Advertisement

Tag: sumaveena

ಪದಗಳಲ್ಲಡಗಿದ ಅನೇಕಾರ್ಥ ಮತ್ತು ನ್ಯಾಂಡೊ ಪೆರಾಡೊ: ಸುಮಾವೀಣಾ ಸರಣಿ

ಈ ‘ಮಾನ’ ಎಂದಾಗ ಮೊನ್ನೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತವೇ ನೆನಪಾಗುತ್ತದೆ. ‘ವಿಮಾನ’ ಬರೆ ಪ್ರಯಾಣಿಕರನ್ನು ಹೊತ್ತು ಸಾಗುವುದಲ್ಲ. ದೇವಾಲಯದ ಗರ್ಭಗುಡಿಯ ಮೇಲ್ಭಾಗದ ಗೋಪುರಕ್ಕೂ ‘ವಿಮಾನ’ ಎಂದು ಕರೆಯುತ್ತಾರೆ. ವಿಚಿತ್ರ ಎಂದರೆ ಪಾರ್ಥೀವ ಶರೀರವನ್ನು ಸಾಗಿಸುವ ಬಿದಿರಿನ ಜೋಡಣೆಗೂ ವಿಮಾನವೆನ್ನುವರು. ಒಂದೊಮ್ಮೆ ತಿರುಪತಿ ಗೋವಿಂದರಾಜ ದೇವಸ್ಥಾನವನ್ನು ವೀಕ್ಷಣೆ ಮಾಡುತ್ತಾ ಇದು ‘ವಿಮಾನ ಗೋಪುರ’ ಎಂದು ವಿವರಿಸುತ್ತಿದ್ದಂತೆ ನಿಜವಾಗಿ ವಿಮಾನವೊಂದು ಹಾರಿ ಹೋಗಿದ್ದು ಇಲ್ಲಿ ನೆನಪಾಗುತ್ತಿದೆ…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ಕಾವ್ಯದ ಮಳೆ ಸುರಿಸಿ ಮುಕ್ತರಾದ ವೆಂಕಟೇಶಮೂರ್ತಿಗಳು: ಸುಮಾವೀಣಾ ಸರಣಿ

ಬೆಂಗಳೂರಿನ ಸಂತಜೋಸೆಫರ ಕಾಲೇಜಿನಲ್ಲಿ ಸತತ 27 ವರ್ಷ ಒಂದೇ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಮಾಯವಾಗಿದ್ದ ಕನ್ನಡವನ್ನು ಕನ್ನಡ ಸಂಘ ಮಾಡುವ ಮೂಲಕ ಕನ್ನಡಮಯವಾಗಿಸಿದ್ದರು. ತಮ್ಮ ಪುಸ್ತಕಗಳಲ್ಲದೆ ತಮ್ಮ ವಿದ್ಯಾರ್ಥಿಗಳಿಂದಲೂ ಪುಸ್ತಕವನ್ನು ಹೊರತಂದವರು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತೊಂಭತ್ತನೆಯ ಬರಹ ನಿಮ್ಮ ಓದಿಗೆ

Read More

ಮನಸ್ಸರಳಿಸುವ ಮೋಹಕ ರಂಗೋಲಿ: ಸುಮಾವೀಣಾ ಸರಣಿ

ಭಾರತೀಯ ರಂಗೋಲಿಗಳಲ್ಲಿ ಪರ್ವತ ಪ್ರಾಂತ್ಯ, ಕರಾವಳಿ ಮತ್ತು ಮೈದಾನ ಪ್ರಾಂತ್ಯಗಳಲ್ಲಿ ವಿಭಿನ್ನವಾಗಿ ಮೂಡಿಬರುತ್ತವೆ. ಪರ್ವತ ಪ್ರಾಂತ್ಯ ಅಂದರೆ ರಾಜಸ್ಥಾನ, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಇಲ್ಲಿ ಬಿಡಿಸುವ ರಂಗೋಲಿ ರೇಖೆಗಳನ್ನು ಕೂಡಿಕೊಂಡಿದ್ದು ಅಗಲದ್ದಾಗಿರುತ್ತದೆ. ಚಿಕ್ಕಚಿಕ್ಕ ರೇಖೆಗಳನ್ನು ಬಳಸಿ ಬಂಗಾಳ ಮತ್ತು ಬಿಹಾರ ಪ್ರಾಂತ್ಯದವರು ಬಿಡಿಸುತ್ತಾರೆ. ಇವೆರಡರ ಜೊತೆಗೆ ಬಳ್ಳಿಗಳ ರಂಗೋಲಿ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿದೆ. ಕೇರಳದವರ ಪುಷ್ಪರಂಗೋಲಿಯಂತೂ ವಿಶ್ವವಿಖ್ಯಾತ. ಓಣಂ ಆಚರಣೆಯ ಅವಿಭ್ಯಾಜ್ಯ ಅಂಗ ಎಂದರೆ ಈ ಪುಷ್ಪರಂಗೋಲಿ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೆಂಟನೆಯ ಬರಹ ನಿಮ್ಮ ಓದಿಗೆ

Read More

ಚಿತ್ರಹಿಂಸೆ ಮತ್ತು ಹೆಡ್ ಕುಕ್: ಸುಮಾವೀಣಾ ಸರಣಿ

ಸೀನರಿ ಅಂದರೆ ನಮ್ಮ ಚಿತ್ರವನ್ನು ಇನ್ನೊಮ್ಮೆ ನೋಡುವ ಸೀನ್ ಇರುತ್ತಲೇ ಇರಲಿಲ್ಲ. ಅದೇ ಸೊರಗಿದ ಮರಗಿಡಬಳ್ಳಿ, ಕೊರಕಲು ನದಿ, ಒಂಟಿ ಕಿಟಕಿಯ ಮನೆ, ರೆಕ್ಕೆ ಸುಟ್ಟಂಥ ಹಕ್ಕಿ, ಸೊಟ್ಟ ರಸ್ತೆ ಹೀಗೆ ಒಂದೇ ಎರಡೇ…. ಸ್ಪುರದ್ರೂಪಿ ಮನುಷ್ಯ ಎಂದೂ ನಮ್ಮಿಂದ ರೂಪುಗೊಳ್ಳಲೇ ಇಲ್ಲ ಬಿಡಿ…. ಅಂತೂ ಚಿತ್ರ -ವಿಚಿತ್ರ ಚಿತ್ರಗಳನ್ನು ಬಿಡಿಸುತ್ತಲೇ ಇದ್ದ ನಮಗೆ ಅನಿವಾರ್ಯವಾಗುತ್ತಿದ್ದುದು ಸೈನ್ಸಿನ ಗಿಡದ ಚಿತ್ರಬಿಡಿಸಿ ಭಾಗಗಳನ್ನು ಗುರುತಿಸಿ ಮತ್ತು ಸೋಷಿಯಲ್ ಸೈನ್ಸಿನ ಭಾರತ ಭೂಪಟ ಬಿಡಿಸಿ ಸ್ಥಳ ಗುರುತಿಸಿ ಎನ್ನುವ ಪ್ರಶ್ನೆ. ಸೈನ್ಸಿನ ಪ್ರಶ್ನೆಯನ್ನು ಎದುರಿಸಿ ಮಾರ್ಕ್ಸ್ ತೆಗೆಯುತ್ತಿದ್ದೆವಾದರೂ ಬೇರು, ಕಾಂಡ, ಎಲೆಗಳು ಕೆಂಪು ಇಂಕಿನಲ್ಲಿ ತಿದ್ದುಪಡಿಯಾಗುತ್ತಿದ್ದವು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೇಳನೆಯ ಬರಹ ನಿಮ್ಮ ಓದಿಗೆ

Read More

ಯುವಸಂಧಾನಕಿ ಅನಲೆ ಮತ್ತು ಯುದ್ಧವಿರೋಧಿ ಆ್ಯನ್: ಸುಮಾವೀಣಾ ಬರಹ

ನಮಗಿಲ್ಲಿ ಅನಲೆ ಯುದ್ಧದ ನೇರ ಭಾಗಿತ್ವದಿಂದ ನೋವನ್ನು ಅನುಭವಿಸಿ ಹೆಣ್ಣಿನ ಸಲುವಾದ ಹೋರಾಟವನ್ನು ಮಾಡಲು ಆಲೋಚಿಸಿ ಯುದ್ಧವನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಾಳೆ. ಆ್ಯನ್ ಫ್ರಾಂಕ್ ನೇರವಾಗಿ ಯುದ್ಧಕ್ಕೆ ಮುಖಾಮುಖಿಯಾಗದೆ ಇದ್ದರು ಎರಡನೆ ಮಹಾಯುದ್ಧದ ದುಷ್ಟಪರಿಣಾಮಕ್ಕೆ ಮುಖಾಮುಖಿಯಾಗುತ್ತಾಳೆ. ತನ್ನ ಜನಾಂಗಕ್ಕಾದ ಶೋಷಣೆಯನ್ನು ತನಗಾದ ಯಾತನೆಯನ್ನು ಅಳಿಸಲಾಗುವ ನಾಶಪಡಿಸಬಹುದಾದ ಕಾಗದದ ಮೆಲೆ ಭರವಸೆ ಇಟ್ಟು ಬರೆಯುವುದು ಸಾಧನೆಯೇ ಅನ್ನಿಸುತ್ತದೆ.
ಅನಲೆ ಹಾಗೂ ಆನ್‌ ಫ್ರಾಂಕ್‌ ಎಂಬ ಇಬ್ಬರು ವಿಶಿಷ್ಟ ವ್ಯಕ್ತಿಗಳ ಕುರಿತು ಸುಮಾವೀಣಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ