Advertisement

Tag: ಕನ್ನಡ ಸಾಹಿತ್ಯ

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಹಕ್ಕಿನ ಒಕ್ಕೊರಲ ಕೂಗು…

ಪ್ರತಿಯೊಬ್ಬರ ಮನೆಯಲ್ಲಿ ಸಂವಿಧಾನ ಇರಬೇಕು. ಇಂದು ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಚಿತ್ರದಲ್ಲಿ ತೋರಿಸಿದ ಹಾಗೆ ಒಂದು ಹೋರಾಟಕ್ಕೆ ಮಾಧ್ಯಮ ಮತ್ತು ಸಂಘಟನೆಗಳು ತುಂಬಾ ಅವಶ್ಯಕ. ಈ ಎರಡು ಪ್ರಾಮಾಣಿಕವಾಗಿದ್ದರೆ ಯಶಸ್ಸು ಶತಸಿದ್ಧ. ಇಂದಿನ ಹೋರಾಟವು ದಾರಿ ತಪ್ಪುವುದಕ್ಕೆ ಕಾರಣ ಕೇವಲ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುವುದಕ್ಕಾಗಿ ಹೋರಾಟದ ದಿಕ್ಕನ್ನೇ ಬದಲಿಸುತ್ತಿರುವುದನ್ನು ಕಾಣುತ್ತೇವೆ.
ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

Read More

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಕಲ್ಪನೆ ವಾಸ್ತವಗಳ ಸಂಕ್ರಮಣದಲ್ಲಿ ಅರಿವಿನ ಅನಾವರಣ

ಇಲ್ಲಿ ಲೇಖಕ ಗಣೇಶಯ್ಯನವರು ತಮ್ಮ ವಿಶಿಷ್ಟ ಶೈಲಿಯ ಬರವಣಿಗೆಯಿಂದ ನಮ್ಮನ್ನು ಇಂತಹ ಪುಟ್ಟ ಕೀಟಗಳ ಸಂಸಾರ, ಸಮುದಾಯದೊಳು ಕರೆದೋಯ್ದು ನಾವೂ ಅವುಗಳಲ್ಲಿ ‘ಒಬ್ಬರು’ ಎಂಬ ಭಾವನೆಯನ್ನು ಬಿತ್ತಿ, ಅವುಗಳ ಜೀವನದ ಭಾಗವಾಗಿಸಿ, ಜಂಜಾಟದ ಜೋಕಾಲಿಯಲ್ಲಿ ನಮ್ಮನ್ನ ಜೀಕಿಸುತ್ತಾ ಅಲ್ಲಿನ ಅಚ್ಚರಿಗಳ ‘ಅರ್ಥ’ ಮಾಡಿಸುತ್ತಾರೆ, ವಾಸ್ತವದ ಅರಿವು ಮೂಡಿಸುತ್ತಾರೆ. ಒಂದು ರೀತಿಯಲ್ಲಿ ವಿಸ್ಮಯಕರ ವಿಷಯದ ವಿವರಗಳನ್ನು ಕಲ್ಪನೆಯ ಚಿತ್ರ ಮಂದಿರದಲ್ಲಿ ಕತೆಯ ಮೂಲಕ ಅನಾವರಣಗೊಳಿಸಿದಂತೆ.
ಡಾ. ಕೆ.ಎನ್. ಗಣೇಶಯ್ಯ ಬರೆದ “ಹಾತೆ-ಜತೆ-ಕತೆ” ಕೃತಿಯ ಕುರಿತು ವಿಶ್ವ ದೊಡ್ಡಬಳ್ಳಾಪುರ ಬರಹ

Read More

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ