Advertisement

Tag: Yogindra Maravanthe

ಕೊನೆಯ ಸಿಖ್ ದೊರೆಯ ಹತಾಶ ಚರಿತೆ

ತಾಯಿಯಿಂದ ದೂರವಾಗಿ ಕೆಲವು ವರ್ಷಗಳ ನಂತರ, ನೇಪಾಳದಲ್ಲಿ ಆಕೆ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ದುಲೀಪ್ ಸಿಂಗ್ ಅಮ್ಮನಿಗೆ ಹಲವು ಪತ್ರಗಳನ್ನು ಬರೆದಿದ್ದ. ನಿರಂತರ ಕೋರಿಕೆಯ ನಂತರ ಕೊಲ್ಕತ್ತಾದಲ್ಲಿ ತಾಯಿ-ಮಗನ ಭೇಟಿಗೆ ವ್ಯವಸ್ಥೆ ಮಾಡಲಾಯಿತು. 13 ವರ್ಷಗಳ ನಂತರ ಕಾಣಸಿಕ್ಕ ಮಗ ನಯವಾಗಿ ಮುಖ ಕ್ಷೌರ ಮಾಡಿಕೊಂಡು “ಜಂಟಲ್ಲ್ಮ್ಯಾನ್” ಆಗಿದ್ದನ್ನು ನೋಡಿ, ಸಿಖ್ ಸಾಮ್ರಾಜ್ಯ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ದುಃಖ ಪಂಜಾಬಿ ಅಸ್ಮಿತೆಯನ್ನು ಅಳಿಸಿಕೊಂಡ ಮಗನಿಂದ ಆಯಿತು ಎಂದಿದ್ದಳಂತೆ ಜಿಂದಾ ಕೌರ್.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕೊನೆಯ ಸಿಖ್ ದೊರೆ ದುಲೀಪ್ ಸಿಂಗ್ ಜೀವನದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಇಲ್ಲಿ ಉಳಿದರು ಹೀಗೆ ನಡೆದರು ಅಂಬೇಡ್ಕರ್

ಗಾಂಧೀಜಿ ಹಳ್ಳಿಗಳನ್ನು ಭಾರತದ ಬೆನ್ನೆಲುಬು, ನಾಗರಿಕತೆಯ ತೊಟ್ಟಿಲು ಎಂದು ವೈಭವೀಕರಿಸಿದರೆ ಅಂಬೇಡ್ಕರರಿಗೆ ಅವು ಜಾತ್ಯಾಧಾರಿತ ತಾರತಮ್ಯವನ್ನು ಸ್ಥಿರಗೊಳಿಸಿ ಆಳುವ ಕೂಪಗಳಾಗಿ ಕಾಣುತ್ತಿದ್ದವು. ಒಡಹುಟ್ಟಿದವರಿಗೆ ಸೇವೆಗಳು ನಿರ್ಬಂಧಿಸಲಾದ, ಕೆಲವು ಜಾತಿಗಳವರನ್ನು ಹೀನರೆಂದು ತಿಳಿಯುವ ಹಳ್ಳಿಯಲ್ಲಿ ಅವರು ವಾಸಿಸಿದವರು. ಪಟ್ಟಣಗಳು ಅವಕಾಶಗಳನ್ನು ಒದಗಿಸುವ, ಶಿಕ್ಷಣಕ್ಕೆ ಉತ್ತೇಜನ ನೀಡುವ ಜಾತಿಯನ್ನು ಆಧರಿಸದೇ ಉದ್ಯೋಗ ಬದುಕು ನೀಡುವ ತಾಣಗಳಾಗಿ ಕಂಡಿದ್ದವು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಎರಡು ತೀರಗಳ ಸೇರಿಸಿದ ಹಿರಿಯಜ್ಜ

ಮೂರು ದಶಕಗಳ ರಾಜಕೀಯ ಜೀವನದಲ್ಲಿ ದಾದಾಬಾಯಿ ನವರೋಜಿ ಏಳು ಬಾರಿ ಬ್ರಿಟನ್‌ಗೆ ಭೇಟಿ ನೀಡಿದರು, ಐದು ಬಾರಿ ಲಂಡನ್ ನ ಬೇರೆ ಬೇರೆ ವಿಳಾಸಗಳಲ್ಲಿ ಉಳಿದರು. ಭಾರತದಲ್ಲಿ ಬ್ರಿಟಿಷ್ ಆಡಳಿತದ ಬಗ್ಗೆ ಬ್ರಿಟನ್ನಿನ ಬೇರೆ ಬೇರೆ ಭಾಗಗಳಿಗೆ ತನ್ನ ಯೋಚನೆಗಳನ್ನು ತಿಳಿಸಲು ತಿರುಗಾಡಿದರು. 1906, ಎಂಭತ್ತರ ವಯಸ್ಸಿನಲ್ಲಿ ಮತ್ತೆ ಸಂಸತ್ತಿಗೆ ಮರಳುವ ಯತ್ನ ಮಾಡಿದರು. ಆದರೆ ಚುನಾವಣೆಯಲ್ಲಿ ಸೋತರು. ಲಂಡನ್‌ನ ಲಾಂಬೆತ್ ಪ್ರದೇಶದಲ್ಲಿ, ಒಂದು ಕಾಲಕ್ಕೆ ತಾವು ಸಮರ್ಥಿಸುತ್ತಿದ್ದ ಲಿಬರಲ್ ಪಕ್ಷದ ಅಭ್ಯರ್ಥಿಯ ಎದುರು ಅವರು ನಿಂತಿದ್ದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ದಾದಾಬಾಯಿ ನವರೋಜಿ ಅವರ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ವಿವೇಕಾನಂದರು ನೀಡಿದ ಅನೇಕ ಉಪನ್ಯಾಸಗಳು  1896ರಲ್ಲಿ ಪ್ರಕಟವಾಗಿವೆ. ಪಶ್ಚಿಮದ ಅಧ್ಯಾತ್ಮ ಓದುಗರ ಕುತೂಹಲ ಆಸಕ್ತಿಗಳನ್ನು ಹೆಚ್ಚಿಸಿವೆ. ಹಿಂದೂ ನಂಬಿಕೆಗಳಲ್ಲಿ ಅಂತರ್ಗತವಾಗಿರುವ ದೇವರ ಕಲ್ಪನೆಯ ಪ್ರಚಾರಕನಾಗಿ ಬ್ರಿಟನ್ನಿಗೆ ಬಂದರು , ಎಲ್ಲ ಧರ್ಮಗಳ ಅರಿವಿನ ಪರಿಧಿಯನ್ನು ಹೆಚ್ಚಿಸಿ ಹೋದರು. ಭಾರತದಲ್ಲಿ ಜನಪ್ರಿಯವಾಗಿರುವ ವಿವಿಧ ನಂಬಿಕೆಗಳಿಂದ ನೇರ ಉದಾಹರಣೆಗಳನ್ನು ಆಧಾರವಾಗಿಸಿ ವಿವರಿಸುತ್ತಿದ್ದರು.ಎಲ್ಲ ನಂಬಿಕೆಗಳ ಒಳಹರಿವಾಗಿ , ಭಾರತೀಯ ಯೋಚನಾಕ್ರಮವನ್ನು ಆಧರಿಸಿದ ತತ್ವಶಾಸ್ತ್ರವನ್ನು ಬೋಧಿಸಿದರು. ವೇದ ಉಪನಿಷತ್ತು ಭಗವದ್ಗೀತೆಗಳನ್ನು ಉಲ್ಲೇಖಿಸಿದರು. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ ಇಲ್ಲಿದೆ.

Read More

ಪ್ರತಿಭೆಯ ತಿಜೋರಿಯಿಂದ ಜಗತ್ತನ್ನು ಶ್ರೀಮಂತಗೊಳಿಸಿದವನು

ಬರಹಗಾರನಾಗಲು ಲಂಡನ್ ಗೆ ಬಂದಿಳಿದ ಷಾ ಸರಿಯಾದ ಉದ್ಯೋಗ ಇಲ್ಲದೆ ತಾಯಿಯಿಂದ ಮತ್ತು ಆಕೆಯ ಹೊಸ ಗಂಡನಿಂದ ವಾರಕ್ಕೆ ಸಿಗುವ ಒಂದು ಪೌಂಡ್ ಹಣದ ಮೇಲೆ ಅವಲಂಬಿತನಾಗಿದ್ದ. ಮಧ್ಯಾಹ್ನಗಳನ್ನು ಬ್ರಿಟಿಷ್ ಮ್ಯೂಸಿಯಮ್‌ನ ಓದುವ ಕೋಣೆಯಲ್ಲಿ ಕಳೆಯುತ್ತಿದ್ದ. ಶಾಲೆಯಲ್ಲಿ ಯಾವುದನ್ನು ಪಡೆಯಲಾಗಲಿಲ್ಲವೋ ಲೈಬ್ರರಿಯ ಓದಿನಲ್ಲಿ ಅವನ್ನು ಓದಿ ಗಳಿಸುವ ಪ್ರಯತ್ನ ಮಾಡುತ್ತಿದ್ದ. ಕಾದಂಬರಿ ಬರೆಯಲು ಶುರು ಮಾಡಿದ. ಇನ್ನು ಸಂಜೆಯ ಹೊತ್ತಿಗೆ ಉಪನ್ಯಾಸಗಳು ಚರ್ಚೆಗಳು ನಡೆಯುವ ಲಂಡನ್ ನ ತಾಣಗಳನ್ನು ಹುಡುಕಿಕೊಂಡು ಅಲೆಯುತ್ತಿದ್ದ.
‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ನಾಟಕಕಾರ ಬರ್ನಾರ್ಡ್‌ ಷಾ ಬಗ್ಗೆ ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ