Advertisement

Tag: Vasanthkumar Kalyani

ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಸ್ಲಾ..ಟ್!”

ಹನ್ನೆರಡರ ಸುಮಾರಿಗೆ ಎಲ್ಲರೂ ಒಟ್ಟಾದರು. ಸೀನಪ್ಪ ಎಲ್ಲ ರೆಡಿ ಮಾಡಿಟ್ಟಿದ್ದ; ಇನ್ನೊಂದು ಅರ್ಧ ಗಂಟೆ ಒಳಗೆ ಎಲ್ಲಾ ಮುಗಿಸಿ ಬಿಡುವ ಸೂಚನೆ ಇತ್ತು. ಆಗ ಶುರುವಾಯಿತು ಏನೋ ಗಲಿಬಿಲಿ. ಸೀನಪ್ಪ ಬಂದ “ಸಾರ್ ನಾನು ಹೊರಗಿರುತ್ತೇನೆ ನಾನಾಗಲೇ ತೋರಿಸಿದ್ದೆನಲ್ಲ ಕೌಂಟರ್ ಎರಡರಲ್ಲಿ ದೇವರಾಜ ಅನ್ನುವವರನ್ನ, ಅವರೆಲ್ಲ ಮಾಡಿಕೊಡುತ್ತಾರೆ” ಎಂದ. ಬಾಯಿಗೆ ಕೈ ಅಡ್ಡ ಇಟ್ಟು “ಲೋಕಾಯುಕ್ತರು ಬಂದಿದ್ದಾರೆ ಹಾಗಾಗಿ ಸ್ವಲ್ಪ ತಡ ಆಗಬಹುದು, ಒಂದು ಮೂತ್ತರಿಂದ ಎರಡೂ ಮೂವತ್ತು ಊಟದ ಸಮಯ. ಅದು ಕೂಡ ಸ್ವಲ್ಪ ಹಿಂದೆ ಮುಂದೆ ಆಗಬಹುದು.”
ವಸಂತಕುಮಾರ್ ಕಲ್ಯಾಣಿ ಬರೆದ ಕತೆ “ಸ್ಲಾ..ಟ್!” ನಿಮ್ಮ ಈ ಭಾನುವಾರದ ಓದಿಗೆ

Read More

ನಡುವೆ ಹತ್ತಿದವರು ನಡುವೆಯೇ ಇಳಿದುಹೋದರು: “ದಡ ಸೇರದ ದೋಣಿ” ಸರಣಿಯಲ್ಲಿ ವಸಂತಕುಮಾರ್‌ ಕಲ್ಯಾಣಿ ಬರಹ

ಹೀಗೆ ಕಾಲ ಓಡಿತು. ಪತ್ರಗಳು ನಿಂತು ಹೋದವು. ಫೋನ್ ನಿಂತುಹೋಯಿತು. ಅವರವರ ಕೆಲಸದಲ್ಲಿ ಅವರವರು ಬ್ಯುಸಿ ಆದರು. ಓದು, ಕೆಲಸ ಹುಡುಕುವುದು, ಹಣಕಾಸಿನ ತಾಪತ್ರಯದಲ್ಲಿ ನಾವುಗಳು ಊರಿಗೆ ಹೋಗಿ ಬರುವುದು ಕಡಿಮೆಯಾಯಿತು. ಊರಿನಲ್ಲಿ ಮೊದಲು ದೊಡ್ಡ ದೊಡ್ಡಮ್ಮ, ನಂತರ ಹಿರಿಯಕ್ಕ ತೀರಿಕೊಂಡ ಸುದ್ದಿ ಹೇಗೋ ನಮ್ಮನ್ನು ತಲುಪಿತು. ಅಲ್ಲಿಗೂ ಇವಳು ಹೆಚ್ಚು ಹೋಗಿ ಬಂದು ಮಾಡುತ್ತಿರಲಿಲ್ಲ, ತನ್ನ ಗಂಡನ ಮುಂದೆ ತಾಯಿ ಮನೆಯ ಹೀನಾಯ ಪರಿಸ್ಥಿತಿ ಕಾಣಬಾರದೆಂದು ಭಾವಿಸಿ…. ಅವಳ ತಮ್ಮ ಹೆಂಡತಿಯೊಂದಿಗೆ ಕಿರಿಕಿರಿ ಮಾಡಿಕೊಂಡ. ಕುಡಿತ ಹೆಚ್ಚಾಯಿತು. ಬದುಕು ಮೂರಾ ಬಟ್ಟೆಯಾಯಿತು.
“ದಡ ಸೇರದ ದೋಣಿ” ಸರಣಿಯಲ್ಲಿ ವಸಂತಕುಮಾರ್‌ ಕಲ್ಯಾಣಿ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಸುಮಾರು ನಾಲ್ಕು ಮೂವತ್ತಕ್ಕೆ ಯಾವುದೋ ಕನಸಿನ ಲೋಕದಲ್ಲಿದ್ದವನಿಗೆ, ಎಂಪಿ ಶಂಕರ್ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಪ್ರಭಾಕರ್, ಶಕ್ತಿಪ್ರಸಾದ್ ಮುಂತಾದವರೆಲ್ಲ ಒಟ್ಟಿಗೆ ಗಹಗಹಿಸಿ ನಕ್ಕ ಹಾಗೆ ದನಿ ಕೇಳಿ ಎಚ್ಚರವಾಯಿತು. ಕೆಲಕ್ಷಣದ ನಂತರ ಅದು ಚೇಚಿ ಮನೆಯ ಕೋಳಿಯ ಕೂಗು ಎಂಬ ಕಟು ವಾಸ್ತವ ಅರಿವಿಗೆ ಬಂತು. ಸರಿ ‘ಸುಸು’ ಮಾಡಿ ನೀರು ಕುಡಿದು ಮಲಗಿದರಾಯಿತು ಎಂದು, ಎಲ್ಲ ಮುಗಿಸಿ ಮಲಗಿದರೆ, ಅದರ ಆರ್ಭಟ ಇನ್ನಷ್ಟು ಹೆಚ್ಚಾಯಿತು.
ವಸಂತಕುಮಾರ್ ಕಲ್ಯಾಣಿ ಪ್ರಬಂಧ ನಿಮ್ಮ ಓದಿಗೆ

Read More

ಯಾವುದೀ “ಮುಳ್ಳು, ನಾಲಿಗೆ…?”: ವಸಂತಕುಮಾರ್‌ ಕಲ್ಯಾಣಿ ಬರಹ

ಹಾಗಾಗಿ ಕೆಲವು ಗಂಡು ಮಕ್ಕಳು ಹೆಣ್ಣು ಮಕ್ಕಳು ಕೂತ ಭಾಗದಲ್ಲಿನ ಕೊನೆಯ ಬೆಂಚ್‌ಗಳಲ್ಲಿ ಕೂರಬೇಕಿತ್ತು. ಅವರ ಪೆನ್ನಿನಲ್ಲಿ ಇಂಕ್ ಖಾಲಿಯಾದಾಗ, ಒಬ್ಬಳು ಇನ್ನೊಬ್ಬಳಿಂದ ಸಾಲ ಪಡೆಯುತ್ತಿದ್ದಳು. ಅದು ಹೇಗೆಂದರೆ, ಪೆನ್ನಿನ ಮೇಲ್ ಭಾಗದ ತಿರುಪು ತಿರುಗಿಸಿಕೊಂಡು, ಕೆಳಮುಖವಾಗಿ ಇಟ್ಟುಕೊಂಡು ಪುನಃ ತಿರುಪು ಟೈಟ್ ಮಾಡುವಾಗ ಒಂದೊಂದೇ ತೊಟ್ಟು ಇಂಕ್ ಕೆಳಗೆ ಬೀಳುತ್ತಿತ್ತು, ಅದನ್ನು ಇಂಕ್ ಬೇಕಾದವರು ತಮ್ಮ ಪೆನ್ನನ್ನು ಸಿದ್ಧವಾಗಿಟ್ಟುಕೊಂಡು ನಾಜೂಕಾಗಿ ಒಳಗೆ ಬೀಳುವಹಾಗೆ ಮಾಡಿಕೊಂಡು, ಎಷ್ಟು ತೊಟ್ಟು ಬಿತ್ತು ಗಮನಿಸಿ, ಪುನಃ ಸಾಲ ವಾಪಸ್ ಮಾಡಬೇಕು.
ವಸಂತಕುಮಾರ್‌ ಕಲ್ಯಾಣಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ