Advertisement

Tag: ಎಚ್. ಗೋಪಾಲಕೃಷ್ಣ

ಸೈನ್‌ ಹಾಕೋ ಫ್ರೆಂಡು…: ಎಚ್. ಗೋಪಾಲಕೃಷ್ಣ ಸರಣಿ

ಏನು ನೀನಿಲ್ಲಿ… ಅಂತ ಕೇಳಿದವರಿಗೆ ನನ್ನ ಹುಡುಕಾಟ ವಿವರಿಸಿ ವಿವರಿಸಿ ಬಾಯಿಪಾಠ ಆಗಿತ್ತು. ಬರೀ ಜಾಲಹಳ್ಳಿ ಅಂತ ಇದ್ದರೆ ಹುಡುಕೋದು ಅಸಾಧ್ಯ. ಆದರೂ ಇಂತ ಕಡೆ ಕೇಳು ಅಂತ ಅವರು ಸಿಕ್ಕಿದ ಜಾಗದಿಂದ ಒಂದು ಕಿಮೀ ದೂರ ಇರುವ ಮತ್ತೊಂದು ಜಾಗಕ್ಕೆ ಕಳಿಸಿ ಕೈ ತೊಳೆದವರು ಹೆಚ್ಚು. ಎಷ್ಟು ಉತ್ಸಾಹದಿಂದ ಬೆಳಿಗ್ಗೆ ಸೈಕಲ್ ಹತ್ತಿ ಹೊರಟಿದ್ದೆನೋ ಅಷ್ಟರ ನೂರು ಪಾಲು ಬೇಸರದಿಂದ ಮನೆಗೆ ವಾಪಸ್ ಆದೆ. ಅಣ್ಣನಿಗೆ ಈ ವಿಷಯ ವರದಿ ಮಾಡಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಎಂ.ಎಸ್.‌ ರಾಮಯ್ಯ ಕಾಲದ ಬೆಂಗಳೂರು: ಎಚ್. ಗೋಪಾಲಕೃಷ್ಣ ಸರಣಿ

ಈ ರಸ್ತೆಯಲ್ಲಿ ಮಿಲಿಟರಿಗೆ ಸಂಬಂಧಿಸಿದ ಕೆಲವು ಕಚೇರಿಗಳು ಇದ್ದವು. ಇಲ್ಲೂ ಸಹ ಒಂದು ರೈಲ್ವೇ ಗೇಟ್ ಇತ್ತು. ತೀರಾ ಈಚೆಗೆ ಒಂದು ಅಂಡರ್ ಪಾಸ್ ನಿರ್ಮಾಣವಾಗಿ ರೈಲು ಅದರ ತಳಗೆ ಹೋಗುತ್ತದೆ. ಮಿಲಿಟರಿ ಕಚೇರಿಗಳಿಗೆ ಸೇರಿದ ಹಾಗೆ ಒಂದು ಕಾರ್ಖಾನೆ ಇತ್ತು. ಅದರ ಹೆಸರು ಸಿಗ್ ಫಿಲ್ ಎಂದು. ಸಿಗರೇಟ್ ಫಿಲ್ಟರ್‌ನ ಕಂದು ಬಣ್ಣದ ಬೊಂಬೆ ಅದರ ಮುಖ್ಯ ಫಲಕದ ಮೇಲೆ ಬಿಂಬಿತವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಎಂ.ಎಸ್.‌ ರಾಮಯ್ಯ ಕುರಿತು ಮತ್ತಷ್ಟು…: ಎಚ್. ಗೋಪಾಲಕೃಷ್ಣ ಸರಣಿ

ಇನ್ನೊಂದು ಪ್ರಚಲಿತ ಇದ್ದ ಗಾಳಿಮಾತು ಎಂದರೆ ಅವರು ಕಟ್ಟಡ ನಿರ್ಮಾಣಕ್ಕೆ ಸಿಮೆಂಟ್ ಬೇಕು ಅಂದರೆ ಸಿಮೆಂಟ್ ಕಾರ್ಖಾನೆಯನ್ನು ಶುರುಮಾಡುತ್ತಾರೆ, ಕಬ್ಬಿಣ ಬೇಕು ಅಂದರೆ ಕಬ್ಬಿಣ ತಯಾರಿಕೆ ಫ್ಯಾಕ್ಟರಿ ಶುರುಮಾಡ್ತಾರೆ ಎನ್ನುವಂತಹ ರೆಕ್ಕೆ ಪುಕ್ಕ ಹುಟ್ಟಿಸಿಕೊಂಡ ಸುದ್ದಿಗಳು. ಬಿಲ್ಡಿಂಗ್ ಕಟ್ಟಲು ಇಟ್ಟಿಗೆ ಬೇಕು ತಾನೇ ಇವರದ್ದು ಇಟ್ಟಿಗೆ ಉದ್ಯಮ ಇತ್ತು ಮತ್ತು ಇದರಿಂದ ಈ ಸುದ್ದಿ ಹುಟ್ಟಿತೋ ತಿಳಿಯದು. ಇದಕ್ಕೆ ಪರ್ಯಾಯವಾಗಿ ಒಂದು ಜೋಕು ಹುಟ್ಟಿತ್ತು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಕೋಟಿಗೊಬ್ಬರು “ಎಂ.ಎಸ್.ರಾಮಯ್ಯ”‌: ಎಚ್. ಗೋಪಾಲಕೃಷ್ಣ ಸರಣಿ

ಮತ್ತಿಕೆರೆ ಎನ್ನುವ ಬೆಂಗಳೂರಿನ ಹೊರ ಮೂಲೆಯಲ್ಲಿದ್ದ ಒಂದು ಪುಟ್ಟ ಹಳ್ಳಿ ಇವತ್ತು ಜಗತ್ತಿನ ಒಂದು ಪ್ರಮುಖ ಸ್ಥಳವಾಗಿ ಮಾರ್ಪಾಟು ಆಗಿರುವಲ್ಲಿ ಎಂ ಎಸ್ ರಾಮಯ್ಯ ಅವರ ಕಾರ್ಯಕ್ಷೇತ್ರ ಎದ್ದು ಕಾಣುತ್ತದೆ. ಮತ್ತಿ ಕೆರೆ ಸಂಪಂಗಪ್ಪ ರಾಮಯ್ಯ ಹೀಗೆ ಜಗತ್ತಿನ ಭೂಪಟದಲ್ಲಿ ಬೆಂಗಳೂರು ಮತ್ತು ಮತ್ತಿ ಕೆರೆಗೆ ಒಂದು ವಿಶಿಷ್ಠ ಸ್ಥಾನ ದೊರಕಿಸಿ ಕೊಟ್ಟಿದ್ದಾರೆ. ಬಹುಶಃ ಜಗತ್ತಿನಲ್ಲಿ ಇಂತಹ ಉನ್ನತ ಮಟ್ಟಕ್ಕೆ ಏರಿದ ವ್ಯಕ್ತಿ ಅಪರೂಪದಲ್ಲಿ ಅಪರೂಪವೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಅಪ್ಪನಿಗೇ ನನ್ನನ್ನು ಪರಿಚಯ ಮಾಡಿಕೊಂಡಿದ್ದೆ!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಪ್ಪಂಗೆ ಅವರ ಮಕ್ಕಳ ಪರಿಚಯವೇ ಇಲ್ಲ ಅಂತ ಅಮ್ಮ ಆಗಾಗ ಮನೆಗೆ ಬಂದವರೆಲ್ಲರ ಮುಂದೆ ಹೇಳುತ್ತಿದ್ದಳು. ಅಪ್ಪ ನನ್ನ ಗುರುತು ಹಿಡಿತಾನೋ ಇಲ್ಲವೋ ಅಂತ ನನ್ನ ತಲೆಗೆ ಆಗ ಹೊಳಿಬೇಕಾ..? ಅಪ್ಪ ನನ್ನನ್ನು ನೋಡಿದ್ರಾ, ಮುಂದೆ ಸರಿದೆ. ಅಪ್ಪಾ, ನಾನು ಗೋಪಿ ನಿಮ್ಮ ಕೊನೇ ಮಗ.. ಅಂತ ವಿವರಿಸಲು ಹೊರಟೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ