Advertisement

Tag: Travelogue

ಹಾಯ್‌ ಅಂಗೋಲಾ!

ಅಂಗೋಲಾದ ಜನರ ಬಗ್ಗೆ ಹೇಳುವುದು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವುದು, ಅಲ್ಲಿನ ಊಟ ತಿಂಡಿ ಬಗ್ಗೆ ಹೇಳುವುದು ಇದೆಲ್ಲಾ ಸಹಜ. ನಿರೂಪಣೆ ಅದ್ಭುತವಾಗಿದೆ, ಹೊಸ ವಿಷಯ ತಿಳಿಯುತ್ತದೆ ಎಲ್ಲಾ ನಿಜವೇ. ಆದರೆ ಅತ್ಯಂತ ವಿಶಿಷ್ಟವಾದ ಅಧ್ಯಾಯವಿದೆ. ಮೊದಲ ಬಾರಿ ಓದಿದಾಗ ಬಹಳ ವಿಚಿತ್ರ ಅನ್ನಿಸಿತ್ತು‌. ಒಂದು ಕ್ಷೌರ ಮಾಡಿಸಿಕೊಳ್ಳಲು ಮುನ್ನೂರು ಕಿಲೋಮೀಟರ್ ಪ್ರಯಾಣಿಸಬೇಕಾಗಿದ್ದ ಪ್ರಸಾದರ ಅವಸ್ಥೆ ಬಗ್ಗೆ ಕೇಳಿದಾಗ ನಗುವುದೋ ಅಳುವುದೋ ಗೊತ್ತಾಗುವುದಿಲ್ಲ. ಆಫ್ರಿಕನ್ನರ ಕೂದಲ ರೀತಿಗೂ ಭಾರತೀಯರ ಕೂದಲ‌ ರೀತಿಗೂ ಅಜಗಜಾಂತರ ವ್ಯತ್ಯಾಸವಿರುವುದು ಗೊತ್ತಿರುವ ಸಂಗತಿ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ನೈನಿತಾಲ್ ಟ್ರಿಪ್ ನಲ್ಲಿ ಭೇಟಿಯಾದ ಭಗಿನಿ ಮತ್ತು ಕವಿ

1929ರಲ್ಲಿ ಗಾಂಧೀಜಿ ಕೌಸಾನಿಗೆ ಬಂದು, ಒಂದು ಅತಿಥಿ ಗೃಹದಲ್ಲಿ 3 ತಿಂಗಳು ತಂಗಿದ್ದರು. ಅಲ್ಲಿ ಅವರು “ ಅನಾಸಕ್ತಿ ಯೋಗ” ದ ಬಗ್ಗೆ ಬರೆದ್ದದ್ದರಿಂದ ಆ ಗೆಸ್ಟ್ ಹೌಸ್ ಈಗ ಅನಾಸಕ್ತಿ ಆಶ್ರಮ ಎಂದು ಕರೆಸಿಕೊಳ್ಳುತ್ತಿದೆ. ಗಾಂಧಿ ಆಗ ಕೌಸಾನಿಯನ್ನು ‘ಸ್ವಿಟ್ಸರ್ ಲ್ಯಾಂಡ್’ ಎಂದು ಕರೆದಿದ್ದರಂತೆ. ಈಗ ಅನಾಸಕ್ತಿ ಆಶ್ರಮದಲ್ಲಿ ಮ್ಯೂಸಿಯಮ್, ಪುಸ್ತಗಳ ಸಂಗ್ರಹಾಲಯ ಮಾಡಲಾಗಿದೆ. ಸರ್ಕಾರದ ದೇಖ್‍ರೇಕಿಯಲ್ಲಿ ಇನ್ನೂ ಮೌನ ಮತ್ತು ಕಳಚಿಕೊಳ್ಳುವುದರ ಬಗ್ಗೆ ಆಸಕ್ತಿ ಹುಟ್ಟಿಸುತ್ತಾ ಸದ್ದು ಮಾಡದೆ ನಿಂತಿದೆ ಅನಾಸಕ್ತಿ ಆಶ್ರಮ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ  ಅಂಜಲಿ ರಾಮಣ್ಣ ಬರಹ ಇಂದಿನ ಓದಿಗಾಗಿ.

Read More

‘ಒಬ್ಬ ಸಾಮಾನ್ಯನೂ ರಾಮನೇ ಆಗಬಹುದು’

ಚಿಕ್ಕಮಗಳೂರಿನಲ್ಲಿ  ಬಾಬಾಬುಡನ್ ಗಿರಿಗೆ ತೆರಳಿ ದತ್ತಪೀಠದ ದರ್ಶನ ಪಡೆಯುವುದೊಂದು ಪ್ರೀತಿಯ ವಿಚಾರ. ಆದರೆ ಜನಜಂಗುಳಿಯ ನಡುವೆ ಕಿರಿದಾದ ಹಾದಿಯಲ್ಲಿ ಒಂದೊಂದೇ ಹೆಜ್ಜೆಯಿಟ್ಟು ಹೋದ ಬಳಿಕ ಮನಸ್ಸು ಮುದುಡಿದಂತಾಯಿತು. ನಿರಾಳವಾದ ವಾತಾವರಣದಲ್ಲಿ ಈ ಪರಿಸರವನ್ನು ಕಣ್ತುಂಬಿಕೊಂಡ ಬಾಲ್ಯದ ಕ್ಷಣಗಳು ನೆನಪಾದವು.  ಅಲ್ಲಿಂದ ಕೋದಂಡ ರಾಮ ಸೀತಾದೇವಿ ಮತ್ತು ಲಕ್ಷ್ಮಣನೊಡನೆ ತ್ರಿಭಂಗಿಯಲ್ಲಿ ನಿಂತಿರುವ ದೇವಸ್ಥಾನಕ್ಕೆ ತೆರಳಿದಾಗ ಅಲ್ಲೊಂದು ಸುಂದರವಾದ ವಿವರಣೆ ಸಿಕ್ಕಿತು. ಚಿಕ್ಕಮಗಳೂರು ಪ್ರವಾಸದ ನೆನಪುಗಳ ಬುತ್ತಿಯನ್ನು ಉಣಬಡಿಸಿದ್ದಾರೆ ಅಂಜಲಿ ರಾಮಣ್ಣ.

Read More

ಮಾರ್ಟಿನ್ ಲೂಥರ್ ಕಿಂಗ್ ನೆನಪಿನಲ್ಲಿ ಹಾಕಿದ ಹೆಜ್ಜೆಗಳು

ನಾನು ವಿದೇಶದಲ್ಲಿರುವ ಪರದೇಶಿ ಎನ್ನಿಸಲಿಲ್ಲ. ಅಮೆರಿಕ  ದೇಶವನ್ನು ನೋಡುವ ದೃಷ್ಟಿಕೋನವೇ ಬದಲಾಯ್ತು. ಆ ದಿನ ನನ್ನುಸಿರಿಗೆ ಉಸಿರು ಕೊಟ್ಟ ಮಾರ್ಟಿನ್. ನನಗೀಗ ಜೀವನ ಬೇಕು ಅನಿಸಲು ಶುರುವಾಯ್ತು. ಒಳಗಿನ ಕಣ್ಣು ಇಂಚಿಂಚೇ ತೆರೆಯ ಹತ್ತಿತು. ಮುಂದಿನ ಎಲ್ಲಾ ದಿನಗಳ ಪ್ರಯಾಣದಲ್ಲಿ ಅಲ್ಲಿನ ಎಲ್ಲೆಡೆಯಲ್ಲೂ ಕೆಳಮಟ್ಟದ ಕೆಲಸ ಎಂದು ಗುರುತಿಸಲ್ಪಟ್ಟಿರುವ ಎಲ್ಲಾ ಕೆಲಸಗಳನ್ನು ಕಪ್ಪು ಜನರೇ ಮಾಡುತ್ತಿದ್ದದ್ದು ಎದ್ದು ಕಾಣುತ್ತಿತ್ತು. ಬಿಳಿಯರ ಜೊತೆಗೆ ತಮ್ಮನ್ನು ಗುರುತಿಸಿಕೊಳ್ಳಬೇಕೆನ್ನುವ ಹಪಾಹಪಿ ಅವರಲ್ಲಿ ಇನ್ನೂ ಜೀವಂತವಿರುವುದನ್ನು ಕಂಡೆ.
‘ಕಂಡಷ್ಟು ಪ್ರಪಂಚ’ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ