Advertisement

Tag: ಕಾದಂಬರಿ

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್‌ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಪ್ರಾಣಪಕ್ಷಿಗಳು ಹಾರಿಹೋದವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೊನೆಗೆ ರಾತ್ರಿ 12 ಗಂಟೆಗೆ ಯೂನಿಫಾರ್ಮ್ ಬಟ್ಟೆ ಕಾಣಿಸಿಕೊಂಡಿತು. ನಿಧಾನವಾಗಿ ಉಸಿರಿಡಿದುಕೊಂಡು ಬಾಬು ದೇವವನ್ನು ಕಲ್ಲುಮಣ್ಣಿನ ಕೆಳಗಿಂದ ಹೊರಕ್ಕೆ ತೆಗೆದು ನೋಡಿದರು! ಆತನ ದೇಹದ ಮೇಲಿನ ಯೂನಿಫಾರ್ಮ್ ಬಟ್ಟೆಗಳು ರಕ್ತದಿಂದ ಹೆಪ್ಪು ಕಟ್ಟಿಕೊಂಡಿದ್ದವು. ದೇಹ ನುಜ್ಜುಗುಜ್ಜಾಗಿ ಹೋಗಿತ್ತು. ದೊಡ್ಡ ಕಲ್ಲುಮಣ್ಣಿನ ರಾಶಿ ಅವನ ಮೇಲೆ ಕುಸಿದು ಬಿದ್ದು ಕೆಲವೇ ನಿಮಿಷಗಳಲ್ಲಿ ಅವನ ಪ್ರಾಣಪಕ್ಷಿ ಹಾರಿಹೋಗಿತ್ತು. ಅವನ ದೇಹವನ್ನು ನೋಡಿದ ಕಾರ್ಮಿಕರು ಸ್ವಲ್ಪ ಹೊತ್ತು ಏನೂ ಮಾತನಾಡದೆ ವಿದ್ಯುತ್ ಶಾಕ್ ಹೊಡೆದುಕೊಂಡಂತೆ ಹಾಗೇ ನಿಂತುಕೊಂಡೇ ಇದ್ದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಕಪ್ಪು ನೆಲದಲ್ಲಿ ಹುಟ್ಟಿಕೊಂಡಿತು ಚಿನ್ನದ ನಗರ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಎಲ್ಲರೂ ಅವರನ್ನೇ ನೋಡುತ್ತಿದ್ದರು. ಸೆಲ್ವಿಗೆ ಬೇರೆ ದಾರಿ ಕಾಣದೇ ಇನ್ನೊಂದು ಕೈಯಲ್ಲಿದ್ದ ಪುಸ್ತಕಗಳನ್ನು ನೆಲಕ್ಕೆ ಹಾಕಿ ಮಣಿ ಕೆನ್ನೆಗೆ ಜೋರಾಗಿ ಬಾರಿಸಿದಳು. ಬಾರಿಸಿದ ಏಟಿಗೆ ಆ ಮರದಲ್ಲಿದ್ದ ಹಕ್ಕಿಗಳೆಲ್ಲ ಹಾರಿಹೋದವು. ಸುತ್ತಲೂ ನಿಂತು ನೋಡುತ್ತಿದ್ದ ಹುಡುಗರಲ್ಲಿ ಕೆಲವರು ತಮ್ಮ ಕೆನ್ನೆಗಳನ್ನು ಮುಟ್ಟಿನೋಡಿಕೊಂಡು ಕಣ್ಣುಕಣ್ಣುಬಿಟ್ಟರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಮೂರನೆಯ ಕಂತು ನಿಮ್ಮ ಓದಿಗೆ

Read More

ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ