Advertisement

Tag: Vinathe Sharma

ದೇಸಿ ವಿದ್ಯಾರ್ಥಿಗಳ ಇನ್ನಷ್ಟು ಕಥೆಗಳು: ಡಾ. ವಿನತೆ ಶರ್ಮ ಅಂಕಣ

“ಭಾರತದಲ್ಲಿ ಸರ್ಜನ್ ಆಗಿದ್ದ ಗಂಡನಿಗೆ ಕೆಲಸವಿಲ್ಲದೇ ನಿರುದ್ಯೋಗಿ ಪಟ್ಟ ಸಿಕ್ಕು ತಲೆಕೆಟ್ಟಂತಾಗಿತ್ತು. ಇಲ್ಲಿನ ಕ್ರಮ, ಪದ್ಧತಿಯಂತೆ ದಂತವೈದ್ಯನಾಗಿ ನೋಂದಣಿ ಮಾಡಿಸಲು, ತನ್ನ ವೃತ್ತಿಯನ್ನು ಪ್ರಾಕ್ಟಿಸ್ ಮಾಡಲು ಪರವಾನಗಿ ಪಡೆಯಬೇಕಿತ್ತು. ಅದಕ್ಕಾಗಿ ಬಹುಕಷ್ಟದ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆಯಬೇಕಿತ್ತಂತೆ. ಅದಕ್ಕಾಗಿ ಆತ ಹೆಣಗಾಡುತ್ತಿದ್ದ. ಅವರಿಬ್ಬರ ಮಧ್ಯೆ ಆ ಐದು ವರ್ಷದ ಬಾಲಕ ಕಂಗೆಟ್ಟುಹೋಗಿದ್ದ.”

Read More

ದೇಸಿ ವಿದ್ಯಾರ್ಥಿಗಳ ವಿದೇಶಿ ಹಾಡುಪಾಡು: ವಿನತೆ ಶರ್ಮಾ ಅಂಕಣ

“ಇಷ್ಟೆಲ್ಲಾ ಆಗುವಷ್ಟರಲ್ಲಿ ಅವನ ಇಬ್ಬರು ಸ್ನೇಹಿತರು ವಾಪಸ್ ಹೈದರಾಬಾದಿನ ತಮ್ಮನೆಗೆ ವಾಪಸ್ಸಾಗಿದ್ದರು. ಇವನು ಆಶಾವಾದಿ, ದೇಶದ ಆರ್ಥಿಕತೆಗೆ ಅನುಕೂಲವಾಗುವ ಮತ್ತೊಂದು ಆರು ತಿಂಗಳ ಕೋರ್ಸಿಗೆ ಸೇರಿಕೊಂಡು ಪಾರ್ಟ್ ಟೈಮ್ ವಿದ್ಯಾರ್ಥಿಯಾದ. ಈಗ ಆ ಕೋರ್ಸನ್ನ ಮಾಡುತ್ತಲೇ ಜೀವನೋಪಾಯಕ್ಕಾಗಿ ಎರಡು ಕಡೆ ಕೆಲಸ ಮಾಡುತ್ತಿದ್ದಾನೆ. ಅವನ ಒಂದು ಉದ್ಯೋಗವಿರುವುದು ಪಿಜ್ಝಾ ಅಂಗಡಿಯಲ್ಲಿ..”

Read More

ಕತ್ತಲು ಮತ್ತು ಬೆಳಕಿನ ಹಬ್ಬಗಳ ಸಂಭ್ರಮದಲ್ಲಿ…: ವಿನತೆ ಶರ್ಮ ಅಂಕಣ

“ನಮ್ಮ ಆಸ್ಟ್ರೇಲಿಯಾದಲ್ಲಿ ದೀಪಾವಳಿ ಸಮಯವೆಂದರೆ ಕತ್ತಲು ಕಡಿಮೆಯಾಗುತ್ತಾ ಹೋಗುವ ತದ್ವಿರುದ್ಧ ಕಾಲ. ಎಷ್ಟಾದರೂ ನಾವಿರುವುದು ದಕ್ಷಿಣ ಭೂಗೋಳದಲ್ಲಿ. ತಲೆಮೇಲಿನ ಉತ್ತರ ಗೋಳದಲ್ಲಿ ನಡೆಯುವ ಪ್ರಾಪಂಚಿಕ ವಹಿವಾಟುಗಳ ವಿರುದ್ಧ ದಿಕ್ಕಿನಲ್ಲಿ ನಮ್ಮ ಕಾಲ ನಡೆಯುತ್ತದೆ. ಹಬ್ಬದ ದಿನಗಳ ಸಂಜೆ ಮನೆತುಂಬಾ, ಅಂಗಳದಲ್ಲಿ ದೀಪ ಹಚ್ಚಲು….”

Read More

ಹಲ್ಲಿ, ಹಾವು, ಚೇಳುಗಳ ಸ್ವರ್ಗ!: ಡಾ.ವಿನತೆ ಶರ್ಮಾ ಅಂಕಣ

“ಹೇಳಿಕೇಳಿ, ಆಸ್ಟ್ರೇಲಿಯಾದ ಪರಿಸರ ಬಹು ಸೂಕ್ಷ್ಮವಾದದ್ದು, ಬೇರೆ ಖಂಡಗಳಿಗಿಂತ ಭಿನ್ನವಾದದ್ದು. ಪರದೇಶದಿಂದ ಆಮದಾಗಿ ಬಂದ ಕಪ್ಪೆ ಈ ದೇಶದ ಸ್ವಾಭಾವಿಕ ಪರಿಸರಕ್ಕೆ ಮತ್ತು ಜೀವಚರಗಳಿಗೆ ದುಃಸ್ವಪ್ನವಾಗಿಬಿಟ್ಟಿತು. ಈ ಕಪ್ಪೆಯ ವಂಶಾಭಿವೃದ್ದಿಯನ್ನ ತಡೆಗಟ್ಟಲು, ಅದನ್ನು ಧೈರ್ಯದಿಂದ ಎದುರಿಸಿ ನುಂಗಿ ನೀರುಕುಡಿಯಲು ಇಲ್ಲಿ ಯಾವುದೇ ಪರಭಕ್ಷಕ ಪ್ರಾಣಿ ಇರಲಿಲ್ಲ. ಕಪ್ಪೆಗೆ ಆಸ್ಟ್ರೇಲಿಯಾದಲ್ಲಿ ಯಾವ ಎದುರಾಳಿಯೂ ಇಲ್ಲವಾಗಿ, ಇಲ್ಲಿನ ಸ್ವಾತಂತ್ರ್ಯ ಅದಕ್ಕೆ ತುಂಬಾ ಇಷ್ಟವಾಗಿಹೋಯ್ತು.”

Read More

ರಾಣಿರಾಜ್ಯದಲ್ಲಿ ಬೆಂಕಿ ವಿಕೋಪ, ಪ್ರವಾಹ ತಾಪ: ವಿನತೆ ಶರ್ಮ ಅಂಕಣ

“ಬೆಂಕಿ ಬಂದಾಗ ಮನೆ ತೊರೆಯುವುದಿಲ್ಲ, ಸತ್ತರೆ ಇಲ್ಲೇ ಎನ್ನುತ್ತಾ ಹಠಹಿಡಿದು ಕುರ್ಚಿ ಹಾಕಿಕೊಂಡು ಮನೆಮುಂದೆ ಕುಳಿತು ಬೆಂದುಹೋದ ಪತ್ನಿಯ ಬಗ್ಗೆ ರೋಧಿಸುತ್ತಿದ್ದ ವೃದ್ಧ, ತನ್ನ ಪುಟ್ಟ ನಾಯಿಯನ್ನ ಕಳೆದುಕೊಂಡ ಬಾಲಕಿಯ ಆಕ್ರಂದನ, ಮನೆ, ಆಸ್ತಿಪಾಸ್ತಿ, ಕುದುರೆಗಳನ್ನು ಕಳೆದುಕೊಂಡ ನಿರ್ಗತಿಕರಾದ ಆರು ಜನರಿದ್ದ ಕುಟುಂಬ, ಪ್ರವಾಹ ಬಂದಾಗ ತನ್ನ ಕಾರಿನ ಮೇಲೇರಿ ನಿಂತು ಫೋಟೋ ಹಿಡಿಯುತ್ತಾ ರೋಮಾಂಚಿತನಾದ ಯುವಕ, ಬೇರೆ ದೇಶದಿಂದ ಬಂದು ಇಲ್ಲಿ ಬದುಕುತ್ತಾ ಬಾಳುತ್ತಿದ್ದರೂ ಕೂಡ ನೆರೆ ಬಂದಾಗ ಸಹಾಯ ಮಾಡದೆ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ