Advertisement

Tag: ಕತೆ

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”

Read More

ಮಂಜುನಾಯಕ ಚಳ್ಳೂರು ಬರೆದ ಕತೆ “ಫೂ….”

ಆ ಹೊತ್ತು ಅವಳು ಹುಚ್ಚಿಯಂತೆ ಕಾಣುತ್ತಿದ್ದಳು ನನಗೆ. ಮುಖದ ತುಂಬ ಕೈಯಾಡಿಸಿದಳು. ತಲೆ ಸವರಿದಳು. ಯಾಕೋ ಎಷ್ಟೊತ್ತಾದರೂ ನನ್ನ ಬಿಡಲೇ ಇಲ್ಲ. ಅವ್ವ ಅಲ್ಲಿಂದಲೇ, `ಸಾಕ್ ಹೋಗು ಚಂದ್ರಪ್ಪಾ. ಬುಟ್ರ ಲಂಗದಾಗ್ ಸುರುಗ್ಸ್ಯಂತಾಳ್ ಈ ಅಡಾವುಡಿ ನಿನ್ನಾ…’ ಎಂದಳು. ಅತ್ತೆ, `ಯೇ ಮಂಗಾ.. ಬಾಯೈತಂತ ಏನೇನರ ಬೊಗಳ್ಬ್ಯಾಡ. ನನ ಹೊಟ್ಯಾಗ್ ಹುಟ್ಬೇಕಾದದ್ ಇದು. ತಪ್ಪಿ ನಿನ್ ಹೊಟ್ಯಾಗ್ ಹುಟ್ಟೇತಿ.’ ಎಂದುತ್ತರಿಸಿದಳು. ಆಗವಳ ಕೈಗಳು ನಡುಗುತ್ತಿದ್ದವು. ಕೆಂಡದಂತೆ ಬೆಚ್ಚಗಾಗಿದ್ದವು.
ಮಂಜುನಾಯಕ ಚಳ್ಳೂರು ಅವರ “ಫೂ..” ಕಥಾಸಂಕಲನದ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಓದಿಗೆ

Read More

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ