Advertisement

Tag: T.S Gopal

ಕನಕಗಿರಿಯ ಲಕ್ಷ್ಮೀನರಸಿಂಹ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಹಂಪೆಯಲ್ಲಿ ಸುತ್ತಾಡಿ ಬಳಲಿದವನಿಗೆ ಕಾಲಿನ ಬೆಲೆ ಸಂಜೆಯ ಹೊತ್ತಿಗಾದರೂ ತಿಳಿದೇ ತಿಳಿಯುತ್ತದೆ. ಇನ್ನು ಕಣ್ಣಿದ್ದು ಕನಕಗಿರಿ ನೋಡಬೇಕಲ್ಲ! ಆ ಸ್ಥಳ ಎಲ್ಲಿದೆ ಎಂದು ವಿಚಾರಿಸುವಾಗ ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಮೂವತ್ತು ಕಿಲೋಮೀಟರ್ ದೂರದಲ್ಲಿ ಎಂಬ ಉತ್ತರ ದೊರಕಿತು. ಕನಕನೆಂಬ ಮುನಿ ದೀರ್ಘತಪಸ್ಸು ಮಾಡಿದ ಸ್ಥಳವಾದುದರಿಂದ ಕನಕಗಿರಿ ಎಂಬ ಹೆಸರು ಬಂದಿತಂತೆ. ಕ್ರಿ.ಶ. ಹತ್ತನೆಯ ಶತಮಾನದ ವೇಳೆಗೇ ಪುಣ್ಯಕ್ಷೇತ್ರವೆಂಬ ಕೀರ್ತಿಗೆ ಪಾತ್ರವಾಗಿದ್ದ ಈ ಪ್ರಾಂತ್ಯದಲ್ಲಿ ಈಗಲೂ ಅನೇಕ ಗುಡಿಗಳೂ ಕೊಳಗಳೂ ಇದ್ದು ಪುರಾತನ ವೈಭವವನ್ನು ನೆನಪಿಸುವಂತಿವೆ. ಇವೆಲ್ಲ ಗುಡಿಗಳಲ್ಲಿ ಲಕ್ಷ್ಮೀನರಸಿಂಹ ದೇವಾಲಯ ಪ್ರಮುಖ ಸ್ಥಾನ ಪಡೆಯುತ್ತದೆ.”
ಟಿ.ಎಸ್.ಗೋಪಾಲ್ ಬರೆಯುವ ದೇಗುಲಗಳ ಸರಣಿಯ ಹತ್ತೊಂಭತ್ತನೆಯ ಕಂತು

Read More

ಕುಬಟೂರಿನ ಕೈಟಭೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಪುರಾಣಕ್ಕಿಂತ ಐತಿಹಾಸಿಕವಾಗಿ ಹೆಚ್ಚಿನ ಮಹತ್ವ ಪಡೆದ ಈ ಕುಬಟೂರು ಶಿವಮೊಗ್ಗ ಜಿಲ್ಲೆಯ ಆನವಟ್ಟಿಯ ಸಮೀಪವಿದೆ. ಕೈಟಭೇಶ್ವರ ದೇವಾಲಯವಿರುವ ಕುಬಟೂರಿಗೆ ಕುಪ್ಪತ್ತೂರು, ಕೋಟಿಪುರ ಮೊದಲಾದ ಹೆಸರುಗಳೂ ಇವೆ. ಕ್ರಿ.ಶ. ಮೂರನೆಯ ಶತಮಾನದ ಬನವಾಸಿಯ ಕದಂಬರಿಂದ ಮೊದಲುಗೊಂಡು ಬಾದಾಮಿಯ ಚಾಲುಕ್ಯರು, ಕಲ್ಯಾಣದ ಚಾಲುಕ್ಯರು, ಹೊಯ್ಸಳರು ಹಾಗೂ ಕೆಳದಿಯ ನಾಯಕರವರೆಗೆ…”

Read More

ರಾಮನಾಥಪುರದ ದೇವಾಲಯಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ರಾಮನಾಥಪುರದ ದೇಗುಲಗಳನ್ನು ಕಾಲಕಾಲಕ್ಕೆ ಜೀರ್ಣೋದ್ಧಾರಮಾಡಿ ನವೀಕರಿಸಿರುವುದರಿಂದ ಈ ನಿರ್ಮಿತಿಗಳು ಯಾವ ಯಾವ ಕಾಲದ್ದೆಂದು ನಿರ್ಣಯಿಸುವುದು ಕಷ್ಟ. ರಾಮೇಶ್ವರ ದೇವಾಲಯವೊಂದು ಹೊಯ್ಸಳಕಾಲದ್ದಾಗಿದ್ದು ಇದನ್ನೂ ಉಳಿದ ದೇಗುಲಗಳನ್ನೂ ವಿಜಯನಗರದ ಆಳ್ವಿಕೆಯ ಕಾಲದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ. ಎಲ್ಲ ದೇಗುಲಗಳಿಗೂ ಪೌರಾಣಿಕ ಹಿನ್ನೆಲೆ ತಳುಕುಹಾಕಿಕೊಂಡಿದೆ.”

Read More

ಮಹಾಕೂಟದ ದೇಗುಲಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಹಾಕೂಟೇಶ್ವರ ದೇವಾಲಯವು ಕಾಶಿತೀರ್ಥ ಹಾಗೂ ಶಿವಪುಷ್ಕರಣಿಗಳೆಂಬ ಕೊಳಗಳ ಬದಿಯಲ್ಲಿದೆ. ಇಲ್ಲಿನ ಪುಷ್ಕರಣಿಯ ಮಂಟಪದಲ್ಲಿ ಪಂಚಮುಖ ಶಿವಲಿಂಗವಿರುವುದೊಂದು ವಿಶೇಷ. ಮಹಾಕೂಟೇಶ್ವರ ದೇವಾಲಯವು ದ್ರಾವಿಡಶೈಲಿಯ ಶಿಖರವನ್ನು ಹೊಂದಿರುವ ದೇವಾಲಯಗಳ ಪೈಕಿ ಕರ್ನಾಟಕದಲ್ಲೇ ಮೊದಲಿನದೆಂಬ ಕೀರ್ತಿಗೆ ಪಾತ್ರವಾಗಿದೆ. ಗರ್ಭಗೃಹ, ಪ್ರದಕ್ಷಿಣಾಪಥ, ನವರಂಗ ಹಾಗೂ ಮುಖಮಂಟಪಗಳನ್ನು ಹೊಂದಿರುವ ದೇಗುಲದ ಮುಂಭಾಗದಲ್ಲಿ ನಂದಿಯ ಮಂಟಪವೂ ಇದೆ.”

Read More

ಚಂದ್ರಗಿರಿಯ ಬಸದಿಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಭದ್ರಬಾಹು ಗುಹೆಯಿಂದ ಅನತಿ ದೂರದಲ್ಲಿರುವ ಬಸದಿಗಳ ಆವರಣವನ್ನು ಪ್ರವೇಶಿಸುತ್ತಿದ್ದಂತೆಯೇ ಮಾನಸ್ತಂಭವೊಂದು ಇದಿರಾಗುತ್ತದೆ. ಇದನ್ನು ಕೂಗೆ ಬ್ರಹ್ಮದೇವನ ಸ್ತಂಭ ಎಂತಲೂ ಕರೆಯುವರು. ಈ ಸ್ತಂಭವು ಗಂಗರ ಕಾಲಕ್ಕೆ ಸೇರಿದ್ದು (ಕ್ರಿ.ಶ. 976), ಗಂಗ ಅರಸ ಮಾನಸಿಂಹನ ಗೌರವಾರ್ಥ ನಿರ್ಮಿಸಲಾಗಿದೆ. ಮಾನಸಿಂಹನ ಪರಾಕ್ರಮವನ್ನು ವರ್ಣಿಸುವ ಶಾಸನವೂ ಈ ಸ್ತಂಭದ ಮೇಲೆ ಬರೆಯಲ್ಪಟ್ಟಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ