Advertisement

Tag: ಕತೆ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ

ಬತ್ತಿ ಹೋಗಿರುವ ನದಿಯ ದಡದಲ್ಲಿ ಕುಳಿತು ಹರಿಯುವ ನದಿಯನ್ನು ಕಲ್ಪಿಸಿಕೊಂಡು ಸುಖಪಡುತ್ತಿದ್ದ ಕುಮದ್ವತಿಗೆ, ಎಲ್ಲವೂ ವೇಗವಾಗಿ ಮನಸಿನಲಿ ಸುಳಿದುಹೋದವು. ಕೆಲವು ಸಲ ಊರಿನವರ ಮಾತುಗಳಿಗೆ ಬೇಸರವಾದರೂ, ಪ್ರೀತಿಸುವ ಗಂಡನಿಂದ ಎಲ್ಲವೂ ಮರೆಯುತ್ತಿದ್ದಳು. ಸೊಸೆಯ ಒಳ್ಳೆಯತನ ಕಂಡಮೇಲೆ ಅತ್ತೆ ಇನ್ನೂ ಹತ್ತಿರವಾಗಿದ್ದರು. ಸೊಸೆಗೆ ಯಾವುದೇ ತೊಂದರೆ ಆಗದಂತೆ, ತನ್ನ ಮಗನಿಂದ ಅವಳಿಗೆ ಅನ್ಯಾಯ ಆಯಿತಲ್ಲ ಎನ್ನುವ ಪಾಪ ಪ್ರಜ್ಞೆಯಿಂದ ಸೊಸೆಯನ್ನು ಇನ್ನೂ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಳು.
ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ “ಕುಮದ್ವತಿ”

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ

“ಆ ಧೂಪದ ಹೈಕಳನ್ನು ಯಾರೂ ಹತ್ತಿಸಿಕೊಂಡು ಹೊಬ್ಗ್ಯಾಡ್ರಿ” ಎಂದು ಹೇಳಿದರೆ; ಎರಡು ದಿನ ಹೈಕಳು ಇಸ್ಕೂಲಿಗೆ ಬಂದರೆ ಮೂರನೆ ದಿನಕ್ಕೆ ಮತ್ತೆ ಅದೇ ರಾಗ ಅದೇ ಹಾಡು. ರೋಸಿ ಹೋದ ಮೇಷ್ಟ್ರು ಒಮ್ಮೆ ಬೆಟ್ಟದ ಇನ್ಸಪೆಕ್ಟ್ರು ಊರಿಗೆ ಬಂದಾಗ “ಯಾರಿಗೂ ಹೆದರದ ಇವರು ಪೋಲಿಸ್ನೋರ‍್ಗೆ ಖರೇ ಹೆದ್ರೂದು” ಎಂದು ಸ್ವಾಲಿಗ್ರ ಕೇರಿಗೆ, ಹೊಲೇರಕೇರಿಗೆ ಕರ್ಕೊಂಡೋಗಿ “ಮಕ್ಕಳನ್ನ ತಾಳುಬೆಟ್ಟಕ್ಕೆ ಧೂಪ ಮಾರುವುದಕ್ಕೆ ಕಳುಹಿಸಿದರೆ ಜೇಲಿಗೆ ಹಾಕಿಸ್ತೀನಿ ಎಂದು ರೋಪ್ ಹೊಡೆಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ “ಧೂಪದ ಮಕ್ಕಳು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ