಂಪರೆ ನಮ್ಮದು. ಸುಗ್ಗಿಯ ಆಚರಣೆ, ಗೋಮಾಳಗಳು, ಊರಿಗೊಂದರಂತೆ ಇದ್ದ ಗುಂಡುದೋಪುಗಳು, ಇರುವೆ ಗೂಡಿಗೂ ನುಚ್ಚು ಎರೆವ ಸಂಸ್ಕೃತಿ, ಜಂಗಮಯ್ಯ, ಭಿಕ್ಷುಕ, ಆಯಗಾರರು, ದನಕರು, ಪ್ರಾಣಿ ಪಕ್ಷಿ ತಿಂದುಂಡ ನಂತರ ಮನೆಗೆ ಒಯ್ಯುವ ಸುಗ್ಗಿ ಆಚರಣೆ ಇಂತಹ ಸದಾಚಾರಗಳೆಲ್ಲಾ ನಮ್ಮ ನಡುವಿಂದ ಕಣ್ಮರೆಯಾಗಿದೆ. ಅಂತಹದ್ದರಲ್ಲಿ ಇಲ್ಲಿ ನಮಗೆ ಅನನ್ಯವೆನಿಸುವುದು ತಿಮ್ಮಕ್ಕ ಪ್ರಕೃತಿಯನ್ನು ಕೂಸಾಗಿ ಭಾವಿಸಿದ ಪರಿ. ಇದು ಇನ್ನೂ ಒಂದು ಹೆಜ್ಜೆ ಮಿಗಿಲಾದುದು. ನಮಗೊಂದು ಮಾನವೀಯ ಪರಂಪರೆಯನ್ನು ಹಾಸಿ ಕೊಟ್ಟಿರುವಂತಹದ್ದು.
ಸಾವಿರದ ಮಕ್ಕಳ ಮಹಾಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಸುಮಾ ಸತೀಶ್ ಬರಹ

Read More

ಕದರಪ್ಪನ ಗುಡೀ‌ ಮುಂದ್ಲ ಕಲ್ಲು: ಸುಮಾ ಸತೀಶ್ ಸರಣಿ

ಅವ್ನೂ ಬಂದ. ಚೆಂದಾಗಿ ಕಲ್ಲು ತೊಳುಸ್ದ‌. ಅತ್ಲಾಗೆ ತಿರುಗ್ದ, ಇತ್ಲಾಗೆ ಬಗ್ಗಿದ, ತಲೆ ಕೆರ್ಕಂಡ. ಯೋನೂ ತಿಳೀವಲ್ದು. ಅಂಗಂತ ಯೋಳೀರೆ ಜನ ಏನ್ ಅನ್ಕಂಬಾಕಿಲ್ಲಾ. ನನ್ ಮರ್ವಾದಿ ಮಣ್ಣಾಗಾಕಿಲ್ವೇ ಅಂದಿದ್ದೇ, ಬ್ಯಾರೇನೇ ಯೋಳ್ದ. ಇದು ನರಮನುಸ್ಯರ ಕೈಲಿ ಓದಾಕಾಗಾಕಿಲ್ಲ. ದೇವನಾಗರೀ ಲಿಪಿ ಅಂಬ್ತಾರೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ನಿಮ್ಮ ಓದಿಗೆ

Read More

ರುಕ್ಮಣಮ್ಮಜ್ಜಿಯ ನೆನಪುಗಳು….: ಸುಮಾ ಸತೀಶ್ ಸರಣಿ

ಅಂಗಡೀಗೇ ಮಾರಾಕೆ ಮಾತ್ರ ನಮ್ಮಜ್ಜೀ ತಿಂಡೀಗ್ಳು ಮೀಸ್ಲಲ್ಲ. ಮಾರಾಕಿಂತ ರವಷ್ಟು ಜಾಸ್ತೀನೆ ದಾನ ಮಾಡ್ತಿತ್ತು. ಒಂದು ಬೇಸನ್ ತಿಂಡಿ ಮಾರಾಕಿಟ್ರೆ, ಎಲ್ಡು ಬೇಸನ್ ಅವ್ರಿವ್ರಿಗೆ ಕೊಡೋಕೇ ಸಾಲ್ತಿರ್ಲಿಲ್ಲ. ಆದ್ರೂ ಒಲೆ ಮುಂದೆ ಕುಂತ್ಕಣಾಕೆ ಎಂದ್ರೂ ಬ್ಯಾಸ್ರ ಪಟ್ಟಿದ್ದಿಲ್ಲ. ಪಕ್ಕದ್ ಮನ್ಯಾಗಿದ್ದ ವಾರ್ಗಿತ್ತೀಗೆ ಮನೆ ತುಂಬಾ ಮಕ್ಳು. ಅದ್ರಾಗೂ ಸಾಲಾಗಿ ಒಂಬತ್ತು ಹೆಣ್ಣುಮಕ್ಕಳು. ಅದ್ಕೇಯಾ ತಿಂಡೀ ತೀರ್ಥದಾಗೆ ಕೈ ಬಿಗಿ ಮಾಡ್ತಿದ್ರು. ನಮ್ಮಜ್ಜೀ ಜೀವ ನಿಲ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಅಜ್ಜಿ ರುಕ್ಮಣ್ಣಮ್ಮನವರ ಕುರಿತು ಬರೆದಿದ್ದಾರೆ

Read More

ನಾಟಕಗಳ ನಾಟಕ: ಸುಮಾ ಸತೀಶ್ ಸರಣಿ

ನಮ್ಮಪ್ಪುಂಗೆ ನಾಟಕ ಅಂದ್ರೆ ಹುಚ್ಚು. ನಮ್ಮೂರ್ನಾಗೇನೂ ನಾಟಕದ ಕಂಪನಿ ಇರ್ಲಿಲ್ಲವಲ್ಲ. ವರ್ಸುಕ್ಕೆ ಒಂದೋ ಎಲ್ಡೋ ಆಟೇಯಾ. ಮಾಸ್ಟರ್ ಹಿರಣ್ಣಯ್ಯ ಅವುರ್ದು ಎಲ್ಲಾ ನಾಟಕದ ಕ್ಯಾಸೆಟ್ಟೂ ಇದ್ವು. ಟೇಪ್ ರೆಕಾರ್ಡರ್ ನಾಗೆ ಜಿನಾ ಅದ್ನೇ ಕೇಳೋದು. ಒಂದೊಂದು ನಾಟಕವೂ ನೂರಾರು ಸತಿ ಕೇಳಿದ್ವಿ. ಎಚ್ಚಮ ನಾಯಕ, ಕಪಿಮುಷ್ಟಿ, ಭ್ರಷ್ಟಾಚಾರ, ಲಂಚಾವತಾರ, ಫೋನಾವತಾರ, ದೇವದಾಸಿ, ನಡುಬೀದಿ ನಾರಾಯಣ…ಕೇಳೀ ಕೇಳೀ ನಮ್ಗೆ ಬಾಯಿ ಪಾಟ ಆಗೋಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಊರಿನಲ್ಲಿ ನಡೆಯುತ್ತಿದ್ದ ನಾಟಕಗಳ ಕುರಿತು ಬರೆದಿದ್ದಾರೆ

Read More

ಅಮ್ಮನ ದ್ಯಾವ್ರು: ಸುಮಾ ಸತೀಶ್ ಸರಣಿ

ಅವು ಈಗಿನ್ ಕಾಲುದ್ ಗುಲಾಬಿ ಅಲ್ಲ್ ಕಣೇಳಿ. ರೋಜಾ ಬಣ್ದವು. ತೆಳ್ಳುಗಿರಾ ರೆಕ್ಕೆಗ್ಳು. ಬಲ್ ನಾಜೂಕು. ಗಟ್ಟಿಯಾಗಿ ಒತ್ತಿದ್ರೆ ಬಾಡೋಗೋಂತವು. ಚಿಕ್ಕದಾದ್ರೆ ಐದು ಪೈಸಾ. ದೊಡ್ಡವು ಹತ್ತು ಪೈಸಾ. ಸ್ಯಾನೇ ದೊಡ್ಡವು ನಾಕಾಣೆ. ಮನ್ಯಾಗೆ ಇರಾ ಚಿಲ್ರೆ ಹುಡುಕೀ ಹುಡುಕೀ ಅಮ್ಮ‌ ರಾತ್ರೀನೇ ರೆಡಿ ಇಕ್ಕಿರ್ತಿತ್ತು. ಮದ್ಲೇ ಗೊತ್ತಿರ್ತಿತ್ತಲ್ಲ. ಆದ್ರೂ ಸತ ಗುಲಾಬಿ ಸ್ಯಾನೆ ಇದ್ರೆ ಆಸೆ. ಅವುನ್ ತಾವ ಕೊಸರಾಡೋದು. ಇನ್ನೊಂದು ಹಾಕು, ಇದು ಚಿಕ್ದು, ಇದು ರೆಕ್ಕೆ ಕಿತ್ತೋಗದೆ, ಬಾಡೋಗದೆ, ಸಿಕ್ಕಾಪಟ್ಟೆ ಕಾಸು ಯೋಳ್ತೀಯಾ. ನಾಳಿಂದ ಬ್ಯಾಡಾಕ್ಕೆ ಬ್ಯಾಡ ಇಂಗೆ ನಮ್ಮಮ್ಮುನ್ ಕೂಗಾಟ. ಅವ್ನೂ ಕಮ್ಮಿ ಇರ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ