Advertisement

Tag: ಕಥಾ ಸಂಕಲನ

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ ಒಡಲ ಸಂಕಟವನ್ನು ಕಲೆಯಾಗಿಸುವುದು ಸಾಧ್ಯವಾಗಿರುವುದರಿಂದಲೇ, ಈ ಕಥೆಗಳು ಓದುಗರೊಳಗೆ ತಮ್ಮ ಕಂಪನಗಳನ್ನು ವಿಸ್ತರಿಸಿಕೊಳ್ಳುವ ಕಸುವು ಹೊಂದಿವೆ.
ಗೋವಿಂದರಾಜು ಎಂ ಕಲ್ಲೂರು ಕಥಾ ಸಂಕಲನ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್‌ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ

Read More

ಮಂಜುನಾಯಕ ಚಳ್ಳೂರ ಕಥಾಲೋಕ…

“ಧಾರವಾಡದಲ್ಲಿ ಪಿಯುಸಿಯಲ್ಲಿದ್ದಾಗ ‘ಗಾಳಿಪಟ’ ಎಂಬ ಕತೆ ಬರೆದಿದ್ದೆ‌‌. ಅದಕ್ಕೂ ಮುನ್ನ ‘ಗೋಧಾವರಿ’ ಎಂಬ ಕತೆಯನ್ನು ಬರೆದು ಸ್ನೇಹಿತರ ಮುಂದೆ ಇಟ್ಟಾಗ, ಹಾಸ್ಟೇಲಿನ ದೋಸ್ತರೆಲ್ಲ ಅದನ್ನು ಓದಿ “ಚೊಲೋ ಬರ್ದಿ” ಎಂದು ಬೆನ್ನುತಟ್ಟಿದ್ದರು‌. ತುಷಾರ ಕಥಾ ಸ್ಪರ್ಧೆಗೆಂದು ಬರೆದಿದ್ದ ಕತೆ ಅದು. ಕೈಬರಹದಲ್ಲಿದ್ದ ಆ ಕತೆಯ ಪ್ರತಿಯನ್ನು, ಮತ್ತೊಮ್ಮೆ ಓದಿ ಕೊಡುವುದಾಗಿ ನನ್ನಿಂದು ಇಸಿದುಕೊಂಡು ಹೋದ ದೋಸ್ತ ಇನ್ನೂ ವಾಪಸ್ ಕೊಟ್ಟಿಲ್ಲ. ಮಂಜುನಾಯಕ ಚಳ್ಳೂರರ “ಫೂ” ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸಿಕ್ಕಿದ್ದು ಇದೇ ಸಂದರ್ಭದಲ್ಲಿ ಅವರ ಕಥಾಲೋಕದ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಇಲ್ಲಿ ಬಳ್ಳಿ, ಹೂವು, ಮೋಡ ಕೂಡ ಮಾತನಾಡುತ್ತವೆ: ಡಾ. ವಿಜಯಾ ಬರಹ

‘ಹೊರದಾರಿ’ಯಲ್ಲಿ ಬರುವ ದತ್ತು ಮಗುವಿನ ಸಮಸ್ಯೆ ಅನೇಕ ಸತ್ಯ ಘಟನೆಗಳನ್ನು ನೆನಪಿಸಿತು. ಇಂಥ ಸಮಸ್ಯೆಗಳಿಂದಲೇ ಇರಬೇಕು. ಈಗ ನಿಯಮಗಳು ತುಂಬಾ ಬಿಗಿಯಾಗಿವೆ. ಸುಲಭವಿಲ್ಲ ಮಗುವೊಂದನ್ನು ಪಡೆಯುವುದು. ಅದೇನೇ ಇರಲಿ ವಾಚ್ಯವಾಗಿ ಹೇಳದಿದ್ದರೂ ಹೆಣ್ಣು ಮಗುವೊಂದು ಮಾತ್ರ ಇನ್ನೊಂದು ಕರುಳಿನ ಕೂಗನ್ನು ಗ್ರಹಿಸಬಲ್ಲದು ಎಂದು ತೋರಿದ್ದೀರಿ. ಎಲ್ಲಕ್ಕಿಂತ ಮಿಗಿಲಾಗಿ ನನಗೆ ನೀವು ಕೊಡುವ ವಿವರಗಳು ಆಪ್ತವಾದವು. ಗಿಡ ಮರ ಬಳ್ಳಿಗಳ ಜೊತೆ ಮಾತಾಡಿಬಿಡುತ್ತೀರಿ!
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ” ಕುರಿತು ಡಾ. ವಿಜಯಾ ಬರಹ

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ