Advertisement

Tag: Theatre

ನಾಟಕರಂಗದ ತಮಾಷೆ ಪ್ರಸಂಗಗಳು: ಚಿತ್ರಾ ವೆಂಕಟರಾಜು ಸರಣಿ

ಬರುವಾಗ ಸುಳ್ಯ, ಪುತ್ತೂರಿನ ಸಮೀಪ ಬೆಳಗಿನ ಜಾವ ಸುಮಾರು ೪ ಗಂಟೆಗೆ ಮೂತ್ರವಿಸರ್ಜನೆಗಾಗಿ ಗಾಡಿ ನಿಲ್ಲಿಸಿದರು. ನಂತರ ಹೊರಟು ಇನ್ನೇನು ಮೈಸೂರು ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಸಂಪೂರ್ಣ ಎ‍ಚ್ಚರವಾಯಿತು. ಇದ್ದಕ್ಕಿದ್ದಂತೆ ಯಾರೋ ‘ರಾಜಪ್ಪ ಎಲ್ಲಿ’ ಅಂತ ಕೇಳಿದರು. ಟೆಂಪೋ ಎಲ್ಲಾ ಹುಡುಕಿದರೂ ರಾಜಪ್ಪ ಇಲ್ಲ. ಎಲ್ಲಿ ಬಿಟ್ಟು ಬಂದ್ವಿ ಗೊತ್ತಿಲ್ಲ. ಅವರು ಪಾಪ ಒಂದು ಪಟಾಪಟಿ ಲುಂಗಿ ಬನಿಯನ್ ಮತ್ತು ಟವೆಲ್ ಸುತ್ತಿಕೊಂಡು ಇಳಿದವರು ವಾಪಸ್ ಬರುವ ಹೊತ್ತಿಗೆ ಟೆಂಪೋ ಹೊರಟಾಗಿತ್ತು. ಕಾಲಲ್ಲಿ ಚಪ್ಪಲಿಯೂ ಇಲ್ಲದಂತೆ ಯಾರದ್ದೋ ಸಹಾಯ ಕೇಳಿ ಕೊನೆಗೆ ಚಾಮರಾಜನಗರದಲ್ಲಿ ಕಾಣಿಸಿಕೊಂಡರು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ರಂಗದ ಮೇಲಿನ  ದೃಶ್ಯಕಾವ್ಯ  ‘ಚಿತ್ರಾಂಗದಾ’: ಚಿತ್ರಾ ವೆಂಕಟರಾಜು ಸರಣಿ

ಕೊನೆಗೂ ಯಾಕೆ ಈ ನಾಟಕವನ್ನು ಮಾಡಬೇಕು, ಯಾಕೆ ಈ ನಾಟಕವನ್ನು ನೋಡಬೇಕು ಎನ್ನುವುದು ಪ್ರತಿಯೊಬ್ಬ ಕಲಾವಿದನ, ಪ್ರೇಕ್ಷಕನ ಮೂಲಭೂತ ಪ್ರಶ್ನೆ. ಇಲ್ಲಿ ಇದು ಚಿತ್ರಾಂಗದಾ ಮತ್ತು ಅರ್ಜುನನ ಕತೆಯಾದರೂ ಅದರ ನೆಪದಲ್ಲಿ ನಡೆಯುವುದು ಗಂಡು ಹೆಣ್ಣು ಮತ್ತು ಅವರಿಬ್ಬರ ಸಂಬಂಧದ ಸಂಕೀರ್ಣತೆಯ ಬಗ್ಗೆ. ಹೆಣ್ಣಾದರೂ ಗಂಡಿನಂತೆ ವನದಲ್ಲಿರುವ ಚಿತ್ರಾಂಗದೆ ಅರ್ಜುನನನ್ನು ನೋಡಿದ್ದೆ ಮತ್ತೆ ‘ಹೆಣ್ತನ’ ಕ್ಕೆ ಹಾತೊರೆಯುತ್ತಾಳೆ. ಅವಳೊಳಗಿನ ಹೆಣ್ಣನ್ನು ನೋಡಿದ ಅರ್ಜುನ ತನ್ನ ಬ್ರಹ್ಮಚರ್ಯದ ನಿಯಮವನ್ನು ಮುರಿಯುತ್ತಾನೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿಯಲ್ಲಿ ‘ಚಿತ್ರಾಂಗದಾ’ ನಾಟಕದ ಕುರಿತ ಬರಹ

Read More

ಜೊತೆಗಿರುವನು ಚಂದಿರ….: ಮೀನಾ ಮೈಸೂರು ಬರಹ

ಹೊಟ್ಟೆ ತುಂಬುವಷ್ಟು ಅನ್ನ ಸಿಕ್ಕರದೆ ಐಭೋಗವೆಂದು ನಂಬಿದ್ದ ತಾಯಿ, ತನ್ನ ಮಗಳಿಗೆ ತನ್ನ ಗಂಡನಿಗಿಂತಲೂ ವಯಸ್ಸಾದ ಆ ಗ್ರಾಮದಲ್ಲೇ ಸಿರಿವಂತನೆನಿಸಿದ್ದ ಕಲಾಯಿ ವೃತ್ತಿ ಮಾಡುವ ಮುದುಕನಿಗೆ ಮಗಳನ್ನು ಮದುವೆ ಮಾಡಲು ಒಪ್ಪಿಕೊಳ್ಳುವಂತಹ ದೈನೇಸಿ ಸ್ಥಿತಿ. ಆದರೆ ಆ ಮಗಳು ನೆರೆಮನೆಯ ಅದೇ ಜನಾಂಗದ ಹುಡುಗನನ್ನು ಪ್ರೀತಿಸುವುದು ತಂದೆಗೆ ಗೊತ್ತಾಗುತ್ತದೆ.
“ಜೊತೆಗಿರುವನು ಚಂದಿರ” ನಾಟಕದ ಕುರಿತು ಮೀನಾ ಮೈಸೂರು ಬರಹ

Read More

ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ವ್ಯಕ್ತಿ ಪ್ರಕೃತಿಯು ತನ್ನ ಪರಿಸರದ ಪ್ರಭಾವದ ವಿರುದ್ಧ ಪ್ರತಿಭಟಿಸಿ, ಸೆಣೆಸಿ ತನ್ನದೇ ನಡೆಗಳ ದಾರಿಯಲ್ಲಿ ಚಲಿಸಲು ಯಾವುದೋ ಒಂದು ಆಂತರಿಕ ಸೆಳೆತವಿರಬೇಕು. ಈ ಸೆಳೆತ ಇಂದು ನೆನ್ನೆಯದಲ್ಲ; ಇನ್ನೂ ಹಿಂದಿನದು, ಬಹುದೂರ ಕಾಲ ಹಿಂದಿನದು. ಎಂದೋ ಯಾವ ಕಾಲದಲ್ಲೋ ಯರ‍್ಯಾರ ಕಾಲ-ದೇಶ-ಪ್ರಭಾವ-ಪ್ರವಾಹಗಳ ಹರಿವಿನಲ್ಲೋ ಮೊಳೆತಿದ್ದಿರಬೇಕು. ಹೀಗೆ ಕಾಲಾಂತರ ಕಾದು ಕಾದು ತನ್ನನ್ನು ತಾನು ಅರಿವಿನಲ್ಲಿ ಕಂಡುಕೊಂಡುದುದು. ಇದು ಮೊಳೆತು ಬೆಳೆದು ವಿಕಾಸವಾಗಬಹುದಾದ ಬೀಜರೂಪ ಮಾತ್ರ. ಇದು ಬೆಳೆದು ಬೃಹತ್ ವೃಕ್ಷವಾಗಲು ಏನೆಲ್ಲಾ ಒದಗಿ ಬರಬೇಕೋ?
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿ ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

Read More

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ