Advertisement

Tag: Travelogue

ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ

ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಲೂವ ಗ್ಯಾಲರಿಯೊಳಗಿನ ಕಲಾಲೋಕ…: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಮೊದಲ ನೋಟಕ್ಕೆ ಅತ್ಯಂತ ಮೃದುವಾದ ಮೆತ್ತನೆ ಹಾಸಿಗೆ ಮೇಲೆ ಮಲಗಿರುವ ಬೆತ್ತಲೆ ಮಹಿಳೆಯಂತೆ ಕಾಣಿಸುತ್ತದೆ. ಆದರೆ ಅದು ನಿಜವಾಗಿ ಪುರುಷನ ಆಕೃತಿ, ಇನ್ನಷ್ಟು ತೀವ್ರವಾಗಿ ಕಣ್ಣಾಡಿಸಿದಾಗ ವಾಸ್ತವವಾಗಿ ಅದು ಗಂಡು ಮತ್ತು ಹೆಣ್ಣಿನ ಲೈಂಗಿಕ ಅಂಗಗಳನ್ನು ಹೊಂದಿರುವ ಹರ್ಮಾಫ್ರೋಡಿಟಿಸ್ ದೇವ/ದೇವತೆಯ ಆಕೃತಿಯಾಗಿದೆ (ಹೆಲೆನಿಸ್ಟಿಕ್ ಕಂಚಿನ ರೋಮನ್ ನಕಲು).
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನದ ಮೂರನೆಯ ಭಾಗ ನಿಮ್ಮ ಓದಿಗೆ

Read More

ಗೋಡೆಯ ಮೇಲೆ ಪ್ರತಿಭಟನೆಯ ಚಿತ್ತಾರ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇದು 1980ರಲ್ಲಿ ಅಮೆರಿಕಾದಲ್ಲಿ ಜಾನ್ ಲೆನ್ನನ್ ಹತ್ಯೆಯಾದ ಮೇಲೆ ಪ್ರೇಗ್‌ನಲ್ಲಿ ಕಲಾವಿದರ ಗುಂಪೊಂದು ಈ ಗೋಡೆಯ ಮೇಲೆ ತಮ್ಮ ಸಹಿಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದ ಕಲಾ ಗೋಡೆ. ಅದು ಇಂದಿನವರೆಗೂ ಮುಂದುವರಿದುಕೊಂಡು ಬಂದಿದೆ. ಅಲ್ಲಿಗೆ ತಲುಪಿದ ಯಾರಾದರೂ ಆ ಗೋಡೆಯ ಮೇಲೆ ಏನಾದರೂ ಗೀಚಬಹುದು.
ಡಾ. ಎಂ. ವೆಂಕಟಸ್ವಾಮಿ ಬರೆಯುವ ಚೆಕಿಯಾ ದೇಶದ ಪ್ರವಾಸ ಕಥನದ ಎರಡನೇ ಭಾಗ ಇಲ್ಲಿದೆ

Read More

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. ‘ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣ

Read More

ಬೇಸಿಗೆ ರಜೆಯೆಂದರೆ …: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದ ಬೇಸಿಗೆಯ ಕಡುಬಿಸಿಯನ್ನು ತಪ್ಪಿಸಿಕೊಳ್ಳಲು ಕೆಲವರು ತಂಪು ಪ್ರದೇಶಗಳನ್ನು ಆಯ್ದುಕೊಳ್ಳುತ್ತಾರೆ. ಆದರೆ ಮುಂಚಿತವಾಗಿಯೇ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡೇ ಅನೇಕ ಆಸ್ಟ್ರೇಲಿಯನ್ ಸಂಸ್ಥೆಗಳು, ಸರಕಾರದ ಪ್ರವಾಸೀ ಇಲಾಖೆಗಳು ದೇಶದ ಉದ್ದಗಲಕ್ಕೂ ಹಾಸಿ ಹರಡಿರುವ ನೂರಾರು ಪ್ರವಾಸಸ್ಥಳಗಳ ಬಗ್ಗೆ ಆಕರ್ಷಕ ಜಾಹಿರಾತುಗಳನ್ನು ಕೊಡುತ್ತಾ, ಹಲವಾರು ತರಹದ ರಿಯಾಯ್ತಿಗಳು, ಸೌಲಭ್ಯಗಳ ಆಮಿಷವೊಡ್ಡುತ್ತಾರೆ. ಇವು ಮಧ್ಯಮ ವರಮಾನದ ಕುಟುಂಬಗಳನ್ನು ಕೈಬೀಸಿ ಕರೆಯುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ