Advertisement

Tag: Travelogue

ಮಾರ್ಕೋನಿ ಬೀಚ್: ತೆರೆಯ ಮೇಲಣ ತರಂಗಾಂತರಂಗ

ಸಾಮಾನ್ಯ ಜನರು ಮಾರ್ಕೋನಿ ರಿಸೀವರ್‌ಗಳನ್ನು ಕೊಂಡು ಬೇರೆ ಬೇರೆ ತರಂಗಗಳನ್ನು ಕೈಯಲ್ಲಿ ಕಟ್ಟಿ ಹಾಕಿ ಆಲಿಸುವ ತಂತ್ರಜ್ಞಾನ ಹುಟ್ಟಿದ್ದು ಇಲ್ಲೇ, ಈ ವೆಲ್ಫ್ಲೀಟ್ ಎಂಬ ಚಿಕ್ಕ ಊರಿನಲ್ಲಿ. ರೇಡಿಯೋ ತರಂಗಗಳು ಹುಟ್ಟುಹಾಕಿದ ಕ್ರಾಂತಿ ಅದೆಷ್ಟು ಬೇಗ ಹಬ್ಬಿತೆಂದರೆ ಎಲ್ಲ ಹಡಗುಗಳಲ್ಲೂ ಮಾರ್ಕೋನಿ ಉಪಕರಣವಿತ್ತು. ಸುಪ್ರಸಿದ್ಧ ಟೈಟಾನಿಕ್ ಹಡಗು ಕೂಡ ಮುಳುಗುವ ಮೊದಲು ಮಾರ್ಕೊನಿ ಉಪಕರಣದ ಮೂಲಕ “SOS” ಸಂದೇಶ ಕಳಿಸಿತ್ತು.
ವೈಶಾಲಿ ಹೆಗಡೆ ಬರೆಯುವ ಪ್ರವಾಸ ಲೇಖನ ಮಾಲೆ

Read More

ಹಾಯ್‌ ಅಂಗೋಲಾ!

ಅಂಗೋಲಾದ ಜನರ ಬಗ್ಗೆ ಹೇಳುವುದು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವುದು, ಅಲ್ಲಿನ ಊಟ ತಿಂಡಿ ಬಗ್ಗೆ ಹೇಳುವುದು ಇದೆಲ್ಲಾ ಸಹಜ. ನಿರೂಪಣೆ ಅದ್ಭುತವಾಗಿದೆ, ಹೊಸ ವಿಷಯ ತಿಳಿಯುತ್ತದೆ ಎಲ್ಲಾ ನಿಜವೇ. ಆದರೆ ಅತ್ಯಂತ ವಿಶಿಷ್ಟವಾದ ಅಧ್ಯಾಯವಿದೆ. ಮೊದಲ ಬಾರಿ ಓದಿದಾಗ ಬಹಳ ವಿಚಿತ್ರ ಅನ್ನಿಸಿತ್ತು‌. ಒಂದು ಕ್ಷೌರ ಮಾಡಿಸಿಕೊಳ್ಳಲು ಮುನ್ನೂರು ಕಿಲೋಮೀಟರ್ ಪ್ರಯಾಣಿಸಬೇಕಾಗಿದ್ದ ಪ್ರಸಾದರ ಅವಸ್ಥೆ ಬಗ್ಗೆ ಕೇಳಿದಾಗ ನಗುವುದೋ ಅಳುವುದೋ ಗೊತ್ತಾಗುವುದಿಲ್ಲ. ಆಫ್ರಿಕನ್ನರ ಕೂದಲ ರೀತಿಗೂ ಭಾರತೀಯರ ಕೂದಲ‌ ರೀತಿಗೂ ಅಜಗಜಾಂತರ ವ್ಯತ್ಯಾಸವಿರುವುದು ಗೊತ್ತಿರುವ ಸಂಗತಿ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

1929ರಲ್ಲಿ ಗಾಂಧೀಜಿ ಕೌಸಾನಿಗೆ ಬಂದು, ಒಂದು ಅತಿಥಿ ಗೃಹದಲ್ಲಿ 3 ತಿಂಗಳು ತಂಗಿದ್ದರು. ಅಲ್ಲಿ ಅವರು “ ಅನಾಸಕ್ತಿ ಯೋಗ” ದ ಬಗ್ಗೆ ಬರೆದ್ದದ್ದರಿಂದ ಆ ಗೆಸ್ಟ್ ಹೌಸ್ ಈಗ ಅನಾಸಕ್ತಿ ಆಶ್ರಮ ಎಂದು ಕರೆಸಿಕೊಳ್ಳುತ್ತಿದೆ. ಗಾಂಧಿ ಆಗ ಕೌಸಾನಿಯನ್ನು ‘ಸ್ವಿಟ್ಸರ್ ಲ್ಯಾಂಡ್’ ಎಂದು ಕರೆದಿದ್ದರಂತೆ. ಈಗ ಅನಾಸಕ್ತಿ ಆಶ್ರಮದಲ್ಲಿ ಮ್ಯೂಸಿಯಮ್, ಪುಸ್ತಗಳ ಸಂಗ್ರಹಾಲಯ ಮಾಡಲಾಗಿದೆ. ಸರ್ಕಾರದ ದೇಖ್‍ರೇಕಿಯಲ್ಲಿ ಇನ್ನೂ ಮೌನ ಮತ್ತು ಕಳಚಿಕೊಳ್ಳುವುದರ ಬಗ್ಗೆ ಆಸಕ್ತಿ ಹುಟ್ಟಿಸುತ್ತಾ ಸದ್ದು ಮಾಡದೆ ನಿಂತಿದೆ ಅನಾಸಕ್ತಿ ಆಶ್ರಮ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ  ಅಂಜಲಿ ರಾಮಣ್ಣ ಬರಹ ಇಂದಿನ ಓದಿಗಾಗಿ.

Read More

‘ಒಬ್ಬ ಸಾಮಾನ್ಯನೂ ರಾಮನೇ ಆಗಬಹುದು’

ಚಿಕ್ಕಮಗಳೂರಿನಲ್ಲಿ  ಬಾಬಾಬುಡನ್ ಗಿರಿಗೆ ತೆರಳಿ ದತ್ತಪೀಠದ ದರ್ಶನ ಪಡೆಯುವುದೊಂದು ಪ್ರೀತಿಯ ವಿಚಾರ. ಆದರೆ ಜನಜಂಗುಳಿಯ ನಡುವೆ ಕಿರಿದಾದ ಹಾದಿಯಲ್ಲಿ ಒಂದೊಂದೇ ಹೆಜ್ಜೆಯಿಟ್ಟು ಹೋದ ಬಳಿಕ ಮನಸ್ಸು ಮುದುಡಿದಂತಾಯಿತು. ನಿರಾಳವಾದ ವಾತಾವರಣದಲ್ಲಿ ಈ ಪರಿಸರವನ್ನು ಕಣ್ತುಂಬಿಕೊಂಡ ಬಾಲ್ಯದ ಕ್ಷಣಗಳು ನೆನಪಾದವು.  ಅಲ್ಲಿಂದ ಕೋದಂಡ ರಾಮ ಸೀತಾದೇವಿ ಮತ್ತು ಲಕ್ಷ್ಮಣನೊಡನೆ ತ್ರಿಭಂಗಿಯಲ್ಲಿ ನಿಂತಿರುವ ದೇವಸ್ಥಾನಕ್ಕೆ ತೆರಳಿದಾಗ ಅಲ್ಲೊಂದು ಸುಂದರವಾದ ವಿವರಣೆ ಸಿಕ್ಕಿತು. ಚಿಕ್ಕಮಗಳೂರು ಪ್ರವಾಸದ ನೆನಪುಗಳ ಬುತ್ತಿಯನ್ನು ಉಣಬಡಿಸಿದ್ದಾರೆ ಅಂಜಲಿ ರಾಮಣ್ಣ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ