Advertisement

Tag: sumaveena

ಅನುರೂಪ ವಸ್ತುಗಳ ಸಂಚಯನ ಎಲೆ ಅಡಿಕೆ ಚೀಲ: ಸುಮಾವೀಣಾ ಸರಣಿ

ನಮ್ಮ ಮೊಬೈಲ್‌ಗೆ ಈಗ ಫಿಂಗರ್ ಪ್ರಿಂಟ್ಸ್ ಲಾಕ್ ಇದೆಯಲ್ಲಾ ಹಾಗೆ ಅಜ್ಜಿ ತನ್ನ ಚೀಲಕ್ಕೆ ಹಾಕುತ್ತಿದ್ದ ನ್ನಾಟಿ ನ್ನಾಟ್ ಅನ್ನು ಯಾರಿಗು ಬಿಚ್ಚಲಾಗುತ್ತಿರಲಿಲ್ಲ. ಮುರಿದ ಆಭರಣದ ಚೂರುಗಳು ಬೆಳ್ಳಿಯ ಚೂರುಗಳನ್ನು ಚಿಕ್ಕ ಪ್ಲಾಸ್ಟಿಕ್‌ನಲ್ಲಿ ಹಾಕಿ ಚೀಲದ ಒಳ ಪದರದ ಒಳ ಪದರದಲ್ಲಿ ಇಡುವುದು, ಅವರ ಇವರ ತೋಟಕ್ಕೆ ಹೋದಾಗ ಅಪರೂಪದ ತರಕಾರಿ ಬೀಜ ಸಿಕ್ಕರೆ ಅದನ್ನು ಅದರಲ್ಲೆ ಇಡುವುದು, ಅಲ್ಲೇ ಬಿಡಿಸಿ ಅಲ್ಲೇ ಮುಡಿದುಕೊಳ್ಳಲು ಹೂ ಕಟ್ಟುವ ದಾರವೂ ಅಲ್ಲೇ ಇರುತ್ತಿತ್ತು. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದ, ಗಂಧ ಅದರಲ್ಲೇ ಇಡುವುದು. ತಲೆಸುತ್ತುವಿಕೆಗೆ, ಅಜೀರ್ಣಕ್ಕೆ, ಬಾಯಿ ವಾಸನೆ ಬರದಂತೆ ತಡೆಯಲು, ಹಲ್ಲು ನೋವಿಗೆ, ಶೀತಕ್ಕೆ ನಶ್ಯ ಎಲ್ಲಾ ಅದರಲ್ಲೇ ಇರುತ್ತಿತ್ತು.ಸುಮಾವೀಣಾ ಬರೆಯುವ “ಮಾತು ಖ್ಯಾತೆ” ಸರಣಿ ಸರಣಿ

Read More

ಆಟೋ ಕರೆಕ್ಷನ್: ಸುಮಾವೀಣಾ ಸರಣಿ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್‌ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ

Read More

ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ

‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ

Read More

ಭಾಷೆಯೊಳಗೆ ಇನ್ನೊಂದು ಭಾಷೆ: ಸುಮಾವೀಣಾ ಸರಣಿ

ದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್ದರೆ ಚೆನ್ನಾಗಿತ್ತು. ಸುಮ್ಮನಿರಲಾರದೆ “ಇದು ಏನು ಚಟ್ನಿ” ಎಂದೆ. ಹೊಟೆಲ್ ಮಾಣಿಗೆ ಕನ್ನಡ ಅರ್ಥವಾಯಿತು ಆದರೆ ಉತ್ತರವನ್ನು ತೆಲುಗಿನಲ್ಲಿಯೇ “ಇದಿ ಪಲ್ಲಿ ಚಟ್ನಿ” ಎಂದ. ಕಸಿವಿಸಿ ಆಯಿತು “ಹೇಗ್ ಮಾಡ್ತೀರಿ?” ಅಂದೆ ಅದಕ್ಕವನು “ಪಲ್ಲಿಲನು ಧಂಚಿ, ವೆಯಿಂಚಿ, ಪುಡಿಛೇಸಿ…” ಎನ್ನುತ್ತಿದ್ದಂತೆ ವಾಕರಿಕೆ ಬರಲು ಶುರುವಾಯಿತು. ಕನ್ನಡದಲ್ಲಿ ‘ಪಲ್ಲಿ’ ಅಂದರೆ ‘ಹಲ್ಲಿ’ ಅಲ್ಲವೆ. ಆದರೂ ಬಿಡಲಿಲ್ಲ; ಗೂಗಲಮ್ಮನ ಸಹಾಯ ಪಡೆದು ನೋಡಿದರೆ ತೆಲುಗಿನಲ್ಲಿ ‘ಪಲ್ಲಿ’ ಅಂದರೆ ಕನ್ನಡದಲ್ಲಿ ‘ನೆಲಗಡಲೆ’ ಅಂತಿತ್ತು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೆರಡನೆಯ ಬರಹ ನಿಮ್ಮ ಓದಿಗೆ

Read More

ಮನುಷ್ಯ ಮೃಗವಾಗುತ್ತಿರುವನೆ?: ಸುಮಾವೀಣಾ ಸರಣಿ

ವಾಹನಗಳ ವಿಚಾರಕ್ಕೆ ಬಂದಾಗ ಗಾಳಿ ಇದ್ದರೆ ಗಾಲಿ ಓಡಲು ಸಾಧ್ಯ ಅಲ್ವೆ! ಸ್ವಲ್ಪ ಗಾಳಿ ಹೆಚ್ಚಾದರೂ ವಾಹನಗಳಾಗಲಿ, ಮನುಷ್ಯನಾಗಲಿ ಇರುವುದಿಲ್ಲ. ಗಾಳಿ ಹೆಚ್ಚಾಗಿ ಸೈಕಲ್ ಬರ್ಸ್ಟ್ ಆಯಿತು. ಅದೇ ಗಾಳಿ ಇಲ್ಲದೆ ಹೋದರೆ ಅದು ಓಡುವುದೇ ಇಲ್ಲ ಪಂಚರ್ ಆಗುತ್ತದೆ. ಅಂತೆಯೇ ಮಾನವ ಉಸಿರುಗಟ್ಟಿ ಸಾಯುತ್ತಾನೆ. ಹೌದು! ಮಾನವನ ಬದುಕು ಉಸಿರು ಹೋದಾಗ ‘ಸತ್ತರು’, ‘ಅದು’, ‘ಇದು’, ‘ಶವ’ ಎಂಬುದಾಗಿ ಮಾತನಾಡುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೊಂದನೆಯ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ