Advertisement

Tag: ಕತೆ

ಗೌತಮ ಜ್ಯೋತ್ಸ್ನಾ ಬರೆದ ಈ ಭಾನುವಾರದ ಕತೆ

ವತ್ಸನ ಹೊಟ್ಟೆಯೊಳಗೆ ಏನೋ ಚುಚ್ಚಿದ ಹಾಗೆ ನೋವು, ಇಡೀ ಶರೀರ ಬಿಗಿಯಾಗುತ್ತಿದ್ದ ಭಾವ. ಆ ಬಾರಿನ ದೀಪದ ಬುರುಡೆಗಳು ಈಗ ದಟ್ಟ ಹಳದಿ ಪ್ರಭೆಯಲ್ಲಿ ಧಗಧಗಿಸುತ್ತಿದ್ದವು, ಯಾವುದೋ ಅನ್ಯ ಗ್ರಹದಲ್ಲಿ ಗ್ರಹಣವಾದಾಗ ಮಬ್ಬಾಗಿ ಬೆಳಕಾದಂತೆ.
ಗೌತಮ ಜ್ಯೋತ್ಸ್ನಾ ಹೊಸ ಕಥಾ ಸಂಕಲನ “ಜಕ್ಕಿಣಿ” ಬಿಡುಗಡೆಯಾಗುತ್ತಿದ್ದು, ಈ ಸಂಕಲನದ ಒಂದು ಕತೆ “ಮಾರೀಚ
ಅಥವಾ ಒಂದು ಅಪಾಯಕಾರಿ ಮನಸ್ಸಿನ ಪ್ರಣಯ ಪ್ರಸಂಗ” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಕತೆ

ಬ್ಯಾಂಕಿನಿಂದ ಫೋನು ಬಂತು. ಐವತ್ತು ಲಕ್ಷದ ಓಡಿ ಆಗಿದೆ ಅಂತ ಮ್ಯಾನೇಜರು ಹೇಳಿದರು. ಹಾಗಾದರೆ ಎಲ್ಲೋ ಎಡವಟ್ಟಾಗಿದೆ ಅಂತ ಮನಸ್ಸು ಹೇಳಿತು. ಯಾವತ್ತೂ ಮಕ್ಕಳನ್ನು ಅನುಮಾನಿಸದವನು ನನ್ನ ಬ್ಯಾಂಕ್ ಪಾಸ್ ಪುಸ್ತಕ, ಡಿಪಾಸಿಟ್ ಪತ್ರಗಳು, ಅಂಚೆ ಕಛೇರಿ ಎಮ್.ಐ.ಎಸ್‌ಗಳು ಇರುವುದನ್ನು ಖಾತರಿ ಮಾಡಿಕೊಂಡೆ. ಮಗಳು ಸುಧಾ ಹೆಸರಲ್ಲಿ ನಾಮಿನೇಶನ್ ಮಾಡಿದ್ದ ಬ್ಯಾಂಕ್ ಸರ್ಟಿಫಿಕೇಟ್ ವಿತ್‌ಡ್ರಾ ಆಗಿರುವುದೂ, ಸುಧಾಕರನ ಹೆಸರಲ್ಲಿ ಇಟ್ಟಿದ್ದ ಎಫ್.ಡಿಗಳು ಮಾಯವಾಗಿರುವುದೂ ಗೊತ್ತಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಬರೆದ ಕತೆ “ಜೂಜಿಗೆ ಕೂತವರ ಜುಜುಬಿ ಆಸೆಗಳು….” ನಿಮ್ಮ ಓದಿಗೆ

Read More

ಸುಬ್ರಹ್ಮಣ್ಯ ಹೆಗಡೆ ಬರೆದ ಈ ಭಾನುವಾರದ ಕತೆ

ಅಪರಾಧವು ಸಾಮೂಹಿಕವಾದಾಗ ಅದು ಸಾಮಾಜಿಕ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ತನ್ಮೂಲಕ ನಮ್ಮ ಊರಿನ ಗಂಡಸರೆಲ್ಲ ತಿಂಗಳಿಗೆ ಒಂದೆರಡು ಬಾರಿ ಟೆಂಟಿನಲ್ಲಿ ಬಿಸಿಯಾಗತೊಡಗಿದರು. ಆಸೆಗಳಿಗೆ ಬೇಧಭಾವವಿಲ್ಲ. ಎಲ್ಲರಿಗು ಆಸೆಗಳಿದ್ದರಿಂದ ಯಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕೆಲವು ವರ್ಷಗಳ ನಂತರ ತಾಲೂಕು ಸೆಂಟರಿನಲ್ಲಿ ಮಿನಿ ಥೇಟರು, ವಿಡಿಯೋ ಪಾರ್ಲರುಗಳು ಶುರುವಾದ ಕಾರಣ ಜನರಿಗೆ ಒಳ್ಳೆಯ ಕ್ಲಾರಿಟಿಯ ಅನುಭವ ಸಿಕ್ಕು, ಟೆಂಟು ಸತ್ತು ಹೋಯಿತು.
ಸುಬ್ರಹ್ಮಣ್ಯ ಹೆಗಡೆ ಬರೆದ ಕತೆ “ಪರಾಜಿತ ವಿಠ್ಠಲ ವಿಜಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ

ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್‌ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ