Advertisement

Tag: ಕನ್ನಡ ಸಾಹಿತ್ಯ

ಟೇಪ್‌ ರೆಕಾರ್ಡರ್ ವಿಥ್ ರೇಡಿಯೋ ಎಂಬ ಮಾಯಾಪೆಟ್ಟಿಗೆ: ಸುಧಾ ಆಡುಕಳ ಬರಹ

ಎಲ್ಲರ ಒಕ್ಕೊರಲ ಒತ್ತಾಯಕ್ಕೆ ಅಪ್ಪನೂ ಇಲ್ಲವೆನ್ನಲಾರದೇ ನಡುಅಂಗಳದಲ್ಲಿಯೇ ಚಾಪೆ ಹಾಸಿ, ಮದ್ದಲೆಯೊಂದಿಗೆ ಸಜ್ಜಾಗಿಯೇಬಿಟ್ಟರು. ಸುತ್ತ ಮುತ್ತಿದ ನೀರವ ಮೌನದ ನಡುವೆ ಅಪ್ಪ ಮದ್ದಲೆ ಬಡಿಯುತ್ತಾ, ದೊಡ್ಡ ದನಿಯಲ್ಲಿ “ವಿಘ್ನೇಶಾಯ ಸರಸ್ವತೈ ಪರ‍್ವತೈ ಗುರುವೇ ನಮಃ” ಎಂದು ಗಣಪತಿ ಪೂಜೆಯೊಂದಿಗೆ ಆರಂಭಿಸಿ, “ಸರಸಿಜಾಂಬಕಿಯರೇ ಕೇಳಿ” ಎಂಬ ಭೀಷ್ಮಪರ್ವದ ನಾಲ್ಕು ಹಾಡುಗಳನ್ನು ಹಾಡಿ ಇನ್ನು ಸಾಕು ಎಂಬಂತೆ ಕೈಸನ್ನೆ ಮಾಡಿದರು. ಇದನ್ನೇ ಕಾಯುತ್ತಿದ್ದ ಸಾಹೇಬರು ಟಕ್ ಎಂದು ರೆಕಾರ್ಡಿಂಗನ್ನು ಬಂದ್ ಮಾಡಿದರು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಡಾ. ಚಂದ್ರಮತಿ ಸೋಂದಾ ಬರೆಯುವ ಸರಣಿ “ಮಾತು ಮಂದಲಿಗೆ” ಆರಂಭ

ಅದೃಷ್ಟದ ಪೆನ್ನು ಎಂದು ತಮ್ಮ ಪೆನ್ನಿನ ಬಗ್ಗೆ ಬಹಳ ಮುತುವರ್ಜಿವಹಿಸುವುದೂ ಇದೆ. ಅದೇನಾದರೂ ಕಳೆದುಹೋಯಿತು ಅಂದ್ರೆ ಆಗ ನೋಡಬೇಕು ಭೂಮಿ ಆಕಾಶ ಒಂದು ಮಾಡುವ ಥರಾ ಕೂಗಾಡುವುದನ್ನು. ಸಿಗಲಿಲ್ಲ ಅಂದರೆ ಮನೆಮಂದಿಗೆಲ್ಲ ಮಂತ್ರಾಕ್ಷತೆ ಬೇರೆ. ಅವರ ಅವತಾರ ನೋಡಿದ್ರೆ ಏನೋ ಆಗಬಾರದ್ದು ಆಗಿದೆ ಅನ್ನುವ ರೀತಿ ನಡವಳಿಕೆ. ಪೆನ್ನು ಕೈಗೆ ಬಂತು ಅಂದರೆ ಎಲ್ಲವೂ ತಣ್ಣಗೆ. ಕೆಲವರ ಸಹಿಯನ್ನಂತೂ ಯಾರಿಗೂ ನಕಲು ಮಾಡಲು ಆಗದಂತಹುದು.
ಡಾ. ಚಂದ್ರಮತಿ ಸೋಂದಾ ಬರೆಯುವ ಹಳೆ ಕಾಲದ ನೆನಪುಗಳ ಸರಣಿ “ಮಾತು ಮಂದಲಿಗೆ” ಇಂದಿನಿಂದ ಮೂರುವಾರಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಒರಗಿಕೊಳ್ಳುವ ಮುನ್ನ….

ರಜಾದಿನಗಳ ಮಧ್ಯಾಹ್ನಗಳಲ್ಲಿ ನಾನು ಆಕೆ ಮನೆಯ ಆ ನೀಲಿ ಬಾಗಿಲನ್ನ ಧಡ ಧಡ ಬಡಿಯುತ್ತ ನಿಂತು ಬಿಡುತ್ತಿದ್ದೆ, ಮೊದಮೊದಲು, ಬಾಗಿಲು ತೆಗೆದು ಆಮೇಲ್ ಬಾ ಮಾಮ ಮಕ್ಕೊಂಡಾರು ಅನ್ನುತ್ತಿದ್ದ ಅಕ್ಕ, ಆಮೇಲೆ ಒಳಗಿನಿಂದಲೇ ಕೂಗಲು ಶುರು ಮಾಡಿದಳು. ಆನಂತರ ಉತ್ತರಿಸುವ ಗೋಜಿಗೂ ಹೋಗಲಿಲ್ಲ. ಆಗೆಲ್ಲ ಸಿಕ್ಕಾಪಟ್ಟೆ ಅವಮಾನವಾಗಿ ಕಣ್ಣು ತುಂಬಿಕೊಂಡು ಮನೆಗೆ ಹೋಗುತ್ತಿದ್ದೆ. ನನ್ನ ಅಳುವಿಗೆ ಕಾರಣ ಕೇಳುವಷ್ಟು ವ್ಯವಧಾನ ಯಾರಿಗೂ ಇರಲಿಲ್ಲ. ನನ್ನ ದೋಸ್ತರಾಗಿದ್ದ ಮರಗಳು ಕೂಡ ನನ್ನ ಹತ್ತಿರ ಮಾತು ಬಿಟ್ಟಂತೆ ನನಗೆ ಭಾಸವಾಗುತ್ತಿತ್ತು, ಯಾಕೆಂದರೆ ಅಕ್ಕ ಸಿಕ್ಕಿದ್ದೇ ಸಿಕ್ಕಿದ್ದು… ಮೌನವಾಗಿ ಮಾತನಾಡುವ ಸ್ನೇಹಿತರಿಗಿಂತ ಮಾತನಾಡುವ ಜೀವಕ್ಕೆ ನಾನು ಆದ್ಯತೆ ಕೊಟ್ಟಿದ್ದು ಅವಕ್ಕೂ ಸಿಟ್ಟು ಬಂದಿತ್ತೇನೋ.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಕಾಣೆಯಾಗಿದ್ದ ಟಿಬೆಟನ್ ಕ್ಯಾಂಪಿನ ಮೂವರು ಹಸುಳೆಗಳು ಇದೇ ಬಿಡಾರದ ಬಾಗಿಲು ತಟ್ಟಿ ಆಹಾರ ಕೋರಿದ್ದರು. ಕುಡಿದು ಬಿದ್ದಿದ್ದ ಈ ಆಸಾಮಿ ಕಣ್ಣೇ ಬಿಟ್ಟಿರಲಿಲ್ಲ. ಆತ ಕಣ್ಣು ಬಿಟ್ಟಾಗ ಆತನ ಮಡದಿ ಅದಾಗಲೇ ಲಾಮಾ ಮಕ್ಕಳ ಬಟ್ಟೆ ಬದಲಾಯಿಸಿ, ಬಿಸಿ ನೀರಲ್ಲಿ ಸ್ನಾನ ಮಾಡಿಸಿ, ಹೊಟ್ಟೆಗೆ ತಿನ್ನಲು ಕೊಟ್ಟು, ಅವರ ಕಾಷಾಯ ವಸ್ತ್ರಗಳನ್ನು ಒಗೆದು ಬಿಸಿಲಿಗೆ ಒಣಗಲು ಹಾಕಿ, ಅವರಿಗೆ ಕಂಬಳಿ ಹೊದೆಸಿ ಬೆಚ್ಚಗೆ ಮಲಗಿಸಿ ಅವರನ್ನು ಕಾದು ಕುಳಿತಿದ್ದಳು.
ಅಬ್ದುಲ್‌ ರಶೀದ್‌ ಬರೆದ ಕಥೆ “ಅಂತಾರಾಷ್ಟ್ರೀಯ ಕುಂಬಳಕಾಯಿ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ