Advertisement

Tag: Vishwanath Neralakatte

ಏಳು ಸುತ್ತಿನ ಕೋಟೆಯ ನಡುವೆ ಜಾಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಾಂಬಿಯಾದ ಸುಮಾರು ಅರುವತ್ತೇಳು ಸಾವಿರ ಚದರ ಕಿಲೋಮೀಟರ್‌ಗಳಷ್ಟು ಕಾಡನ್ನು ಮೀಸಲು ಅರಣ್ಯ ಪ್ರದೇಶ ಎಂದು ಗುರುತಿಸಲಾಗಿದೆ. ಕಾಪರ್‌ಬೆಲ್ಟ್‌ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿಯೇ ಮರಗಳನ್ನು ನೆಡಲಾಗಿದೆ. ಇಲ್ಲಿ ಪ್ರಮುಖವಾಗಿ ಸಾಫ್ಟ್‌ವುಡ್ ಮರಗಳಿವೆ. ನೈಋತ್ಯ ಭಾಗದಲ್ಲಿ ಜಾಂಬೆಜಿ ನದಿತೀರದ ಪ್ರದೇಶಗಳಲ್ಲಿ ತೇಗದ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ. ಜಾಂಬಿಯಾದಲ್ಲಿ ಅರಣ್ಯ ನಾಶವಾಗುತ್ತಿರುವುದಕ್ಕೆ ಪ್ರಮುಖ ಕಾರಣ ಅಡುಗೆಗಾಗಿ ಇದ್ದಿಲಿನ ಬಳಕೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಜಾಂಬಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಫ್ರೆಂಚ್ ಹಸ್ತದಿಂದ ಮುಕ್ತವಾದ ಗಿಣಿ ಗಿನಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಈ ದೇಶದಲ್ಲಿ ತೀವ್ರವಾದ ಬಡತನವಿದೆ. ಯುವಜನತೆ ಹೆಚ್ಚಿರುವ ದೇಶವಾದ ಕಾರಣ ಜನಸಂಖ್ಯೆ ಈಚೀಚೆಗೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿಯೂ ಸಹ ಗಿನಿಯಾ ದೇಶವು ಅರಣ್ಯ ಪ್ರದೇಶಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಗಿನಿಯಾ ದೇಶವು ವಿಸ್ತೃತವಾದ ಕರಾವಳಿ ಪ್ರದೇಶವನ್ನು ಹೊಂದಿದೆ. ಸುಮಾರು ಮುನ್ನೂರ ಇಪ್ಪತ್ತು ಕಿಲೋಮೀಟರ್‌ಗಳಷ್ಟು ಉದ್ದದ ಕರಾವಳಿಯನ್ನು ಹೊಂದಿದ ದೇಶವಿದು. ಇದರ ರಾಜಧಾನಿ ಕೊನಾಕ್ರಿ ನೆಲೆನಿಂತಿರುವುದೇ ಕರಾವಳಿಯಲ್ಲಿ. ಎಲ್ಲರ ಕಣ್ಮನ ಸೆಳೆಯುವ ಸುಂದರವಾದ ಕಡಲತೀರಗಳನ್ನು ಹೊತ್ತುನಿಂತಿದೆ ಕರಾವಳಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಗಿನಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಗತಕಾಲದ ಚಿನ್ನದ ಗಣಿ ಕೊಲಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಕೊಲಂಬಿಯಾದಲ್ಲಿ ದೊಡ್ಡವರು ಮಾತ್ರವಲ್ಲ, ಚಿಕ್ಕ ಮಕ್ಕಳೂ ಸಹ ಕಾಫಿಪ್ರಿಯರು. ಊಟದ ನಂತರವೂ ಸಹ ಕಾಫಿ ಕುಡಿಯುವ ಅಭ್ಯಾಸವನ್ನು ಇವರು ಇಟ್ಟುಕೊಂಡಿದ್ದಾರೆ. ರಾತ್ರಿಯ ಊಟದ ನಂತರ ಹೆತ್ತವರೇ ತಮ್ಮ ಮಕ್ಕಳಿಗೆ ಕಾಫಿಯನ್ನು ಕುಡಿಯುವುದಕ್ಕೆ ಕೊಡುತ್ತಾರೆ. ಇದನ್ನು ‘ಕಾಫಿ ಕಾನ್ ಲೆಚೆ’ ಎಂದು ಕೊಲಂಬಿಯನ್ ಭಾಷೆಯಲ್ಲಿ ಕರೆಯಲಾಗುತ್ತದೆ. ಅಂದರೆ ‘ಹಾಲಿನ ಜೊತೆಗೆ ಕಾಫಿ’ ಎಂದರ್ಥ. ಮಕ್ಕಳಿಗೆ ಹಾಲಿನ ಜೊತೆಗೆ ಬೆರೆಸಿದ ಲೈಟಾದ ಕಾಫಿಯನ್ನು ಕೊಡುವ ದೊಡ್ಡವರು ಸ್ಟ್ರಾಂಗ್ ಕಾಫಿಯನ್ನೇ ಕುಡಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಗುರುತರ ಗುರಿಯೆಡೆಗೆ ಓಡಲಿ ಜಮೈಕಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಮೈಕಾದ ಜನರು ಕಲೆಗಳ ಬಗೆಗೆ ಅತೀವ ಆಸಕ್ತಿಯನ್ನು ಹೊಂದಿದ್ದಾರೆ. ದೃಶ್ಯ ಕಲೆಗಳು ಮತ್ತು ಪ್ರದರ್ಶನ ಕಲೆಗಳು ಜಮೈಕಾದ ಜನರ ಬದುಕಿನ ಅವಿಭಾಜ್ಯ ಅಂಗಗಳು. ಕಲ್ಪನೆ, ಉತ್ಸುಕತೆ ಮತ್ತು ಸೃಜನಶೀಲತೆಗಳ ಮೂಲಕ ವಿವಿಧ ಕಲೆಗಳನ್ನು ರೂಪಿಸಿಕೊಂಡಿದೆ ಜಮೈಕಾ. ಕಲೆಗಳು ಅಲ್ಲಿಯ ಜನರ ಬದುಕಿನ ಸ್ಫೂರ್ತಿಯ ಸೆಲೆಯಾಗಿದೆ. ಬ್ಯಾರಿಂಗ್ಟನ್ ವ್ಯಾಟ್ಸನ್, ಆಲ್ಬರ್ಟ್ ಹುಯಿ ಇವರು ಜಮೈಕಾದ ಚಿತ್ರಕಲಾವಿದರು. ಎಡ್ನಾ ಮ್ಯಾನ್ಲಿ ಎನ್ನುವವರು ಪ್ರಸಿದ್ಧ ಶಿಲ್ಪಿಯಾಗಿದ್ದಾರೆ. ಇವರು ಜಮೈಕಾದಲ್ಲಿ ಮಾತ್ರವಲ್ಲದೆ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ