Advertisement

Tag: Travelogue

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. ‘ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣ

Read More

ಬೇಸಿಗೆ ರಜೆಯೆಂದರೆ …: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದ ಬೇಸಿಗೆಯ ಕಡುಬಿಸಿಯನ್ನು ತಪ್ಪಿಸಿಕೊಳ್ಳಲು ಕೆಲವರು ತಂಪು ಪ್ರದೇಶಗಳನ್ನು ಆಯ್ದುಕೊಳ್ಳುತ್ತಾರೆ. ಆದರೆ ಮುಂಚಿತವಾಗಿಯೇ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡೇ ಅನೇಕ ಆಸ್ಟ್ರೇಲಿಯನ್ ಸಂಸ್ಥೆಗಳು, ಸರಕಾರದ ಪ್ರವಾಸೀ ಇಲಾಖೆಗಳು ದೇಶದ ಉದ್ದಗಲಕ್ಕೂ ಹಾಸಿ ಹರಡಿರುವ ನೂರಾರು ಪ್ರವಾಸಸ್ಥಳಗಳ ಬಗ್ಗೆ ಆಕರ್ಷಕ ಜಾಹಿರಾತುಗಳನ್ನು ಕೊಡುತ್ತಾ, ಹಲವಾರು ತರಹದ ರಿಯಾಯ್ತಿಗಳು, ಸೌಲಭ್ಯಗಳ ಆಮಿಷವೊಡ್ಡುತ್ತಾರೆ. ಇವು ಮಧ್ಯಮ ವರಮಾನದ ಕುಟುಂಬಗಳನ್ನು ಕೈಬೀಸಿ ಕರೆಯುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

`ವ್ಯವಹಾರ ಚತುರ’ ಉಲುವಾಟು ಮಂಗಗಳು: ಡಾ. ಜೆ. ಬಾಲಕೃಷ್ಣ ಬರಹ

ಅಧ್ಯಯನದ ಮತ್ತೊಂದು ಪ್ರಮುಖ ಅಂಶವೆಂದರೆ, ಗಂಡು ಮಂಗಗಳು ಹೆಚ್ಚು ಕದಿಯುತ್ತಿದ್ದವು ಹಾಗೂ ಹದಿಹರೆಯದ ಗಂಡು ಮಂಗಗಳು ಈ ಕ್ರಿಯೆಯಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿದ್ದವು. ವಿಜ್ಞಾನಿಗಳು ಹೇಳುವಂತೆ ಹದಿಹರೆಯದ ಮಂಗಗಳು ಹೆಚ್ಚು ಅಪಾಯಕ್ಕೆ ಒಡ್ಡಿಕೊಳ್ಳುವ ನಡವಳಿಕೆ ಹೊಂದಿರುತ್ತವೆ. ಈ ರೀತಿಯ ನಡವಳಿಕೆಯನ್ನು ಉಲುವಾಟು ಮಂಗಗಳು ಮೊದಲಿಗೆ ಹೇಗೆ ಕಲಿತವು ಎಂಬುದೇ ಅಚ್ಚರಿಯ ವಿಷಯವಾಗಿದೆ. ಬಹುಶಃ ಪ್ರಾರಂಭದಲ್ಲಿ ಮನುಷ್ಯರ ಪ್ರಭಾವವಿದ್ದರೂ ಇರಬಹುದು, ಆದರೆ ನಂತರ ಅದು ಹೇಗೆ ಒಂದು `ಸಾಂಸ್ಕೃತಿಕ ನಡವಳಿಕೆ’ಯಾಗಿ ಸಮುದಾಯದಲ್ಲಿ ಪ್ರಸಾರವಾಗಿದೆ ಎನ್ನುವುದರ ಕುರಿತು ಇನ್ನೂ ಹೆಚ್ಚಿನ ಮನೋವೈಜ್ಞಾನಿಕ ಅಧ್ಯಯನ ಅಗತ್ಯವಿದೆ ಎನ್ನುತ್ತಾರೆ ಫ್ಯಾನಿಯವರು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಕೆಲವು ಬರಹಗಳ ಸರಣಿ ನಿಮ್ಮ ಓದಿಗೆ

Read More

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ ಸಿಂಗಪುರದ ವಿದ್ಯಾರ್ಥಿನಿಯಿಂದಾದ ವರ್ಣಭೇದದ ಅನುಭವದಿಂದ ಲೇಖಕಿಯ ಮನಸ್ಸು ಮುದುಡುವುದು, ಹದಿನಾಲ್ಕು ಅಂತಸ್ತಿನ ತಮ್ಮ ಮಗನ ಮನೆಯಲ್ಲಿ ಲೇಖಕಿ ಒಬ್ಬರೇ ಇರುವಾಗ ಅದೇ ಕಟ್ಟಡದ ಒಂದು ಮಹಡಿಯ ಮನೆಗೆ ಬೆಂಕಿ ಬಿದ್ದು ಫೈರ್ ಇಂಜಿನ್ ಬಂದು ಬೆಂಕಿ ಆರಿಸುವಾಗಲೂ ಸುತ್ತಮುತ್ತಲಿನ ಜನ ಕಿಂಚಿತ್ತೂ ಗಮನ ಹರಿಸದೆ ಕಣ್ಣೆತ್ತಿಯೂ ನೋಡದೆ ಹೋಗುವುದು…. ಇದೆಂಥಾ ಮುಂದುವರಿದ ದೇಶ ಮಾರ್ರೆ?
ಶಾಂತಾ ನಾಗರಾಜ್‌ ಪ್ರವಾಸ ಕಥನ “ಯಾನ ಸಂಸ್ಕೃತಿ” ಕೃತಿಯ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ