Advertisement

Tag: Theatre

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಸುಳಿಯ ಸೆಳವಿಗೆ ಸಿಲುಕದೇ…

ಮನುಷ್ಯ ಮುಕ್ತವಾಗಿ ಮತ್ತು ಸ್ವಚ್ಛಂದವಾಗಿ ಬೇರೆಯವರ ಜೊತೆ ಕಲೆಯಲು ರಂಗಭೂಮಿಗೆ ಬರಬೇಕು. ಅಲ್ಲಿ ಇರುವ ಮಜವೇ ಬೇರೆ. ಪ್ರೀತಿಯಲ್ಲಿ, ಸಲಿಗೆಯಲ್ಲಿ ಮತ್ತು ಸ್ನೇಹದಲ್ಲಿ ಕಾಲೆಳೆಯುವ ಬಗೆಗಳು ಇಲ್ಲಿ ಪಡೆದುಕೊಳ್ಳುವ ಆಯಾಮವೇ ಬೇರೆ. ಮೇಕಪ್‍ಗೆ ಕೂತರೆ ಮತ್ತು ರಂಗಕ್ಕೆ ಬಂದರೆ ಅಲ್ಲಿ ಅವರ ಚಹರೆ ಬೇರೆ. ಈ ಎಲ್ಲ ತಿಳಿದು ಮತ್ತು ಸಮುದ್ರದ ಬಗೆಗೆ ನನ್ನಲ್ಲಿ ಮೊದಲಿಂದ ಇರುವ ಸೆಳೆತದಿಂದ ಹೊರಟೆ. ಟಿಟಿಯಲ್ಲಿ ಹುಡುಗರ ಗೇಲಿ. ಪರಸ್ಪರ ಕಾಲೆಳೆಯುವ ಗುಣ ನಗು ತರಿಸುತ್ತಿತ್ತು.
ಎನ್.ಸಿ. ಮಹೇಶ್‌ ಬರೆಯುವ “ರಂಗ ವಠಾರ” ಅಂಕಣ

Read More

ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ

ಧೈರ್ಯ ಮಾಡಿ ರಂಗಮಂದಿರದ ಬಾಡಿಗೆ ಕಟ್ಟಿ ನಾಟಕ ಮಾಡಲು ಮುಂದಾಗುತ್ತೇವೆ ಅಂತಿಟ್ಟುಕೊಳ್ಳಿ. ಜನ ಬರಬೇಕಲ್ಲ ? ಪೆಟ್ರೋಲ್ ದರ ಯಾವ ಶಿಖರವನ್ನ ಗುರಿಯಾಗಿಟ್ಟುಕೊಂಡಿದೆ ಎನ್ನುವುದು ತಿಳಿಯುತ್ತಿಲ್ಲ. ಅಡುಗೆ ಅನಿಲ ದರ ಕೇಳಿದರೆ ಎದೆ ಸ್ಫೋಟಗೊಳ್ಳುತ್ತದೆ. ಅಡುಗೆಗೆ ಬಳಸುವ ಎಣ್ಣೆ ತನಗೆ ಬೆಲೆ ಬರುತ್ತಿರುವುದಕ್ಕೆ ವ್ಯರ್ಥವಾಗಿ ಹಿಗ್ಗುತ್ತಿದೆ. ನೀವು ರಂಗಮಂದಿರಗಳ ಬಾಡಿಗೆ ದರ ಏರಿಸಿದರೆ ನಾವು ರಂಗತಂಡಗಳವರು ಏನು ಮಾಡಬೇಕು? ಎನ್. ಸಿ. ಮಹೇಶ್.  ಬರಹ

Read More

ನಾಟಕವೆಂದರೆ ಶೃತಿಗೆ ಅಣಿಗೊಳಿಸಿದ ವೀಣೆಯಂತೆ

ರಂಗದ ಕಾಯಕ ಅಂದರೆ ಮೊದಲು ನಮ್ಮ ಮನೋಧರ್ಮ ಗುರುತಿಸಿಕೊಂಡು ನಾಟಕ ಕಟ್ಟಿ ಅದು ಪ್ರೇಕ್ಷಕರ ಕಣ್ಣುಗಳ ಫ್ರೇಮಿನಲ್ಲಿ ಸರಿಯಾಗಿ ಫಿಟ್ಟಾಗುತ್ತದೆಯೇ ಎಂದು ಅಂದಾಜು ಮಾಡಿಕೊಳ್ಳಬೇಕು. ನಂತರ ಜನರಿಗೆ ಕಾಯಬೇಕು. ಪಾರ್ಕಿಂಗ್ ಕಡೆ ಕಣ್ಣು ಹಾಯಿಸುತ್ತಿರಬೇಕು. ಇಷ್ಟಾದ ಮೇಲೆ ಭರ್ಜಿಯ ಮೊನೆಗಳಿಗೆ ಮೈ ಒಡ್ಡಿ ನಿಲ್ಲಬೇಕು ಮತ್ತು ನೋವಿನಲ್ಲೂ ನಗಬೇಕು. ನಗಲು ಸಾಧ್ಯವಾಗದಿದ್ದರೆ ಮನಸ್ಸಿನ ಹದ ಕೆಡುತ್ತದೆ. ಮನಸ್ಸು ಕೆಟ್ಟರೆ ಬದುಕಿನ ನೋಟಕ್ರಮದ ಜಾಡು ತಪ್ಪುತ್ತದೆ. ಒಟ್ಟು ಚಿತ್ರವೇ ಕಲಕಿಹೋಗುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಮತ್ತೆ…

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ