Advertisement

Tag: Yakshagana

ಯಕ್ಷಗಾನ ಸಂಘಟಕರ ಸಂದರ್ಶನ…

ನಿಜವಾಗಿ ಹೇಳೊದಂದ್ರೆ ನಮಗೆ ಯಕ್ಷಗಾನದ ಮೇಲಿರೊ ಪ್ರೀತಿನೆ ಯಕ್ಷಗಾನ ಮಾಡಿಸೋಕೆ ಇರೊ ಕಾರಣ. ಇಲ್ಲಿ ಪ್ರತಿ ದಿನ ಒಂದಿಪ್ಪತ್ತು ಜನ ಇಲ್ಲಿ ಸೇರ್ತೇವಲ್ಲ, 365 ದಿನನೂ ಯಕ್ಷಗಾನದ ಏನಾದ್ರು ಒಂದು ಸುದ್ದಿ ಮಾತಾಡೇ ಆಡ್ತಿವಿ. ಮಳೆಗಾಲದಲ್ಲಿ ತಾಳಮದ್ದಲೆ ನೋಡ್ತಿವಿ. ಇಲ್ಲಿ ಈ ತರ ಅರ್ಥ ಹೇಳಿದರು. ಅಲ್ಲೊಂದು ಆಟ ನೋಡಿಕೊಂಡು ಬಂದೆ, ಹಿಂಗಾಯಿತು, ಹಂಗಾಯಿತು ಅಂತ ಏನೊ ಒಂದು ಮಾತು ಇರತ್ತೆ.
“ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಕೃತಿ ಆರ್ ಪುರಪ್ಪೇಮನೆ ಬರಹ

Read More

ಎ. ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಆ ರಾತ್ರಿ ಯಕ್ಷಗಾನ ಎಲ್ಲಾ ನೋಡಿ ಮುಗಿದು ಬೆಳಿಗ್ಗೆ ಮನೆಗೆ ತಲುಪಿದೆ. ಕಣ್ಣೀರಿನ ಹೊರತು ಆ ದಿನ ಸಮಜಾಯಿಷಿ ಕೊಡಲು ನನ್ನಲ್ಲಿ ಯಾವ ಮಾತುಗಳೂ ಇರಲಿಲ್ಲ. ನಿಜ ನಾನೇನು ತಪ್ಪು ಮಾಡಿರಲಿಲ್ಲ, ಆದರೆ ಯಾಕೋ ನನಗೆ ಅಮ್ಮನನ್ನು ಒಬ್ಬಳನ್ನೇ ಬಿಟ್ಟು ಹೋದ ಆ ತಪ್ಪಿತಸ್ಥ ಭಾವ ಆ ದಿನದಿಂದ ಬಹಳವಾಗಿ ಕಾಡಿತು ಮಹೇಶ. ಆ ನೋವಿನಿಂದಾಗಿ ಆ ದಿನದಿಂದ ನಾನು ಎಂದಿಗೂ ಯಕ್ಷಗಾನದತ್ತ ಕಣ್ಣು ಹಾಯಿಸಲೇ ಇಲ್ಲ.
ಎ.ಬಿ. ಪಚ್ಚು ಬರೆದ ಕತೆ “ಮೈಸಾಸುರ”

Read More

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಪೇಟೇಸರದಲ್ಲಿ ನೋಡಿದ ಯಕ್ಷಗಾನ ಬಯಲಾಟದ ಸುತ್ತಮುತ್ತ

ಮಂಡಕ್ಕಿ ಅಂಗಡಿ ಇಡುವವರು ನಮ್ಮ ಚರ್ಚೆಯಲ್ಲಿ ಭಾಗವಹಿಸಿದರು, ಆದರೆ ಅವರು ಫೋಟೊ ತೆಗೆಯೋದು ಬೇಡ ಅಂದರು. ಮುಂಚೆ ಬಳೆ ವ್ಯಾಪಾರ ಮಾಡುತ್ತಿದ್ದರು. ಯಕ್ಷಗಾನವು ಇಷ್ಟ ಆಗುವುದರಿಂದ ಮಂಡಕ್ಕಿ ವ್ಯಾಪಾರ ಮಾಡುತ್ತಾರೆ. ಟೆಂಟ್ ಮೇಳದಲ್ಲಿ ಬರಿ ಭಾಗವತಿಕೆ ಕೇಳೋಕಾಗತ್ತೆ. ಭಾಗವತಿಕೆನೆ ಮುಖ್ಯ ಅವರ ಪ್ರಕಾರ. ‘ಯಕ್ಷಗಾನ ನೋಡಿದ ಹಾಗೂ ಆತು, ಗಂಜಿಗೆ ಕಾಸು ಆತು’, ಅದಕ್ಕೆ ಮಂಡಕ್ಕಿ ವ್ಯಾಪಾರ ಶುರುಮಾಡಿದೆ ಅಂದರು. ಇಲ್ಲಿಯ ಎಲ್ಲಾ ಕಲಾವಿದರೂ ಯಾವ ಪಾತ್ರವನ್ನಾದರೂ ಪದ್ಯ ನೋಡಿಕೊಂಡು ಮಾಡಬಲ್ಲವರಾಗಿದ್ದರು.
ಕೃತಿ ಪುರಪ್ಪೇಮನೆ ಬರಹ

Read More

ಮಡಿವಂತಿಕೆಯ ರಂಗಸ್ಥಳದಲ್ಲಿ ಹೊಸ ಪ್ರಸಂಗಗಳ ಗ್ರಹಿಕೆ

ಹೊಸ ಪ್ರಸಂಗಗಳ ಬಗ್ಗೆ ಸಾಮಾನ್ಯವಾಗಿ ಒಂದು ಸೀಮಿತ ಗ್ರಹಿಕೆಯಿರುತ್ತದೆ. ಯಕ್ಷಗಾನವೆಂದರೆ ಅದು ಹಳೆಯ ಕಲೆ, ಅದಕ್ಕೆ ನೂರಾರು ವರ್ಷಗಳ ಪರಂಪರೆಯಿದೆ. ಅದು ಪುರಾಣ ಕತೆಗಳ ಮೌಲ್ಯ ಪ್ರಸಾರಕ್ಕಾಗಿದೆ, ನಮ್ಮ ಜೀವನಕ್ಕೆ ಬೇಕಾಗುವ ಮೌಲ್ಯವೇ ಪುರಾಣಗಳಲ್ಲಿವೆ ಮತ್ತು ಹಳೆಯದೆಲ್ಲವನ್ನು ರಕ್ಷಿಸಬೇಕು ಎನ್ನುವ ನಂಬಿಕೆಯಿಂದಾಗಿ. ಜೊತೆಗೆ ಅದೊಂದು ಗಂಭೀರವಾದ ಕಲೆ ಎನ್ನುವ ದೃಷ್ಟಿಕೋನವೂ ಸೇರಿಕೊಂಡಿದೆ. ಗಂಭೀರವೆಂದರೆ ರಂಜನೆಯಿಲ್ಲದ್ದು ಅನ್ನುವುದು ಒಮ್ಮೊಮ್ಮೆ ಅವರ ಮಾತುಗಳಲ್ಲಿ ಧ್ವನಿಸುತ್ತದೆ. ಇವೆಲ್ಲ ನಂಬಿಕೆಗಳು ವಸಾಹತಿನ ಕಾಲದಲ್ಲಿ ಹುಟ್ಟಿದ ರಾಷ್ಟ್ರೀಯತೆಯ ಕಲ್ಪನೆಯೊಟ್ಟಿಗೆ ಬಂದದ್ದೆಂದು ಕಾಣುತ್ತದೆ. ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ